ಕನ್ನಡ ರಾಜ್ಯೋತ್ಸವದ ಜೊತೆಗೆ ಪುನೀತ್ ನುಡಿ ನಮನ ಕಾರ್ಯಕ್ರಮ

0
3

ತೊರ‍್ನಹಳ್ಳಿ: ಮಾಲೂರು ತಾಲ್ಲೂಕಿನ ಕಸಬಾ ಹೋಬಳಿ ತೊರ‍್ನಹಳ್ಳಿ ಗ್ರಾಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಆಟೋ ಚಾಲಕರ ಸಂಘದ ವತಿಯಿಂದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಹಾಗೂ ಪುನೀತ್ ರಾಜಕುಮಾರ್ ರವರಿಗೆ ನುಡಿ ನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರತಿ ಕನ್ನಡಿಗನ, ಕರುನಾಡಿದ ಹೆಮ್ಮೆಯ ದಿನ ಕನ್ನಡ ರಾಜ್ಯೋತ್ಸವ. ಪ್ರತಿ ವರ್ಷ ನವೆಂಬರ್ 1ರಂದು ನಾಡಿನಾದ್ಯಂತ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತಿದೆ.ಕನ್ನಡದ ಇತಿಹಾಸ, ಮಹತ್ವ, ಹೋರಾಟಗಳ ಬಗ್ಗೆ ಮುಂದಿನ ಪೀಳಿಗೆಗೆ ತಿಳಿಸುವ ಉದ್ದೇಶದಿಂದ ಹಾಗೂ ಕರ್ನಾಟಕದ ಏಕೀಕರಣಕ್ಕೆ ಹೋರಾಡಿದ ಮಹನೀಯರನ್ನು ಸ್ಮರಿಸುವ ಉದ್ದೇಶದಿಂದ ಕನ್ನಡ ರಾಜ್ಯೋತ್ಸವ ಅತ್ಯಂತ ಮಹತ್ವವನ್ನು ಪಡೆದುಕೊಂಡಿದೆ. ಎಂದು ರಾಮಕೃಷ್ಣರವರು ತಿಳಿಸಿದರು.

Contact Your\'s Advertisement; 9902492681

ಕನ್ನಡ ರಾಜ್ಯೋತ್ಸವದ ಕಾರ್ಯಕ್ರಮದ ಜೊತೆಗೆ ಕರುನಾಡಿನ ಹೆಮ್ಮೆಯ ನಾಯಕ ನಟ ಪುನೀತ್ ರಾಜಕುಮಾರ್ ರವರಿಗೆ ನಮನಗಳನ್ನು ಈ  ಸಲ್ಲಿಸಲಾಯಿತು. ಕನ್ನಡನಾಡು ಒಬ್ಬ ಉತ್ತಮ ನಟನನ್ನು ಕಳೆದುಕೊಂಡಿದೆ, ಕನ್ನಡನಾಡು ನುಡಿಗೆ ಡಾ. ರಾಜಕುಮಾರ್ ಮನೆತನದ ಕೊಡುಗೆ ಅಪಾರವಾಗಿದೆ ಎಂದು ಭುವನೇಶ್ವರಿ ಕಲಾ ಸಂಘದ ಅಧ್ಯಕ್ಷ ಮಾಳಿಗಾಚಾರ್ ತಿಳಿಸಿದರು.

ಈ ಸಂದರ್ಭದಲ್ಲಿ ಊರಿನ ಜನರಿಗೆ ಊಟದ ವ್ಯವಸ್ಥೆಯನ್ನು ಮಾಡಲಾಗಿತ್ತು. ಕನ್ನಡ ಧ್ವಜಗಳನ್ನು ಹಾಗೂ ಪುನೀತ್ ರಾಜಕುಮಾರ್ ಭಾವಚಿತ್ರವನ್ನು ಆಟೋಗಳಲ್ಲಿ ಕಟ್ಟಿ ಊರೆಲ್ಲ ಮೆರವಣಿಗೆ ಮಾಡಲಾಯಿತು.

ಈ ಸಂದರ್ಭದಲ್ಲಿ ತೊರ‍್ನಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ ಮುನಿಯಪ್ಪ, ಸದಸ್ಯರಾದ ಸಿ.ವಿ.ವೆಂಕಟರಮಣಪ್ಪ, ಕರವೇ ತಾಲ್ಲೂಕು ಸಂಘಟನಾ ಕಾರ್ಯದರ್ಶಿ ರಾಮಕೃಷ್ಣಪ್ಪ, ಆಟೋ ಘಟಕದ ಕಾರ್ಯದರ್ಶಿ ಮುನಿನಾರಾಯಣಪ್ಪ, ಗೌರವಾಧ್ಯಕ್ಷ ವೆಂಕಟರಮಣಪ್ಪ, ಖಜಾಂಚಿ ಪೆರುಮಾಳಪ್ಪ, ಕಾರ್ಯದರ್ಶಿ ನಜೀರ್, ಉಪಾಧ್ಯಕ್ಷ ಅನ್ವರ್, ಆಟೋ ಸಲ್ಲಪ್ಪ, ಕರವೇ ಯುವ ಘಟಕದ ಅಧ್ಯಕ್ಷ ಕೀರ್ತಿ, ಉಪಾಧ್ಯಕ್ಷ ಗೌತಮ್, ಭುವನೇಶ್ವರಿ ಕಲಾ ಸಂಘದ ಅಧ್ಯಕ್ಷ ಮಾಳಿಗಾಚಾರ್, ದಿವಾಕರ್, ವೆಂಕಟೇಶ್, ಹಾಗೂ ಗ್ರಾಮಸ್ಥರು, ಕರವೇ ಸಂಘದ ನಿರ್ದೇಶಕರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here