ಕಲಬುರಗಿ: ಕಳೆದ ಜುಲೈ-ಸೆಪ್ಟೆಂಬರ್ ಮಾಹೆಯಲ್ಲಿ ಬಿದ್ದ ಭಾರಿ ಮಳೆಯಿಂದ ಜಿಲ್ಲೆಯಲ್ಲಿ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದ್ದು, ಇದೂವರೆಗೆ ಆರು ಕಂತುಗಳಲ್ಲಿ 79,673 ಫಲಾನುಭವಿಗಳಿಗೆ 68.67 ಕೋಟಿ ರೂ. ಇನಪುಟ್ ಸಬ್ಸಿಡಿಯನ್ನು ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಜಮೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ ತಿಳಿಸಿದ್ದಾರೆ.
ಜಿಲ್ಲೆಯ ಕಲಬುರಗಿ, ಕಾಳಗಿ, ಚಿಂಚೋಳಿ, ಚಿತ್ತಾಪೂರ, ಆಳಂದ, ಅಫಜಲಪೂರ ಜೇವರ್ಗಿ, ಶಹಾಬಾದ, ಸೇಡಂ ಹಾಗೂ ಯಡ್ರಾಮಿ ತಾಲೂಕುಗಳಲ್ಲಿ ಬೆಳೆ ಹಾನಿಗೊಳಗಾಗಿದ್ದವು. ಕಂದಾಯ ಮತ್ತು ಕೃಷಿ ಇಲಾಖೆಯು ಜಂಟಿ ಸಮೀಕ್ಷೆ ನಡೆಸಿ ಸುಮಾರು 2,32,872 ಹೆಕ್ಟೇರ್ ಬೆಳೆ ಹಾನಿಯಾದ ಕಾರಣ ಬೆಳೆ ಪರಿಹಾರಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು.
ಬೆಳೆ ಪರಿಹಾರಕ್ಕಾಗಿ ರೈತರ ಮಾಹಿತಿಯನ್ನು ಭೂಮಿ ಪರಿಹಾರ ತಂತ್ರಾಂಶದಲ್ಲಿ ದಾಖಲು ಮಾಡಲಾಗಿದ್ದು, ಇದೀಗ 7ನೇ ಹಂತದಲ್ಲಿ 9,715 ಫಲಾನುಭವಿಗಳಿಗೆ 747.85 ಲಕ್ಷ ಇನ್ ಪುಟ್ ಸಬ್ಸಿಡಿಯನ್ನು ಜಮೆ ಮಾಡಲು ಅನುಮೋದನೆ ದೊರೆತಿದೆ.
ಶೀಘ್ರದಲ್ಲಿಯೇ ರೈತರ ಬ್ಯಾಂಕ್ ಖಾತೆಗಳಿಗೆ 747.85 ಲಕ್ಷ ರೂ. ಪರಿಹಾರ ಧನವನ್ನು ಜಮೆ ಮಾಡಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನವದೆಹಲಿ: ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಜಗದೇವ ಗುತ್ತೇದಾರ ಕಾಳಗಿ ರವರು ಎಐಸಿಸಿ ಅಧ್ಯಕ್ಷರು…
ಕಲಬುರಗಿ: ಕರ್ನಾಟಕ ಸರ್ಕಾರವು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ರಾಷ್ಟ್ರೀಯ ವೈದ್ಯರ ದಿನಾಚರಣೆಯ ಅಂಗವಾಗಿ ಪ್ರತಿ ವರ್ಷ ಜುಲೈ…
ಕಲಬುರಗಿ: ‘ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಸ್ಥಾನವನ್ನು ಮುಸ್ಲಿಂ ಸಮುದಾಯಕ್ಕೆ ನೀಡಬೇಕು. ಮುಂಬರುವ ದಿನಗಳಲ್ಲಿ ಬರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ…
ಕಲಬುರಗಿ: ವಚನ ಪಿತಾಮಹ ಎಂದು ಕರೆಸಿಕೊಳ್ಳುವ ಡಾ. ಫ.ಗು. ಹಳಕಟ್ಟಿ ಯವರು ಬಸವಾದಿ ಶರಣರ ವಚನ ಸಾಹಿತ್ಯವನ್ನು ಸಂರಕ್ಷಣೆ ಮಾಡುವ…
ಶಹಾಬಾದ: ಖಾಸಗಿ ಟೆಲಿಕಾಂ ಕಂಪನಿಗಳು ಮೊಬೈಲ್ ರೀಚಾರ್ಜ್ಗಳ ಬೆಲೆಗಳನ್ನು ಅನಿಯಂತ್ರಿತವಾಗಿ ಹೆಚ್ಚಳ ಮಾಡಿರುವುದನ್ನು ತಕ್ಷಣವೇ ಹಿಂಪಡೆಯಬೇಕೆಂದು ಆಗ್ರಹಿಸಿ ಎಐಡಿವಾಯ್ಓ ವತಿಯಿಂದ…
ಶಹಾಬಾದ :ಎಲ್ಲರಿಗೂ ಸರಕಾರಿ ನೌಕರಿ ಬೇಕು.ಆದರೆ ಸರಕಾರಿ ಶಾಲೆಯಲ್ಲಿ ನಿಮ್ಮ ಮಕ್ಕಳು ಓದುವುದು ಬೇಡ ಎಂದರೆ ಹೇಗೆ ? ಮೊದಲು…