ವೈಜ್ಞಾನಿಕತೆ ಮೈಗೂಡಿಸಿಕೊಂಡು ಮೂಢನಂಬಿಕೆಯ‌‌ ಸಂಕೋಲೆಯಿಂದ ಹೊರಬನ್ನಿ: ಡಾ.‌ ಹುಲಿಕಲ್ ನಟರಾಜ

ಕಲಬುರಗಿ: ನಗರದ ಪ್ರತಿಷ್ಠಿತ ಹೈ.ಕ.ಶಿಕ್ಷಣ ಸಂಸ್ಥೆಯ ಶ್ರೀಮತಿ ವಿ.ಜಿ.ಮಹಿಳಾ ಪದವಿ ಮಹಾವಿದ್ಯಾಲಯದ ವಿಜ್ಞಾನ ಪೋರಂ,ರಾಷ್ಟ್ರೀಯ ಸೇವಾ ಯೋಜನೆಯ ಅ ಮತ್ತು ಬ ಘಟಕಗಳು ಹಾಗೂ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು (ರಿ) ಕಲಬುರಗಿ ಇವರ ಸಹಯೋಗದೊಂದಿಗೆ ಪವಾಡ ರಹಸ್ಯ ಬಯಲು ಕಾರ್ಯಕ್ರಮ ಗುರುವಾರ ಆಯೋಜಿಸಲಾಗಿತ್ತು.
ಮುಖ್ಯ ಸಂಪನ್ಮೂಲ ವ್ಯಕ್ತಿಗಳಾಗಿ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ರಾಜ್ಯಾಧ್ಯಕ್ಷ ಡಾ.ಹುಲಿಕಲ್ ನಟರಾಜ್ ಅವರು ವೈಜ್ಞಾನಿಕತೆ, ವೈಚಾರಿಕತೆಯನ್ನು ಅಳವಡಿಸಿಕೊಳ್ಳಳಬೇಕು ಎಂದು ವಿದ್ಯಾರ್ಥಿನೀಯರಿಗೆ ಕಿವಿ ಮಾತು ಹೇಳಿದರು.
ಮುಂದುವರೆದು ಮಾತನಾಡಿದ ಅವರು ಕಾಲೇಜಿನ ವಿಜ್ಞಾನ ಪೊರಂ ಹಾಗೂ ಎನ್.ಎಸ್.ಎಸ್.ಘಟಕಗಳು ಇಂತಹ ವೈಚಾರಿಕ ಕಾರ್ಯವನ್ನು ಆಯೋಜಿಸಿ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಿ ಅಂಧಕಾರ,ಅಜ್ಞಾನ ಮೂಢನಂಬಿಕೆ ಹೊಡೆದೊಡಿಸಲು ಎಲ್ಲರು ಸೇರಿ  ಪ್ರಯತ್ನಿಸೋಣ ಎಂದು ಹಲವು ಪ್ರಾತ್ಯಕ್ಷಿಕೆಯನ್ನು ಪ್ರದರ್ಶಿಸಿಸುತ್ತಾ ತಮ್ಮ ಉಪನ್ಯಾಸ ವನ್ನು ನೀಡಿದರು.
ಕ.ರಾ.ವೈ.ಸ.ಪರಿಷತ್ತು ಕಲಬುರಗಿ ಜಿಲ್ಲಾ ಘಟಕದ ಅಧ್ಯಕ್ಷ ಶ್ರೀ ರವಿಂದ್ರ ಶಾಬಾದಿ, ಪ್ರಧಾನ ಕಾರ್ಯದರ್ಶಿ ಡಾ.ಶಿವರಂಜನ ಸತ್ಯಂಪೇಟೆ, ಡಾ.ವೀಣಾ ಹೆಚ್, ಪ್ರೊ.ರವೀಂದ್ರ ವೈ. ಎನ್.ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಸಮಾರಂಭದ ಅಧ್ಯಕ್ಷತೆಯನ್ನು ಪ್ರಾಚಾರ್ಯರಾದ ಡಾ.ರಾಜೇಂದ್ರ ಬಿ.ಕೊಂಡಾ ವಹಿಸಿಕೊಂಡಿದ್ದರು. ಎನ್.ಎಸ್.ಎಸ್. ಘಟಕದ ಕಾರ್ಯಕ್ರಮಾಧಿಕಾರಿ ಡಾ.ಮಹೇಶ ಗಂವ್ಹಾರ ಅತಿಥಿಗಳನ್ನು ಪರಿಚಯಿಸಿ ಸ್ವಾಗತಿಸಿದರು. ಡಾ.ಶಾಂತಾ ಮಠ ನಿರೂಪಿಸಿದರು. ಪ್ರೊ.ಶಿವಲೀಲಾ ಧೋತ್ರೆ ವಂದಿಸಿದರು.
ಮಹಾವಿದ್ಯಾಲಯದ ಬೋಧಕ,ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು, ಪರಿಷತ್ತಿನ ಸದಸ್ಯರು ಭಾಗವಹಿದ್ದರು ಎಂದು ಡಾ.ಮೋಹನರಾಜ ಪತ್ತಾರ  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
emedialine

Recent Posts

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

46 mins ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

6 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

17 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

19 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

19 hours ago

ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿ; ಮತ್ತಿಮಡು

ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…

19 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420