ಮಳಿಗೆ ಉದ್ಘಾಟನೆ ಮೂಲಕ ಮತದಾನ ಜಾಗೃತಿ

0
130

ಕಲಬುರಗಿ: ಲೋಕಸಭೆ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಜಾಗೃತಿ ಮೂಡಿಸುವ ಮತ್ತು ಪ್ರಜಾಪ್ರಭುತ್ವದ ಡೊಡ್ಡ ಹಬ್ಬದಲ್ಲಿ ಸಕ್ರೀಯವಾಗಿ ಪ್ರತಿ ಪ್ರಜೆಯೂ ಪಾಲ್ಗೊಳ್ಳಬೇಕೆಂಬ ಉದ್ದೇಶದಿಂದ ಕಲಬುರಗಿ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಸ್ಥಾಪಿಸಲಾದ ಮತದಾರ ಜಾಗೃತಿ ಅಭಿಯಾನ ಮಳಿಗೆಯನ್ನು ರವಿವಾರ ಜಿಲ್ಲಾ ಚುನಾವಣಾಧಿಕಾರಿ ಆರ್.ವೆಂಕಟೇಶ ಕುಮಾರ ಉದ್ಘಾಟಿಸಿದರು.

ಮಳಿಗೆಯನ್ನು ವೀಕ್ಷಿಸಿದ ನಂತರ ಮಾತನಾಡಿದ ಜಿಲ್ಲಾ ಚುನಾವಣಾಧಿಕಾರಿ ಆರ್.ವೆಂಕಟೇಶ ಕುಮಾರ ಅವರು, ಪ್ರಸಕ್ತ ಲೋಕಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ಯಾವುದೇ ಮತದಾರ ಮತದಾನದಿಂದ ಹೊರಗುಳಿಯಬಾರದು ಎಂಬುದು ಚುನಾವಣಾ ಆಯೋಗದ ಧ್ಯೇಯವಾಗಿದೆ. ಈ ನಿಟ್ಟಿನಲ್ಲಿ ಮತದಾರರಿಗೆ ಶಿಕ್ಷಣ, ಜಾಗೃತಿ ಮೂಡಿಸಲು ಹತ್ತಾರು ಕಾರ್ಯಕ್ರಮಗಳನ್ನು ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದು, ಅದಕ್ಕೆ ಹೊಸದಾಗಿ ಈ ಜಾಗೃತಿ ಅಭಿಯಾನ ಸೇರ್ಪಡೆಯಾಗಿದೆ.

Contact Your\'s Advertisement; 9902492681

ಮೂರು ದಿನ ಮಳಿಗೆ ಪ್ರದರ್ಶನ:- ಏಪ್ರಿಲ್ ೧೪ ರಿಂದ ೧೬ರ ವರೆಗೆ ಮೂರು ದಿನಗಳ ಕಾಲ ಬೆಳಿಗ್ಗೆ ೮ ರಿಂದ ರಾತ್ರಿ ೮ ಗಂಟೆ ವರೆಗೆ ಜಾಗೃತಿ ಅಭಿಯಾನದ ಪ್ರದರ್ಶನ ಮಳಿಗೆ ಸಾರ್ವಜನಿಕರು ಮತ್ತು ಪ್ರಯಾಣಿಕರ ವೀಕ್ಷಣೆಗೆ ಮುಕ್ತವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜನರು ಭೇಟಿ ನೀಡಬೇಕು. ಏಪ್ರಿಲ್ ೨೩ ರಂದು ನಡೆಯುವ ಚುನಾವಣೆಯಲ್ಲಿ ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ಕರೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಡಾ.ರಾಜಾ ಪಿ., ಮಹಾನಗರ ಪಾಲಿಕೆಯ ಆಯುಕ್ತೆ ಫೌಜಿಯಾ ಬಿ. ತರನ್ನುಮ, ಸಹಾಯಕ ಆಯುಕ್ತ ರಾಹುಲ ತುಕಾರಾಮ ಪಾಂಡ್ವೆ, ಐ.ಎ.ಎಸ್. ಪ್ರೊಬೇಷನರಿ ಸ್ನೇಹಲ್ ಸುಧಾಕರ ಲೋಖಂಡೆ, ಈ.ಕ.ರ.ಸಾ.ಸಂಸ್ಥೆಯ ಅಧಿಕಾರಿಗಳು ಇದ್ದರು.

ಗಮನ ಸೆಳೆದ ರೇಖಾಚಿತ್ರಗಳು:- ಮಳಿಗೆಯಲ್ಲಿ ಈ ಬಾರಿ ರೇಖಾಚಿತ್ರದಿಂದ ಮೂಡಿಸಲಾದ ಚಿತ್ರಗಳು ನೋಡುಗರ ಗಮನ ಸೆಳೆದವು. ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ.ಚಂದ್ರಶೇಖರ ಕಂಬಾರ ಅವರ ಓದು ವ್ಯಕ್ತಿತ್ವವನ್ನು ರೂಪಿಸುತ್ತದೆ ಮತದಾನ ದೇಶವನ್ನು ರೂಪಿಸುತ್ತದೆ ತಪ್ಪದೆ ಮತದಾನ ಮಾಡಿ, ಚಿತ್ರನಟಿ ಪ್ರಣಿತ ಸುಭಾಷ ಅವರ ಮತದಾನ ಮಾಡಿದರೆ ಹೆಣ್ಣು ತೆರೆಯುವುದು ದೇಶದ ಕಣ್ಣು ಎಂಬ ಸಂದೇಶಗಳು ಸಾರ್ವಜನಿಕರ ಮನ ಮುಟ್ಟುವಂತಿವೆ. ಇನ್ನು ಇದೇ ಮೊದಲ ಬಾರಿಗೆ ಚುನಾವಣಾ ಅಕ್ರಮಗಳಿಗೆ ಕಡಿವಾಣ ಹಾಕಲು ಆಯೋಗವು ಸಿ ವಿಜಿಲ್ ಆಪ್ ಹಾಗೂ ಚುನಾವಣಾ ಆಪ್ ಸಹ ಅಭಿವೃದ್ಧಿಪಡಿಸಿದ್ದು, ಅದರ ಕಾರ್ಯನಿರ್ವಹಣೆ ಬಗ್ಗೆಯೂ ಇಲ್ಲಿ ಪ್ರಸ್ತುತಪಡಿಸಲಾಗಿದೆ. ಇದೇ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಹೊರತರಲಾದ ರೇಖೆಗಳಲ್ಲಿ ಚುನಾವಣೆ-೨೦೧೯ ಎಂಬ ಕಿರು ಹೊತ್ತಿಗೆ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ಕರಪತ್ರಗಳನ್ನು ಸಾರ್ವಜನಿಕರಿಗೆ ವಿತರಿಸಲಾಯಿತು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here