ಸುರಪುರ:ಸರ್ಕಾರಿ ಬಾಲಕರ ಪ್ರೌಢಶಾಲೆಯಲ್ಲಿ ಫಿಟ್ ಇಂಡಿಯಾ ಸಪ್ತಾಹ

0
17

ಸುರಪುರ: ನಗರದ ಸರ್ಕಾರಿ ಬಾಲಕರ ಪ್ರೌಢ ಶಾಲೆಯಲ್ಲಿ ಆಜಾದಿ ಕಾ ಅಮೃತ್ ಮಹೋತ್ಸವದ ಅಂಗವಾಗಿ ಫೀಟ್ ಇಂಡಿಯಾ ಸಪ್ತಾಹ ಕಾರ್ಯಕ್ರಮ ನಡೆಸಲಾಯಿತು.

ಶನಿವಾರ ನಡೆದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಉಪ ಪ್ರಾಚಾರ್ಯ ಯಲ್ಲಪ್ಪ ಕಾಡ್ಲೂರ್ ಮಾತನಾಡಿ,ಪ್ರಧಾನ ಮಂತ್ರಿಯವರು ಹಾಗು ಕೇಂದ್ರ ಸರಕಾರ ೭೫ನೇ ಸ್ವಾತಂತ್ರ್ಯ ಮಹೋತ್ಸವದ ಸಂದರ್ಭದಲ್ಲಿ ಆಜಾದಿ ಕಾ ಅಮೃತ್ ಮಹೋತ್ಸವದ ಅಂಗವಾಗಿ ಫಿಟ್ ಇಂಡಿಯಾ ಸಪ್ತಾಹ ಕಾರ್ಯಕ್ರಮವನ್ನು ಆಚರಿಸುವಂತೆ ಆದೇಶಿಸಿದ ಪ್ರಯುಕ್ತವಾಗಿ ಎಲ್ಲೆಡೆಯು ಕಾರ್ಯಕ್ರಮವನ್ನು ನಡೆಸುತ್ತಿದ್ದು,ಅದರಂತೆ ನಮ್ಮ ಶಾಲೆಯಲ್ಲಿ ಆರು ಕಾರ್ಯಕ್ರಮಗಳನ್ನು ನಡೆಸುವ ಮೂಲಕ ವಿದ್ಯಾರ್ಥಿಗಳಲ್ಲಿ ಕೌಶಲ್ಯ ಬೆಳೆಸುವ ಮತ್ತು ದೈಹಿಕ ಹಾಗು ಮಾನಸಿಕ ಆರೋಗ್ಯದಾಯಕ ಮನೋಭಾವ ಬೆಳವಣಿಗೆ ಹಾಗು ದೇಶಪ್ರೇಮ ಬೆಳೆಸುವಂತಹ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದರು.

Contact Your\'s Advertisement; 9902492681

ನಂತರ ಶಾಲೆಯ ಎಲ್ಲಾ ಶಿಕ್ಷಕರು ಹಾಗು ವಿದ್ಯಾರ್ಥಿಗಳು ಫಿಟ್ ಇಂಡಿಯಾ ಸಪ್ತಾಹದ ಅಂಗವಾಗಿ ’ನಾವು ಪ್ರತಿದಿನ ದೈಹಿಕ ಚಟುವಟಿಕೆಗಳಲ್ಲಿ ಮತ್ತು ಕ್ರೀಡೆಗಳಲ್ಲಿ ಭಾಗವಹಿಸುವುದರ ಮೂಲಕ ಆರೋಗ್ಯಕರ ಮತ್ತು ಸದೃಢವಾದ ಸಮಾಜ ನಿರ್ಮಾಣ ಮಾಡುತ್ತೇವೆ ಅಲ್ಲದೆ ಇತರರನ್ನು ಸಹ ಕ್ರೀಡೆಗಳಲ್ಲಿ ಭಾಗವಹಿಸುವಂತೆ ಮಾಡಿ ಅವರನ್ನು ದೈಹಿಕ ಮತ್ತು ಮಾನಸಿಕವಾಗಿ ಸದೃಢಗೊಳಿಸಲು ಸಹಕಾರಿಯಾಗುತ್ತೇವೆಂದು’ ಪ್ರತಿಜ್ಞೆ ಬೋಧಿಸಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ದೈಹಿಕ ಶಿಕ್ಷಕರಾದ ನಿಂಗಪ್ಪ ಪೂಜಾರಿ ಮತ್ತು ಜೋಗಪ್ಪ ವೇದಿಕೆ ಮೇಲಿದ್ದರು.ಶಿಕ್ಷಕರಾದ ವಸಂತಕುಮಾರ ಕೆ.ಎಲ್ ಸ್ವಾಗತಿಸಿದರು,ಲಕ್ಷ್ಮಣ ಬಿರಾದಾರ ನಿರೂಪಿಸಿದರು,ಜಯರಾಮ್ ಚವ್ಹಾಣ್ ವಂದಿಸಿದರು.ಶಾಲೆಯ ಎಲ್ಲಾ ಶಿಕ್ಷಕರು ಹಾಗು ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here