ಜಿಲ್ಲಾ ಹೆಚ್ಚುವರಿ ನ್ಯಾಯಾಲಯ ಸ್ಥಾಪನೆಗೆ ಹೈಕೋರ್ಟ್ ನ್ಯಾಯಧೀಶರಿಗೆ ಮನವಿ

ಸುರಪುರ : ನಗರದಲ್ಲಿರುವ ತಾಲೂಕು ನ್ಯಾಯಾಲಯದಲ್ಲಿ ಜಿಲ್ಲಾ ಹೆಚ್ಚುವರಿ ನ್ಯಾಯಾಲಯ ಸ್ಥಾಪಿಸುವಂತೆ ತಾಲೂಕು ನ್ಯಾಯವಾದಿಗಳ ಸಂಘದ ನಿಯೋಗ ಹೈಕೋರ್ಟ್ ಗೌರವಾನ್ವಿತ ನ್ಯಾಯಾಧೀಶರಾದ ಹಾಗೂ ಯಾದಗಿರಿ ಜಿಲ್ಲಾ ಆಡಳಿತಾತ್ಮಕ ನ್ಯಾಯಾಧೀಶರಾದ ಇ. ಎಸ್, ಇಂದ್ರೇಶ್ ಅವರಿಗೆ ಮನವಿ ಸಲ್ಲಿಸಿದರು.

ಯಾದಗಿರಿ ನಗರಕ್ಕೆ ಆಗಮಿಸಿದ್ದ ನ್ಯಾಯಾಧೀಶರನ್ನು ಭೇಟಿ ಮಾಡಿದ ಸಂಘದ ಅಧ್ಯಕ್ಷರಾದ ಹಾಗೂ ವಕೀಲರಾದ ಬಿ. ಎಚ್, ಕಿಲ್ಲೇದಾರ ಅವರ ನೇತೃತ್ವದ ನಿಯೋಗ ಮನವಿ ಪತ್ರ ಸಲ್ಲಿಸಿ, ‘ಜಿಲ್ಲೆಯಲ್ಲಿ ಸುರಪುರ ತಾಲೂಕು ವ್ಯಾಪ್ತಿ ಹಿರಿದಾಗಿದೆ. ಸುರಪುರ ತಾಲೂಕನ್ನು ವಿಭಾಗಿಸಿ ಹುಣಸಗಿ ನೂತನ ತಾಲೂಕು ಸ್ಥಾಪನೆಯಾಗಿದೆ. ಹುಣಸಗಿ ಕಕ್ಷಿದಾರರು ಜಿಲ್ಲಾ ನ್ಯಾಯಾಲಯಕ್ಕೆ ಬರಬೇಕಾದರೆ ಕನಿಷ್ಠ ನೂರು ಕಿಲೋಮೀಟರ್ ಪ್ರಯಾಣಿಸಬೇಕಾದ ಅನಿವಾರ್ಯತೆ ಇದೆ.

ಹಾಗಾಗಿ, ಸುರಪುರದಲ್ಲಿಯೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಸ್ಥಾಪನೆ ಮಾಡಿದರೆ ಎರಡೂ ತಾಲೂಕಿನ ವಕೀಲರಿಗೆ ಹಾಗೂ ಕಕ್ಷಿದಾರರಿಗೆ ಅನುಕೂಲವಾಗಲಿದೆ’ ಎಂದು ಸಂಘದ ಪದಾಧಿಕಾರಿಗಳು ಮಾನ್ಯ ನ್ಯಾಯಾಧೀಶರಿಗೆ ಮನವರಿಕೆ ಮಾಡಿದರು. ಅಲ್ಲದೆ ಪ್ರಸ್ತುತ ನ್ಯಾಯಾಲಯದ ಕಟ್ಟಡ ಪಟ್ಟಣದಿಂದ ಸ್ವಲ್ಪ ದೂರದಲ್ಲಿದ್ದು ರಾತ್ರಿಯ ವೇಳೆ ಮೀಸಲು ಪೊಲೀಸ್ ಭದ್ರತೆ ಒದಗಿಸಲು ಅಗತ್ಯ ಕ್ರಮಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ಸೂಚಿಸಬೇಕು ಎಂದು ಇದೇ ಸಂದರ್ಭದಲ್ಲಿ ಮನವಿ ಮಾಡಲಾಯಿತು.

ತಾಲೂಕು ನ್ಯಾಯಾಲಯದ ಕಟ್ಟಡ ಎಲ್ಲ ಮೂಲಭೂತ ಸೌಲಭ್ಯಗಳನ್ನು ಹೊಂದಿದ್ದು ಯಾದಗಿರಿ ಜಿಲ್ಲೆಗೆ ಈಗಾಗಲೇ ಒಂದು ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಮಂಜೂರಾಗಿದ್ದು ಅದನ್ನು ಸುರಪುರದ ತಾಲೂಕು ನ್ಯಾಯಾಲಯದ ಕಟ್ಟಡದಲ್ಲಿ ಸ್ಥಾಪಿಸುವಂತೆ ವಕೀಲರ ನಿಯೋಗ ಒತ್ತಾಯಿಸಿತು.

ಸಂಘದ ಸದಸ್ಯರ ಮನವಿಯನ್ನು ಆಲಿಸಿದ ಮಾನ್ಯ ನ್ಯಾಯಾಧೀಶರು ಪರಿಶೀಲನೆ ಮಾಡುವುದಾಗಿ ಭರವಸೆ ನೀಡಿದರು. ನಿಯೋಗದಲ್ಲಿ ವಕೀಲರಾದ ದೇವಿಂದ್ರಪ್ಪ ಬೇವಿನಕಟ್ಟಿ, ಉದಯ್ ಸಿಂಗ್, ನಂದನಗೌಡ ಪಾಟೀಲ್, ಮಹಮ್ಮದ್ ಹುಸೇನ್, ರಮಾನಂದ ಕವಲಿ, ನಂದಣ್ಣ ಬಾಗ್ಲಿ, ವಿ.ಎಸ್. ಬೈಚಬಾಳ, ಯಲ್ಲಪ್ಪ ಹುಲಕಲ್, ಗೋಪಾಲ ತಳವಾರ, ಆದಪ್ಪ ಹೊಸಮನಿ, ಅಶೋಕ ಕವಲಿ, ಹಾಗೂ ಜಿ.ಆರ್. ಬನ್ನಾಳ ಇದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

6 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

8 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

8 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

8 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

9 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

9 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420