ಬಿಸಿ ಬಿಸಿ ಸುದ್ದಿ

ಸುರಪುರ ತಾಲೂಕು ಆಡಳಿತ ಅಂಬೇಡ್ಕರ್ ಸಂಸ್ಮರಣೆ ದಿನಾಚರಣೆ

ಸುರಪುರ: ಡಿಸೆಂಬರ್ ೬ರ ಸಂವಿಧಾನ ಶಿಲ್ಪಿ ಡಾ:ಬಾಬ ಸಾಹೇಬ್ ಅಂಬೇಡ್ಕರ್ ಅವರ ೬೫ನೇ ಮಹಾ ಪರಿನಿರ್ವಾಣ ದಿನದ ಅಂಗವಾಗಿ ಸುರಪುರ ತಾಲೂಕು ಆಡಳಿತದಿಂದ ನಗರದ ಡಾ:ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಸಂಸ್ಮರಣೆ ದಿನವನ್ನು ಆಚರಿಸಲಾಯಿತು.ಕಾರ್ಯಕ್ರಮದ ಆರಂಭದಲ್ಲಿ ಅಂಬೇಡ್ಕರರ ಮೂರ್ತಿಗೆ ತಹಸೀಲ್ದಾರ್ ಸುಬ್ಬಣ ಜಮಖಂಡಿ ಹಾಗು ಇತರೆ ಅಧಿಕಾರಿಗಳು ಮತ್ತು ಮುಖಂಡರು ಮಾಲಾರ್ಪಣೆ ಮಾಡಿದರು.ನಂತರ ಮೇಣದ ಬತ್ತಿ ಬೆಳಗಿ ೨ ನಿಮಿಷಗಳ ಮೌನಾಚರಣೆಯೊಂದಿಗೆ ಡಾ:ಬಿ.ಆರ್.ಅಂಬೇಡ್ಕರರಿಗೆ ಗೌರವ ನಮನ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ತಹಸೀಲ್ದಾರ್ ಸುಬ್ಬಣ್ಣ ಜಮಖಂಡಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಸತ್ಯನಾರಾಯಣ ದರಬಾರಿ,ಮುಖಂಡರಾದ ವೇಣುಗೋಪಾಲ ನಾಯಕ ಜೇವರ್ಗಿ,ಮಾಳಪ್ಪ ಕಿರದಹಳ್ಳಿ,ರಮೇಶ ಅರಕೇರಿ,ಶೇಖರ ಜೀವಣಗಿ,ರಾಜು ಕಟ್ಟಿಮನಿ,ಮಲ್ಲು ಕೆಸಿಪಿ,ಶರಣು ತಳವಾರಗೇರಾ, ಮಹಾದೇವಪ್ಪ ಬೊಮ್ಮನಹಳ್ಳಿ,ಚಾಣಕ್ಕನವರ್,ಶಿವುಗೌಡ ಬಿರಾದಾರ್,ರಮೇಶ ಮುಂಡರಗಿ,ಸುನೀಲಕುಮಾರ ಪಂಚಾಂಗಮಠ,ಸೀತಾರಾಮ ನಾಯಕ ಸೇರಿದಂತೆ ಅನೇಕರಿದ್ದರು.

emedialine

Recent Posts

ಡಾ. ಫ.ಗು. ಹಳಕಟ್ಟಿ ಯವರ ಜಯಂತಿ ಅಂಗವಾಗಿ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ

ಕಲಬುರಗಿ: ವಚನ ಪಿತಾಮಹ ಎಂದು ಕರೆಸಿಕೊಳ್ಳುವ ಡಾ. ಫ.ಗು. ಹಳಕಟ್ಟಿ ಯವರು ಬಸವಾದಿ ಶರಣರ ವಚನ ಸಾಹಿತ್ಯವನ್ನು ಸಂರಕ್ಷಣೆ ಮಾಡುವ…

