ಸುರಪುರ: ಭಾವಸಾರ ಕ್ಷತ್ರೀಯ ಸಮಾಜ ಮತ್ತು ಕನ್ನಡ ಮತ್ತು ಸಂಸ್ಕೃತಿಕ ಇಲಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ ನಗರದ ರಂಗಂಪೇಟೆಯ ಅಂಬಾಭವಾನಿ ದೇವಸ್ಥಾನದಲ್ಲಿ ಸಂಗೀತ ಸಂಜೆ ಕಾರ್ಯಕ್ರಮ ನಡೆಸಲಾಯಿತು.
ಕಾರ್ಯಕ್ರಮಕ್ಕೆ ಪಂಡೀತ ಜನಾರ್ಧನರಾವ್ ಪಾಣಿಭಾತೆ ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ,ಸಂಗೀತದ ಹುಟ್ಟು ಹಾಗು ರಾಗ,ತಾಳ,ಭಾವಗಳ ಕುರಿತು ವಿವರಣೆ ನೀಡಿ ಸಂಗೀತ ಒಂದು ಗಂಧರ್ವ ವಿದ್ಯೆ ಇದ್ದಂತೆ ಅದನ್ನು ಶ್ರದ್ಧೆಯಿಂದ ಕಲಿತಾಗ ಮಾತ್ರ ಸಿದ್ಧಿಸಲಿದೆ ಎಂದರು.
ಮುಖಂಡರಾದ ಅರುಣಕುಮಾರ ಪುಲ್ಸೆ,ಶಂಕರರಾವ್ ಮಹೇಂದ್ರಕರ್,ವೀಣಾ ಟಿ ಮಾಳದಕರ್,ಸಾವಿತ್ರಿಬಾಯಿ ಅಂಬುರೆ ವೇದಿಕೆ ಮೇಲಿದ್ದರು.ಭೂಮದೇವ್ ಮಹೇಂದ್ರಕರ್,ವಿಶ್ವನಾಥ ಅಂಬುರೆ,ಭೀಮರಾವ್ ಪತಂಗೆ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಕಲಾವಿದರಾದ ಶಿವಶರಣಯ್ಯ ಬಳುಂಡಗಿಮಠ,ಮೋಹನ ಮಾಳದಕರ್,ಉಮೇಶ ಯಾದವ್,ಸುರೇಶ ಅಂಬುರೆ ಇವರುಗಳು ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು.
ಕಾರ್ಯಕ್ರಮದಲ್ಲಿ ಕಲಾವಿದರಾದ ಚಂದ್ರಹಾಸ್ ಮಿಠ್ಠಾ,ಮಹಾಂತೇಶ ಶಹಾಪುರಕರ್,ಜಗದೀಶ ಮಾನು,ಪ್ರಾಣೇಶ ಕುಲಕರ್ಣಿ,ಶಿವಶಂಕರ ಅಲ್ಲೂರ್,ಚನ್ನಮಲ್ಲಿಕಾರ್ಜುನ ಗುಂಡಾನೂರ್,ರಮೇಶ ಕುಲಕರ್ಣಿ ಭಾಗವಹಿಸಿದ್ದರು.ಜಗದೀಶ ಪತ್ತಾರ ನಿರೂಪಿಸಿದರು,ಶ್ರೀನಿವಾಸ ದಾಯಫುಲ್ ವಂದಿಸಿದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…