ಕಲಬುರಗಿ: ಸಮಾಜದಲ್ಲಿ ಇನ್ನು ಜೀವಂತವಾಗಿರುವ ಜಾತೀಯತೆ, ಮೂಡ ನಂಬಿಕೆಗಳನ್ನು ಬೇರು ಸಮೇತ ಕಿತ್ತು ಹಾಕಬೇಕಾದರೆ ಡಾ ಅಂಬೇಡ್ಕರವರ ವಿಚಾರಧಾರೆಗಳು ಇಂದಿನ ಯುವಕರಿಗೆ ತಲುಪಿಸಬೇಕಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಅಭಿಪ್ರಾಯ ಪಟ್ಟರು.
ನಗರದ ಕಾಂತಾ ಕಾಲೋನಿಯ ಶ್ರಾವಸ್ತಿ ನಗರದಲ್ಲಿ ಆಯೋಜಿಸಿದ ಸಂವಿಧಾನ ಶಿಲ್ಪಿ ಡಾ ಬಾಬಾಸಾಹೇಬ ಅಂಬೇಡ್ಕರವರ ಮಹಾಪರಿ ನಿರ್ವಾಣ ದಿನಾಚರಣೆ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ಬುದ್ಧ ಬಸವ ಡಾ ಅಂಬೇಡ್ಕರರು ಎಲ್ಲಾ ಸಮುದಾಯಗಳಿಗೂ ಆದರ್ಶ ವ್ಯಕ್ತಿಗಳು. ಅವರೆಲ್ಲ ಆದರ್ಶಗಳು ಸಂವಿಧಾನದಲ್ಲಿ ಸೇರಿಸಿದ್ದಾರೆ. ಸಮ ಸಮಾಜವನ್ನು ನಿರ್ಮಾಣ ಮಾಡಲು ಸಂವಿಧಾನದ ಮೌಲ್ಯಗಳನ್ನು ಯುವ ಪೀಳಿಗೆಗೆ ಅರ್ಥೈಸಿ ಕೊಡಬೇಕು. ಈ ದಿಸೆಯಲ್ಲಿ ಡಾ ಅಂಬೇಡ್ಕರವರ ಕುರಿತಾದ ಕಾರ್ಯಕ್ರಮಗಳು ಬರುಲಿರುವ ದಿನಗಳಲ್ಲಿ ಕಸಾಪ ವತಿಯಿಂದ ಆಯೋಜನೆ ಮಾಡಲಾಗುತ್ತದೆ ಎಂದು ಹೇಳಿದರು.
ಸಾಹಿತ್ಯ ಕಲಾವಿದ ಎಂ ಎನ್ ಸುಗಂಧಿ ಅವರು ಬುದ್ಧ ವಂದನೆ ಕಾರ್ಯಕ್ರಮ ನಡೆಸಿ ಕೊಟ್ಟರು. ನಿವೃತ್ತ ಮುಖ್ಯಗುರು ಗುರುಶಾಂತಪ್ಪ ಜೋಗಾ ಅವರು ಅಧ್ಯಕ್ಷತೆ ವಹಿಸಿದರು. ಸಾಹಿತಿ ಧರ್ಮಣ್ಣ ಎಚ್ ಧನ್ನಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಮಾಜ ಸೇವಕ ಕೇದಾರನಾಥ ಕುಲಕರ್ಣಿ ಅವರು ಅನ್ನ ಸಂತರ್ಪಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಶಿಕ್ಷಕ ಮಹಾದೇವ ಕೊಥಲಿ, ಬಡಾವಣೆಯ ಮುಖಂಡರಾದ ಲಕ್ಮಣ ಮದರಕಿ, ವಿಠ್ಠಲ ಅರ್ಜುಣಗಿ, ಪೀರಪ್ಪ ಬಂದರವಾಡ, ರಾಮಣ್ಣ ನಾವದಗಿ, ದಶರಥ ಭರಣಿ ಭಾಗವಹಿಸಿದರು. ಇದೇ ಸಂದರ್ಭದಲ್ಲಿ ನವ್ಯ, ವಿಜಯಲಕ್ಮೀ ಹಾಗೂ ಅರ್ಪಿತಾ ಶಾಲಾ ಮಕ್ಕಳಿಂದ ಭೀಮ ಗೀತೆಗಳು ಜರುಗಿದವು.
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
View Comments
ಅರ್ಥಪೂರ್ಣವಾದ ಸುದ್ದಿಗಳು ಬಂದಿವೆ. ಧನ್ಯವಾದಗಳು