ಬಿಸಿ ಬಿಸಿ ಸುದ್ದಿ

ಬಿ.ಕಾಂ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸ್ಪರ್ಧಾತ್ಮಕ ತರಬೇತಿ ಶಿಬಿರದ ಉದ್ಘಾಟನಾ

ಸುರಪುರ: ನಗರದ ಬಸವರಾಜಪ್ಪ ಅಪ್ಪಾ ವಾಣಿಜ್ಯ ಮತ್ತು ವಿಜ್ಞಾನ ಪದವಿ ಮಹಾವಿದ್ಯಾಲಯದಲ್ಲಿ ಬಿ.ಕಾಂ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸ್ಪರ್ಧಾತ್ಮಕ ತರಬೇತಿ ಶಿಬಿರದ ಉದ್ಘಾಟನಾ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಪರಮ ಪೂಜ್ಯ ಡಾ. ಶರಣಬಸವಪ್ಪ ಅಪ್ಪಾ ೮ನೇ ಮಹಾದಾಸೋಹ ಪಿಠಾಧಿಪತಿಗಳು, ಅಧ್ಯಕ್ಷರು ಶರಣಬಸವೇಶ್ವರ ವಿದ್ಯಾವರ್ಧಕ ಸಂಘ, ಕುಲಾಧಿಪತಿಗಳು ಶರಣಬಸವ ವಿಶ್ವವಿದ್ಯಾಲಯ, ಕಲಬುರ್ಗಿ ಹಾಗೂ ಪೂಜ್ಯ ಶ್ರೀಮತಿ ನೀಲಮ್ಮ ತಾಯಿ ವ್ಹಿ ನಿಷ್ಠಿ ಜಹಾಗೀರದಾರವರು ವಹಿಸಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶರಣಬಸಪ್ಪ ವ್ಹಿ. ನಿಷ್ಠಿ ಜಹಾಗೀರದಾರ ಕಾರ್ಯದರ್ಶಿಗಳು, ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯ, ಬಸವರಾಜಪ್ಪ ಅಪ್ಪಾ ವಾಣಿಜ್ಯ ಹಾಗೂ ವಿಜ್ಞಾನ ಪದವಿ ಮಹಾವಿದ್ಯಾಲಯ, ಶರಣಬಸವ ಪದವಿ ಪೂರ್ವ ವಸತಿ ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯ, ಮತ್ತು ಶರಣಬಸವ ಪಬ್ಲಿಕ್ ಸ್ಕೂಲ್, ಸುರಪುರ, ಮುಖ್ಯ ಅತಿಥಿಗಳಾಗಿ ಶ್ರೀ ಲಿಂಗರಾಜಪ್ಪ. ಬ. ಅಪ್ಪಾ ಶ್ರೀ ಶರಣಬಸವೇಶ್ವರ ಸಂಸ್ಥಾನ ಕಲಬುರಗಿ. ದೊಡ್ಡಪ್ಪ ಎಸ್. ನಿಷ್ಠಿ ಜಹಾಗೀರದಾರ ಜಂಟಿ ಕಾರ್ಯದರ್ಶಿಗಳು, ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯ, ಅಪ್ಪಾ ಪದವಿ ವಾಣಿಜ್ಯ, ಮಹಾವಿದ್ಯಾಲಯ ಶರಣಬಸವ ಪದವಿ ಪೂರ್ವ ವಸತಿ ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯ, ಮತ್ತು ಶರಣಬಸವ ಪಬ್ಲಿಕ್ ಸ್ಕೂಲ್, ಸುರಪುರ ಇವರು ವಹಿಸಿಕೊಂಡಿದ್ದರು.

ಲಿಂಗರಾಜಪ್ಪ. ಬ. ಅಪ್ಪಾರವರು ಮುಖ್ಯ ಅತಿಥಿಗಳಾಗಿ ಮಾತನಾಡಿ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿಧ್ಯಾರ್ಥಿಗಳು ಪಠ್ಯಕ್ರಮದ ತರಗತಿಯ ಜೊತೆಗೆ ಪರೀಕ್ಷೆ ವಿಷಯದ ಕುರಿತು ಹೆಚ್ಚಿನ ಮಾಹಿತಿಯನ್ನು ಪಡೆಯುವಂತಾಗಲು ಸ್ಪರ್ಧಾತ್ಮಕ ತರಬೇತಿ ಶಿಬಿರ ಕೇಂದ್ರವನ್ನು ಸ್ಪಾಪಿಸಲಾಗಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ತಿಳಿಸಿದರು. ಪೂಜ್ಯ ಅಪ್ಪಾಜಿಯವರ ಶೈಕ್ಷಣಿಕ ಕೊಡುಗೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

ಇನ್ನೋರ್ವ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ದೊಡ್ಡಪ್ಪ ಎಸ್. ನಿಷ್ಠಿ ಜಹಾಗೀರದಾರವರು ಮಾತನಾಡಿ ಮುಂದಿನ ದಿನಗಳಲ್ಲಿ ಬಿ.ಕಾಂ ವಿದ್ಯಾರ್ಥಿಗಳಿಗೆ ಹೆಚ್ಚಿನ ಉದ್ಯೋಗಾವಕಾಶಗಳು ಲಭ್ಯವಿದ್ದು, ಸ್ಪರ್ಧಾತ್ಮಕ ತರಬೇತಿ ಶಿಬಿರ ಕೇಂದ್ರದ (ಇನ್‌ಕೂಬೇಶನ್ ಸೆಂಟರ್) ಸ್ಥಾಪನೆ ಮಾಡಲಿದ್ದು, ವಿದ್ಯಾರ್ಥಿಗಳು ಹೊಸ ಪ್ರಯೋಗಿಕ ಅನ್ವೇಷಣೆ ಮೂಲಕ ಮಾಹಾವಿದ್ಯಾಲಯವು ಪೆಟೆಂಟ್‌ನ್ನು ಪಡೆಯುವಂತೆ ಪ್ರಧ್ಯಾಪಕರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಬೇಕು ಎಂದು ಹೇಳಿದರು.

ಪ್ರಾಚಾರ್ಯರಾದ ಪ್ರೋ. ನಾನಾಗೌಡ ದೇಸಾಯಿಯವರು ಪ್ರಾಸ್ತಾವಿಕವಾಗಿ ಮಾತನಾಡಿದರು, ಪ್ರೋ. ಮೋಹನರೆಡ್ಡಿ ನಿರೂಪಿಸಿದರು ಹಾಗೂ ಪ್ರೋ. ಮಹೇಶಕುಮಾರ ವಂದಿಸಿದರು. ಪ್ರಾಚಾರ್ಯರಾದ ಡಾ. ರವಿಂದ್ರಕುಮಾರ ನಾಗರಾಳೆ, ಅನೀಲಕುಮಾರ ಪಾಟೀಲ, ಮುಖ್ಯೋಪಾಧ್ಯಾರಾದ ರತ್ನಾ ಹಾಗೂ ಪ್ರಾದ್ಯಾಪಕರು, ವಿದ್ಯಾರ್ಥಿ ವಿದ್ಯಾರ್ಥಿನಿಯರು ಭಾಗವಹಿಸಿದ್ದರು.

emedialine

Recent Posts

ನ್ಯಾಯವಾದಿ ವಿನೋದ ಕುಮಾರ ಎಸ್. ಜೇ. ನಾಮಪತ್ರ ಸಲ್ಲಿಕೆ

ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…

3 hours ago

13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…

3 hours ago

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

3 hours ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

3 hours ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

4 hours ago

ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ತಿದ್ದು ಪಡಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…

5 hours ago