56 mins ago

ಮೊಬೈಲ್ ರೀಚಾರ್ಜ್‍ಗಳ ಬೆಲೆ ಹೆಚ್ಚಳ ತಕ್ಷಣವೇ ಹಿಂಪಡೆಯಬೇಕೆಂದು ಆಗ್ರಹಿಸಿ ಪ್ರತಿಭಟನೆ

ಶಹಾಬಾದ: ಖಾಸಗಿ ಟೆಲಿಕಾಂ ಕಂಪನಿಗಳು ಮೊಬೈಲ್ ರೀಚಾರ್ಜ್‍ಗಳ ಬೆಲೆಗಳನ್ನು ಅನಿಯಂತ್ರಿತವಾಗಿ ಹೆಚ್ಚಳ ಮಾಡಿರುವುದನ್ನು ತಕ್ಷಣವೇ ಹಿಂಪಡೆಯಬೇಕೆಂದು ಆಗ್ರಹಿಸಿ ಎಐಡಿವಾಯ್‍ಓ ವತಿಯಿಂದ…

1 hour ago

ಸಾರ್ವಜನಿಕರು ಮಕ್ಕಳನ್ನು ಸರಕಾರಿ ಶಾಲೆಗೆ ದಾಖಲಿಸಿ

ಶಹಾಬಾದ :ಎಲ್ಲರಿಗೂ ಸರಕಾರಿ ನೌಕರಿ ಬೇಕು.ಆದರೆ ಸರಕಾರಿ ಶಾಲೆಯಲ್ಲಿ ನಿಮ್ಮ ಮಕ್ಕಳು ಓದುವುದು ಬೇಡ ಎಂದರೆ ಹೇಗೆ ? ಮೊದಲು…

1 hour ago

ಪಠ್ಯಕ್ರಮ ರಚನೆ ಗುಣಾತ್ಮಕ ಅಂಶಗಳಿಂದ ಕೂಡಿರಲಿ

ವಿಜಯಪುರ: ಇಂದಿನ ಪ್ರಸ್ತುತ ಶಿಕ್ಷಣ ಪದ್ದತಿ ಕೌಶಲ್ಯಾಧಾರಿತ ಹಾಗೂ ಔದ್ಯೋಗಿಕ ಮತ್ತು ಉದ್ಯೋಗ ಪೂರಕನಂತೆ ಇರಬೇಕು ಎಂದು ಕರ್ನಾಟಕ ರಾಜ್ಯ…

2 hours ago

ಪತ್ರಕರ್ತ ಸಿದ್ರಾಮ್ ನಾಡಗೇರಿ ಪುತ್ರಿ ಸ್ಪಂದನಾ ಎಸ್. ನಡಗೇರಿಗೆ ಪತ್ರಕರ್ತರ ಸಂಘದಿಂದ ಸನ್ಮಾನ

ಹಾವೇರಿ: SSLC,PUC ಯಲ್ಲಿ 90% ಕಿಂತ ಹೆಚ್ಚು ಅಂಕ ಪಡೆದ ಪತ್ರಕರ್ತರ ಮಕ್ಕಳಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು,…

3 hours ago

ಸೇವಾ ಮನೋಭಾವದ ಮನಸ್ಸು ಹೆಚ್ಚಾಗಲಿ: ಜ್ಯೋತಿ ಪಾಟೀಲ್

ಕಲಬುರಗಿ: ನೌಕರಿ ಕಾಯಕವಾದರೆ ತೃಪ್ತಿ ಜೀವನ, ವೃತ್ತಿಯಲ್ಲಿ ಸೇವಾ ಮನೋಭಾವ ಹೊಂದಿದರೆ ಆತ್ಮಶುದ್ಧಿಯಾಗಿ ಸಂತೃಪ್ತ ಜೀವನ ನಮ್ಮದಾಗುತ್ತದೆ ಎಂದು ಉಪಳಾಂವ…

3 hours ago