ಬಿಸಿ ಬಿಸಿ ಸುದ್ದಿ

ಮಳಿಗೆ ಉದ್ಘಾಟನೆ ಮೂಲಕ ಮತದಾನ ಜಾಗೃತಿ

ಕಲಬುರಗಿ: ಲೋಕಸಭೆ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಜಾಗೃತಿ ಮೂಡಿಸುವ ಮತ್ತು ಪ್ರಜಾಪ್ರಭುತ್ವದ ಡೊಡ್ಡ ಹಬ್ಬದಲ್ಲಿ ಸಕ್ರೀಯವಾಗಿ ಪ್ರತಿ ಪ್ರಜೆಯೂ ಪಾಲ್ಗೊಳ್ಳಬೇಕೆಂಬ ಉದ್ದೇಶದಿಂದ ಕಲಬುರಗಿ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಸ್ಥಾಪಿಸಲಾದ ಮತದಾರ ಜಾಗೃತಿ ಅಭಿಯಾನ ಮಳಿಗೆಯನ್ನು ರವಿವಾರ ಜಿಲ್ಲಾ ಚುನಾವಣಾಧಿಕಾರಿ ಆರ್.ವೆಂಕಟೇಶ ಕುಮಾರ ಉದ್ಘಾಟಿಸಿದರು.

ಮಳಿಗೆಯನ್ನು ವೀಕ್ಷಿಸಿದ ನಂತರ ಮಾತನಾಡಿದ ಜಿಲ್ಲಾ ಚುನಾವಣಾಧಿಕಾರಿ ಆರ್.ವೆಂಕಟೇಶ ಕುಮಾರ ಅವರು, ಪ್ರಸಕ್ತ ಲೋಕಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ಯಾವುದೇ ಮತದಾರ ಮತದಾನದಿಂದ ಹೊರಗುಳಿಯಬಾರದು ಎಂಬುದು ಚುನಾವಣಾ ಆಯೋಗದ ಧ್ಯೇಯವಾಗಿದೆ. ಈ ನಿಟ್ಟಿನಲ್ಲಿ ಮತದಾರರಿಗೆ ಶಿಕ್ಷಣ, ಜಾಗೃತಿ ಮೂಡಿಸಲು ಹತ್ತಾರು ಕಾರ್ಯಕ್ರಮಗಳನ್ನು ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದು, ಅದಕ್ಕೆ ಹೊಸದಾಗಿ ಈ ಜಾಗೃತಿ ಅಭಿಯಾನ ಸೇರ್ಪಡೆಯಾಗಿದೆ.

ಮೂರು ದಿನ ಮಳಿಗೆ ಪ್ರದರ್ಶನ:- ಏಪ್ರಿಲ್ ೧೪ ರಿಂದ ೧೬ರ ವರೆಗೆ ಮೂರು ದಿನಗಳ ಕಾಲ ಬೆಳಿಗ್ಗೆ ೮ ರಿಂದ ರಾತ್ರಿ ೮ ಗಂಟೆ ವರೆಗೆ ಜಾಗೃತಿ ಅಭಿಯಾನದ ಪ್ರದರ್ಶನ ಮಳಿಗೆ ಸಾರ್ವಜನಿಕರು ಮತ್ತು ಪ್ರಯಾಣಿಕರ ವೀಕ್ಷಣೆಗೆ ಮುಕ್ತವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜನರು ಭೇಟಿ ನೀಡಬೇಕು. ಏಪ್ರಿಲ್ ೨೩ ರಂದು ನಡೆಯುವ ಚುನಾವಣೆಯಲ್ಲಿ ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ಕರೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಡಾ.ರಾಜಾ ಪಿ., ಮಹಾನಗರ ಪಾಲಿಕೆಯ ಆಯುಕ್ತೆ ಫೌಜಿಯಾ ಬಿ. ತರನ್ನುಮ, ಸಹಾಯಕ ಆಯುಕ್ತ ರಾಹುಲ ತುಕಾರಾಮ ಪಾಂಡ್ವೆ, ಐ.ಎ.ಎಸ್. ಪ್ರೊಬೇಷನರಿ ಸ್ನೇಹಲ್ ಸುಧಾಕರ ಲೋಖಂಡೆ, ಈ.ಕ.ರ.ಸಾ.ಸಂಸ್ಥೆಯ ಅಧಿಕಾರಿಗಳು ಇದ್ದರು.

ಗಮನ ಸೆಳೆದ ರೇಖಾಚಿತ್ರಗಳು:- ಮಳಿಗೆಯಲ್ಲಿ ಈ ಬಾರಿ ರೇಖಾಚಿತ್ರದಿಂದ ಮೂಡಿಸಲಾದ ಚಿತ್ರಗಳು ನೋಡುಗರ ಗಮನ ಸೆಳೆದವು. ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ.ಚಂದ್ರಶೇಖರ ಕಂಬಾರ ಅವರ ಓದು ವ್ಯಕ್ತಿತ್ವವನ್ನು ರೂಪಿಸುತ್ತದೆ ಮತದಾನ ದೇಶವನ್ನು ರೂಪಿಸುತ್ತದೆ ತಪ್ಪದೆ ಮತದಾನ ಮಾಡಿ, ಚಿತ್ರನಟಿ ಪ್ರಣಿತ ಸುಭಾಷ ಅವರ ಮತದಾನ ಮಾಡಿದರೆ ಹೆಣ್ಣು ತೆರೆಯುವುದು ದೇಶದ ಕಣ್ಣು ಎಂಬ ಸಂದೇಶಗಳು ಸಾರ್ವಜನಿಕರ ಮನ ಮುಟ್ಟುವಂತಿವೆ. ಇನ್ನು ಇದೇ ಮೊದಲ ಬಾರಿಗೆ ಚುನಾವಣಾ ಅಕ್ರಮಗಳಿಗೆ ಕಡಿವಾಣ ಹಾಕಲು ಆಯೋಗವು ಸಿ ವಿಜಿಲ್ ಆಪ್ ಹಾಗೂ ಚುನಾವಣಾ ಆಪ್ ಸಹ ಅಭಿವೃದ್ಧಿಪಡಿಸಿದ್ದು, ಅದರ ಕಾರ್ಯನಿರ್ವಹಣೆ ಬಗ್ಗೆಯೂ ಇಲ್ಲಿ ಪ್ರಸ್ತುತಪಡಿಸಲಾಗಿದೆ. ಇದೇ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಹೊರತರಲಾದ ರೇಖೆಗಳಲ್ಲಿ ಚುನಾವಣೆ-೨೦೧೯ ಎಂಬ ಕಿರು ಹೊತ್ತಿಗೆ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ಕರಪತ್ರಗಳನ್ನು ಸಾರ್ವಜನಿಕರಿಗೆ ವಿತರಿಸಲಾಯಿತು.

emedialine

Recent Posts

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

3 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

9 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

19 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

21 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

21 hours ago

ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿ; ಮತ್ತಿಮಡು

ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…

21 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420