2023ಕ್ಕೆ ಮತ್ತೆ ಹೆಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿ : ಬಾಲರಾಜ್ ಗುತ್ತೆದಾರ

0
91

ಸೇಡಂ: 2023ಕ್ಕೆ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಹೆಚ್.ಡಿ. ಕುಮಾರ ಸ್ವಾಮಿ ಅಧಿಕಾರ ಸ್ವಿಕಾರ ಮಾಡುವ ಮೂಲಕ ಜೆಡಿಎಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಸೇಡಂ ಮತಕ್ಷೇತ್ರದ ಜೆಡಿಎಸ್ ಮುಖಂಡ ಬಾಲರಾಜ ಗುತ್ತೆದಾರ ವಿಶ್ವಾಸ ವ್ಯಕ್ತಪಡಿಸಿದ್ದರು.

ಸೇಡಂ ಪಟ್ಟಣದ ಜೆಡಿಎಸ್ ಪಕ್ಷದ ಕಛೇರಿಯಲ್ಲಿ ಕೊರಡಂಪಳ್ಳಿ ಗ್ರಾಮದ ಹಿರಿಯರು ಹಾಗೂ ಯುವಕರು ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷ ತೊರೆದು ಬಾಲರಾಜ ಗುತ್ತೆದಾರ ಸಮ್ಮುಖದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

Contact Your\'s Advertisement; 9902492681

ಈ ವೇಳೆ ಬಾಲರಾಜ ಗುತ್ತೆದಾರ ಮಾತನಾಡಿ ಸೇಡಂ ಮತಕ್ಷೇತ್ರದಲ್ಲಿ ಅನೇಕ ಯುವಕರು, ಹಿರಿಯರು ನಾವು ಮಾಡುತ್ತಿರವ ಕಾರ್ಯಗಳನ್ನು ಮೆಚ್ಚಿ ಪಕ್ಷಕೆ ಸೇರ್ಪಡೆಆಗುವ ಮೂಲಕ ನಮ್ಮಗೆ ಪ್ರೋತ್ಸಾಹಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಸೇಡಂ ಮತಕ್ಷೇತ್ರದ ನಿರುದ್ಯೋಗಿ ಯುವಕರಿಗೆ ಸ್ಥಳಿಯ ಸಿಮೆಂಟ್ ಕಾರ್ಖಾನೆಗಳಲ್ಲಿ ಉದ್ಯೊಗ ನೀಡಲು ಒತ್ತಾಯಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಜೊತೆಗೆ ಇಗಾಗಲೆ ಜನರ ಸಮಸ್ಯೆ ಅರಿಯಲು ಕ್ಷೇತ್ರದ 133 ಗ್ರಾಮಗಳಲ್ಲಿ ಪಾದಯಾತ್ರೆ ಕೈಗೊಂಡಿರುವೆ. ಮೊದಲ ಹಂತವಾಗಿ ಪಟ್ಟಣದ 23 ವಾರ್ಡಗಳಲ್ಲಿ ಈಗಾಗಲೇ ಪಾದಯಾತ್ರೆ ಕೈಗೊಂಡಿದೇನೆ. ಇ ಮೂಲಕ ಜನರಿಗೆ ಮೂಲಭೂತ ಸೌಕರ್ಯ ಒದಗಿಸುವ ಕೆಲಸ ಮಾಡುವೆ ಎಂದರು.

ಈ ಸಂದರ್ಭದಲ್ಲಿ ಪಕ್ಷದ ಕಾರ್ಯಧ್ಯಕ್ಷರಾದ ಶಿವರಾಮ ರೆಡ್ಡಿ ಮುಧೋಳ, ಜಗನ್ನಾಥ ರೆಡ್ಡಿ ಗೋಟ್ಟೂರ, ಪವನ ಕೇರಿ, ರೇವಣಸಿದ್ದ ಪೂಜಾರಿ, ಬಸವರಾಜ ಸಜ್ಜನ, ಶಂಕರ, ಸೋಮಶೇಖರ ಪೂಜಾರಿ, ವಿಜಯಕುಮಾರ ಐನಾಪೂರ, ಹಣಮಯ್ಯ ಗುತ್ತೇದಾರ ಸೇರಿದಂತೆ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here