ನನ್ನಿಂದ ಓದೋಕೆ ಆಗುತ್ತಿಲ್ಲ ಅಪ್ಪ, ಅಮ್ಮ ಕ್ಷಮೀಸಿ ಬಿಡಿ’ ಎಂದು ಡೆತ್ ನೋಟ್ ಬರೆದಿಟ್ಟು ವಿದ್ಯಾರ್ಥಿ ಆತ್ಮಹತ್ಯೆ

0
42

ಕಲಬುರಗಿ: ನನ್ನಿಂದ ಓದೋಕೆ ಆಗುತ್ತಿಲ್ಲ ಅಪ್ಪ, ಅಮ್ಮ ಕ್ಷಮೀಸಿ ಬಿಡಿ’ ಎಂದು ಡೆತ್‌ನೋಟ್ ಬರೆದಿಟ್ಟು ನೇಣಿಗೆ ಶರಣಾಗಿರುವ ಘಟನೆ ನಗರದ ನಾಗನಹಳ್ಳಿ ಪೋಲಿಸ್ ತರಬೇತಿ ಕೇಂದ್ರದ ವಸತಿ ಗೃಹದಲ್ಲಿ ನಡೆದಿದೆ.

ಮಂಜುನಾಥ ಮಾರುತಿ ಆತ್ಮಹತ್ಯೆ ಮಾಡಿಕೊಂಡ ಯುವಕ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ತಿಗಟಿ ಗ್ರಾಮದ ಪೋಲಿಸ್ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿಗಾಗಿ ಈ ಯುವಕನನ್ನು ಆತನ ಪೋಷಕರು ತಂದು ಬಿಟ್ಟಿದ್ದರು ಎನ್ನಲಾಗಿದೆ.

Contact Your\'s Advertisement; 9902492681

ತರಬೇತಿಗಾಗಿ ನಾಗನಹಳ್ಳಿ ತರಬೇತಿ ಕೇಂದ್ರದ ಅಧಿಕಾರಿಯೋರ್ವರ ಮನೆಯಲ್ಲಿದ್ದ ಈ ಯುವಕ ಯಾರು ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡು ಆತ್ಮ ಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

ಈ ಕುರಿತಂತೆ ವಿಶ್ವವಿದ್ಯಾಲಯ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಾವಿಗೆ ನಿಖರ ಕಾರಣ ಬಗ್ಗೆ ತನಿಖೆ ನಡೆಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here