ಡಾ: ಶ್ರೀ ಶಿವಕುಮಾರ ಮಹಾಸ್ವಾಮಿಗಳವರ ಗದ್ದುಗೆಗೆ ಹೆಲಿಕಾಪ್ಟರ್ ಮುಖಾಂತರ ಲಕ್ಷ ಪುಷ್ಪ ಬಿಲ್ವಾರ್ಚನೆ : ಪಾಟೀಲ

0
18

ಕಲಬುರಗಿ: ಪ್ರಶಾಂತ್ ಕಲ್ಲೂರ್ ನೇತೃತ್ವದ ವೀರಶೈವ ಲಿಂಗಾಯತ ಯುವ ವೇದಿಕೆಯು ಕಳೆದ ಒಂದು ದಶಕದಿಂದ ಸಮುದಾಯ ಸಂಘಟನೆಯಲ್ಲಿ ನಿರಂತರವಾಗಿ ಕಾರ್ಯ ನಿರ್ಮಿಸಿಕೊಂಡು ಬರುತ್ತಿದೆ. ಅದರ ಭಾಗವಾಗಿ ಬರುವ ೨೯ ೧೧ ೨೦೨೧ ರಂದು ಕಾರ್ತಿಕ್ ಮಾಸದ ಕೊನೆಯ ಸೋಮವಾರ ದಂದು ಶ್ರೀ ಕ್ಷೇತ್ರ ಸಿದ್ದಗಂಗಾ ಮಠದಲ್ಲಿ ಭುವನದ ಭಾಗ್ಯ ಕರ್ನಾಟಕ ರತ್ನ ಪದ್ಮಭೂಷಣ ತ್ರಿವಿಧ ದಾಸೋಹಿ ಡಾಕ್ಟರ್ ಶ್ರೀಶ್ರೀಶ್ರೀ ಶಿವಕುಮಾರ ಮಹಾಸ್ವಾಮಿಗಳವರ ಗದ್ದುಗೆಗೆ ಲಕ್ಷ ಪುಷ್ಪ ಬಿಲ್ವಾರ್ಚನೆ ಕಾರ್ಯಕ್ರಮ ಹಾಗೂ ಶ್ರೀಗಳ ಗದ್ದುಗೆಗೆ ಹೆಲಿಕಾಪ್ಟರ್ ಮುಖಾಂತರ ಪುಷ್ಪಾರ್ಚನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಸೋಮವಾರ ಬೆಳಗ್ಗೆ ೫:೩೦ ರಿಂದ ಪುಷ್ಪ ಬಿಲ್ವಾರ್ಚನೆ ೧೨:೩೦ಕ್ಕೆ ಮಹಾಮಂಗಳಾರತಿ ೧ ಘಂಟೆಗೆ ಪೂಜ್ಯರ ಗದ್ದುಗೆಗೆ ಹೆಲಿಕಾಪ್ಟರ್ ಮುಖಾಂತರ ಪುಷ್ಪಾರ್ಚನೆ ಕಾರ್ಯಕ್ರಮ ನೆರವೇರಿಸಲಾಗುವುದು ಪೂಜ್ಯರ ಗದ್ದುಗೆಯ ಮುಂಭಾಗದಲ್ಲಿ ೪೫ ಅಡಿಯ ಪೂಜ್ಯರ ಕಟೌಟ್ ನಿಲ್ಲಿಸಲಾಗುವುದು ಈ ಬಾರಿಯ ವಿಶೇಷತೆ.

Contact Your\'s Advertisement; 9902492681

ಪ್ರಸಕ್ತ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳು ಶ್ರೀ ಕ್ಷೇತ್ರ ತುಮಕೂರು ಸಿದ್ದಗಂಗಾ ಮಠ ಅವರು ವಹಿಸಲಿದ್ದು, ಸುತ್ತೂರು ಮಹಾಸಂಸ್ಥಾನ ಮಠದ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ಕಾರ್ಯಕ್ರಮಕ್ಕೆ ಆಗಮಿಸಲಿದ್ದು, ರಾಜ್ಯದ ನಾನಾ ಭಾಗಗಳಿಂದ ೫೦ಕ್ಕೂ ಹೆಚ್ಚು ಹರಗುರು ಚರಮೂರ್ತಿಗಳು ಭಾಗವಹಿಸಲಿದ್ದಾರೆ ರಾಜಕಾರಣಿಗಳು ಸಿನಿಮಾ ಕಲಾವಿದರು ಸಮಾಜಸೇವಕರು ಶ್ರೀ ಸಿದ್ದಗಂಗಾ ಮಠದ ಸದ್ಭಕ್ತರು ಕಾರ್ಯಕ್ರಮಕ್ಕೆ ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಲಿರುವ ಐತಿಹಾಸಿಕ ಕಾರ್ಯಕ್ರಮ ಇದ್ದಾಗಿದೆ ಇ ಐತಿಹಾಸಿಕ ಕಾರ್ಯಕ್ರಮಕ್ಕೆ ಕಲಬುರ್ಗಿ ಜಿಲ್ಲೆಯ ಶ್ರೀ ಸಿದ್ದಗಂಗಾ ಮಠದ ವಿದ್ಯಾರ್ಥಿಗಳು, ಭಕ್ತ ವೃಂದ ಭಾಗಿಯಾಗಬೇಕೆಂದು ವೀರಶೈವ ಲಿಂಗಾಯತ ಯುವ ವೇದಿಕೆ ಜಿಲ್ಲಾ ಸಮಿತಿಯ ಜಿಲ್ಲಾಧ್ಯಕ್ಷ ದಯಾನಂದ ಎಂ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here