ಶಹಾಬಾದ: ಸಮೀಪದ ಹೊನಗುಂಟಾ ಗ್ರಾಮದಲ್ಲಿ ಶುಕ್ರವಾರ ನಿಜಶರಣ ಅಂಬಿಗರ ಚೌಡಯ್ಯ ಯುವಕ ಸಂಘದ ವತಿಯಿಂದ ದಿ.ವಿಠ್ಠಲ ಹೇರೂರ ಅವರ ಪುಣ್ಯಸ್ಮರಣೆ ಕಾರ್ಯಕ್ರಮ ಆಚರಿಸಲಾಯಿತು.
ಹೊನಗುಂಟಾ ಕೋಲಿ ಸಮಾಜದ ಅಧ್ಯಕ್ಷ ದೇವಿಂದ್ರ ಕಾರೋಳ್ಳಿ ಮಾತನಾಡಿ, ರಾಜ್ಯದಾದ್ಯಂತ ಸುಧೀರ್ಘವಾಗಿ ನಾಲ್ಕು ದಶಕಗಳ ಕಾಲ ತಮ್ಮ ಬದುಕಿನಲ್ಲಿ ಕೋಲಿ (ಕಬ್ಬಲಿಗ) ಸಮಾಜವನ್ನು ಎಸ್.ಟಿ ಸೇರಿಸಲು ಹೋರಾಟ ಮಾಡುವುದರ ಜೊತೆಗೆ ರಾಜಕೀಯ ಶೈಕ್ಷಣಿಕ ಅಭಿವೃದ್ಧಿಗಾಗಿ ಮುಂದೆ ಬರಲು ಕೋಲಿ ಸಮಾಜವನ್ನು ಮುಖ್ಯ ವಾಹಿನಿಗೆ ತಂದಿರುತಕ್ಕಂತ ಮಹಾನ ನಾಯಕ ಅವರು. ಇಂಥ ಮಹಾನ್ ನಾಯಕನನ್ನು ನಾವು ಕಳೆದುಕೊಂಡಿದ್ದೇವೆ. ಹೇರೂರ ಅವರಿಗೆ ಸಮಾಜದ ಬಗ್ಗೆ ಇರುವ ಕಾಳಜಿ ನಾವೆಂದು ಮರೆಯುವಂತಿಲ್ಲ. ಅವರ ವಿಚಾರಗಳನ್ನು ನಮ್ಮ ಆದರ್ಶವನ್ನಾಗಿಟ್ಟು ನಾವು ಹೇರೂರರವರು ಹಾಕಿದ ಮಾರ್ಗದಲ್ಲಿ ನಡೆಯಬೇಕೆಂದು ಹೇಳಿದರು.
ಹೊನಗುಂಟಾ ಮಾಜಿ ಗ್ರಾಮ ಪಂಚಾಯತಿ ಸದಸ್ಯ ಶಿವಕುಮಾರ ಬುರ್ಲಿ, ಶರಣು ಹಲಕರ್ಟಿ, ಭೀಮಣ್ಣಾ ಗೆಜ್ಜಿ, ಮಲ್ಲಿಕಾರ್ಜುನ ಹೈಯಾಳ, ಬಲಭೀಮ ಕಾರೋಳ್ಳಿ, ಗ್ರಾ.ಪಂ.ಸದಸ್ಯ ರಾಜು ಸಣಮೋ, ಸಾಯಬಣ್ಣ ಕೊಲ್ಲೂರ್, ಇತರರು ಇದ್ದರು.
ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ. ಎಂ ಎಸ್ ಪಾಸೋಡಿ ಅವರು ಜಪಾನ್…
ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು…
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…