ಬಿಸಿ ಬಿಸಿ ಸುದ್ದಿ

ಹಾರಕೂಡ ಶ್ರೀಗಳಿಂದ ವಿಜಯಮುಖಿ ಕೃತಿ ಲೋಕಾರ್ಪಣೆ

ಕಲಬುರಗಿ: ತಾವು ಸ್ಥಾಪಿಸಿದ ವಿಶ್ವಜ್ಯೋತಿ ಪ್ರತಿಷ್ಠಾನಕ್ಕೆ 11 ವರ್ಷ. ತಮ್ಮ ಹುಟ್ಟಿನ 40 ವರ್ಷದ ಅಂಗವಾಗಿ ಅರ್ಥಪೂರ್ಣ ಕಾರ್ಯಕ್ರಮ ಹಮ್ಮಿಕೊಂಡ ವಿಜಯಕುಮಾರ ತೇಗಲತಿಪ್ಪಿ ಅವರ ಕುರಿತು 11 ಜನ ಲೇಖಕರು ಬರೆದ ವಿಜಯಮುಖಿ ಕೃತಿಯಲ್ಲಿ ತೇಗಲತಿಪ್ಪಿ ಅವರ ಸಾಮಾಜಿಕ, ಸಾಹಿತ್ಯ ಸಂಘಟನೆಗಳ ಸಮಗ್ರ ಚಿತ್ರಣ ವಿದೆ ಎಂದು ಹಾರಕೂಡದ ಡಾ. ಚನ್ದನವೀರ ಸ್ವಾಮಿಯವರು ಅಭಿಪ್ರಾಯಪಟ್ಟರು.

ಬೀದರ್ ಜಿಲ್ಲೆಯ ಬಸವ ಕಲ್ಯಾಣ ತಾಲ್ಲೂಕಿನ ಹಾರಕೂಡ ಸುಕ್ಷೇತ್ರದಲ್ಲಿ ವಿಶ್ವಜ್ಯೋತಿ ಪ್ರತಿಷ್ಠಾನದ ವತಿಯಿಂದ ಆಯೋಜಿಸಿದ್ದ ವಿಜಯಮುಖಿ ಕೃತಿ ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ವಿಜಯಕುಮಾರ ತೇಗಲತಿಪ್ಪಿ ಅವರ ಮುಂದಿನ ಭವಿಷ್ಯ ಉಜ್ವಲವಾಗಿರಲಿ ಎಂದು ಹಾರೈಸಿದರು.

ನಾಡಿನಾದ್ಯಂತ ವಿವಿಧ ಬಗೆಯ ಕಾರ್ಯಕ್ರಮಗಳನ್ನು ಆಯೋಜಿಸುವುದರ ಜೊತೆಗೆ ವಚನ ಸಾಹಿತ್ಯದ ಪರಿಮಳ ಉಣಬಡಿಸುವ ವಿಜಯಕುಮಾರ ಅವರ ಸಾಹಿತ್ಯ ಕ್ಷೇತ್ರದ ಯಾತ್ರೆ ಯಶಸ್ಸು ಕಾಣಲಿ ಎಂದು ನುಡಿದರು. ಮುಖ್ಯ ಅತಿಥಿಯಾಗಿದ್ದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಭವಾನಿಸಿಂಗ್ ಠಾಕೂರ ಮಾತನಾಡಿದರು.

ಪುಸ್ತಕ ಬಿಡುಗಡೆ ಮಾಡುವುದು ಎಂದರೆ ಸಾಮಾನ್ಯವಾಗಿ ಪ್ಯಾಕ್ ಮಾಡಿರುವುದನ್ನು ಬಿಚ್ಚಿ ಬಿಡುಗಡೆ ಮಾಡಲಾಗುತ್ತದೆ. ಆದರೆ ಇಲ್ಲಿ ಮಾತ್ರ ಶ್ರೀಗಳ ಇಚ್ಚೆಯಂತೆ ತಟ್ಟೆಯೊಂದರಲ್ಲಿ ಗುಲಾಬಿ ಹೂವಿನ ಪಕಳೆಯಲ್ಲಿ ಇಟ್ಟ ಪುಸ್ತಕಗಳನ್ನು ಹೊರ ತೆಗೆದು ಜನಾರ್ಪಣೆ ಮಾಡಿರುವುದು ವಿಶೇಷ ಅನಿಸಿತು.

ಪತ್ರಕರ್ತ ಶಿವರಂಜನ್ ಸತ್ಯಂಪೇಟೆ, ವಿಜಯಮುಖಿ ಕೃತಿ ಸಂಪಾದಕ ಜಗನ್ನಾಥ ತರನಳ್ಳಿ, ಕಲ್ಯಾಣಕುಮಾರ ಶೀಲವಂತ, ರವೀಂದ್ರಕುಮಾರ ಭಂಟನಳ್ಳಿ ವೇದಿಕೆಯಲ್ಲಿದ್ದರು. ಸಂಘಟಕ ವಿಜಯಕುಮಾರ ತೇಗಲತಿಪ್ಪಿ ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು. ಶಿವರಾಜ ಅಂಡಗಿ ನಿರೂಪಿಸಿದರು. ಪರಮೇಶ್ವರ ಶೆಟಕಾರ ವಂದಿಸಿದರು.

ಶಕುಂತಲಾ ಪಾಟೀಲ ಜವಳಿ, ನರಸಿಂಗರಾವ ಹೇಮನೂರ, ಪ್ರಸನ್ನ ವಾಂಜರಖೇಡ, ದೇವಿಂದ್ರಪ್ಪ ಆವಂಟಿ, ಹಣಂತರಾವ ಭೈರಾಮಡಗಿ, ಚನ್ನಬಸವ ಹಿರೇಮಠ, ಸತೀಶ ಸಜ್ಜನ್, ಡಾ. ನಾಗರಾಜ ಹೆಬ್ಬಾಳ, ಶ್ರೀಕಾಂತಗೌಡ ತಿಳಗೂಳ, ಬಾಬುರಾವ ಶೇರಿಕಾರ ಇತರರು ಭಾಗವಹಿಸಿದ್ದರು.

emedialine

Recent Posts

ಮಣಿಕಂಠ ರಾಠೋಡ ಆರೋಪ ಸತ್ಯಕ್ಕೆ ದೂರ | ಅಕ್ರಮ‌ವಾಗಿ ಅಕ್ಕಿ ಸಾಗಾಟವಾಗಿಲ್ಲ: ಆಹಾರ ಇಲಾಖೆ ಸ್ಪಷ್ಟನೆ

ಕಲಬುರಗಿ: ಕಳೆದ‌ ಅಕ್ಟೋಬರ್ 2 ರಂದು‌ ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…

6 hours ago

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

9 hours ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

14 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

14 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

16 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

1 day ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420