ದೇಶದ್ರೋಹಿಗಳನ್ನು ಗಡಿಪಾರು ಮಾಡಿ : ಸಂವಿಧಾನವೇ ಅಕ್ಷಯ ಪಾತ್ರ-ಧರ್ಮಗ್ರಂಥ

ಶಹಾಬಾದ :ಡಾ.ಬಿ.ಆರ್.ಅಂಬೇಡ್ಕರ್ ರಚಿಸಿದ ಸಂವಿಧಾನ ವಿಶ್ವದಲ್ಲಿಯೇ ವಿಶಿಷ್ಟ ವೈವಿಧ್ಯಮಯವಾಗಿದ್ದು ಸರ್ವ ಸಮುದಾಯಗಳಿಗೆ ಸಮಾನತೆಯನ್ನು ನೀಡುವುದರ ಮೂಲಕ ವಿಶ್ವಕ್ಕೆ ಮಾದರಿಯಾಗಿದೆ ಎಂದು ನಗರಸಭೆಯ ಪೌರಾಯುಕ್ತ ಡಾ.ಕೆ.ಗುರಲಿಂಗಪ್ಪ ಹೇಳಿದರು.

ಅವರು ನಗರದ ಸಮಾಜ ಕಲ್ಯಾಣ ಇಲಾಖೆಯ ಹನುಮಾನ ನಗರದ ಬಾಲಕರ ವಸತಿ ನಿಲಯದಲ್ಲಿ ಸಂವಿಧಾನ ಸಮರ್ಪಣೆ ದಿನದ ನಿಮಿತ್ತ ಸಂವಿಧಾನದ ಮಹತ್ವದ ಕುರಿತು ಆಯೋಜಿಸಲಾದ ವಿಚಾರ ಸಂಕೀರಣ ಕಾರ್ಯಕ್ರಮದಲ್ಲಿ ಮುಖ್ಯ ಉಪನ್ಯಾಸಕರಾಗಿ ಮಾತನಾಡಿದರು.
ಅಂಬೇಡ್ಕರ್ ಅವರು ಹಲವಾರು ದೇಶಗಳನ್ನು ಸುತ್ತಿ, ಹಗಲಿರುಳು ಶ್ರಮಿಸಿ ಭಾರತಕ್ಕೆ ಬೇಕಾದ ಸಂವಿಧಾನ ರಚಿಸಿದ್ದರಿಂದಲೇ ಇಂದು ನಾವು ನಿವೇಲ್ಲ ನೆಮ್ಮದಿಯ ಜೀವನ ನಡೆಸುತ್ತಿದ್ದೆವೆ.ಇದು ನಮಗೆ ಅಕ್ಷಯ ಪಾತ್ರೆ ಇದ್ದಂತೆ.ನಮ್ಮ ಪಾಲಿಗೆ ಸಂವಿಧಾನವೇ ಧರ್ಮಗ್ರಂಥವಾಗಿದ್ದು ಸರ್ವಸ್ವವೂ ಆಗಿದೆ ಎಂದರು.

ವಸತಿ ನಿಲಯದ ಮೇಲ್ವಿಚಾರಕ ರವಿಕುಮಾರ ಮುತ್ತಗಿ ಮಾತನಾಡಿ, ಸಂವಿಧಾನ ಇಡೀ ದೇಶದ ಜನತೆಯ ಜೀವನವನ್ನು ರೂಪಿಸುವ ಸಾಮರ್ಥ್ಯ ಹೊಂದಿದೆ.ಕೇಂದ್ರ, ರಾಜ್ಯ ಸರಕಾರದ ಅಧಿಕಾರ ವ್ಯಾಪ್ತಿ, ತುರ್ತು ಪರಿಸ್ಥಿತಿ ಹೇರಿಕೆ, ರಾಷ್ಟ್ರಪತಿ ಆಳ್ವಿಕೆಯ ಬಗ್ಗೆ ಸೂಕ್ತ ನಿದೇರ್ಶನ ನೀಡಿದೆ.ವಿದ್ಯಾರ್ಥಿಗಳು ಇದರ ಅಧ್ಯಯನ ಮಾಡಬೇಕು.ಅಲ್ಲದೇ ಸೂಕ್ತ ಸಂವಿಧಾನ ಹೊಂದದ ನೆರೆಯ ಪಾಕಿಸ್ತಾನ, ಚೈನಾದಲ್ಲಿ ಆಡಳಿತಗಾರರು ಹಲವು ಬಾರಿ ನ್ಯಾಯಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಾರೆ.ಪಾಕ್‌ನಲ್ಲಿ ಕೆಲವೊಮ್ಮೆ ಸೈನ್ಯಾಡಳಿಯ ಹೇರಲಾಗುತ್ತದೆ.ಚೈನಾದಲ್ಲಿ ಸ್ವಾತಂತ್ರ್ಯ ಕೇಳಿದರೆ ಜನರ ಧ್ವನಿಯನ್ನು ಹೊಸಕಿ ಹಾಕಲಾಗುತ್ತದೆ.ಇಂತಹ ದುಸ್ಥಿತಿ ಭಾರತದಲ್ಲಿ ಬಾರದೇ ಇರಲು ಶ್ರೇಷ್ಠ ಸಂವಿಧಾನವೇ ಕಾರಣವಾಗಿದೆ.

ಉಪನ್ಯಾಸಕ ಪೂಜಾರಿ ಮೇತ್ರೆ ಮಾತನಾಡಿ, ಶಾಂತಿ ಸೌಹಾರ್ದತೆಯ ಪ್ರತೀಕ, ಸಮಾನತೆಯಿಂದ ಕೂಡಿದ ಭಾರತದ ಸಂವಿಧಾನ ಇತರ ದೇಶಗಳಿಗೆ ಮಾದರಿಯಾಗಿದೆ.ಇಂತಹ ಸಂವಿಧಾನವನ್ನು ಅರ್ಥೈಸದ ಕೆಲ ಕೋಮುವಾದಿಗಳು ಸಂವಿಧಾನ ಬದಲಾವಣೆ ಮಾಡುವ ಹೇಳಿಕೆ ನೀಡುತ್ತಿದ್ದಾರೆ.ಇದು ದೇಶದ್ರೋಹಿ ಹೇಳಿಕೆಯಾಗಿದೆ ಅಂಥವರನ್ನು ಗಡಿಪಾರು ಮಾಡಬೇಕು. ಸಂವಿಧಾನದ ರಕ್ಷಣೆಗಾಗಿ ನಾವೆಲ್ಲರೂ ಒಂದಾಗಿ ಹೋರಾಟ ಮಾಡುವ ಅಗತ್ಯವಿದೆ ಎಂದು ಹೇಳಿದರು. ಅತಿಥಿಗಳಾಗಿ ಅಲ್ಲಮಪ್ರಭು ಸೇರಿದಂತೆ ವಸತಿ ನಿಲಯದ ವಿದ್ಯಾರ್ಥಿಗಳು ಹಾಜರಿದ್ದರು.

ಸಿದ್ದು ನಿರೂಪಿಸಿದರು, ಮರಲಿಂಗಪ್ಪ ಸ್ವಾಗತಿಸಿದರು, ಶ್ರೀಧರ ವಂದಿಸಿದರು.

emedialine

Recent Posts

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

46 mins ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

6 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

17 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

19 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

19 hours ago

ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿ; ಮತ್ತಿಮಡು

ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…

19 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420