ಕನ್ನಡ ಭವನಕ್ಕೆ ಆಗಮಿಸಿದ ಹಾರಕೂಡ ಶ್ರೀಗಳು ಕಸಾಪ ಅಧ್ಯಕ್ಷರಿಗೆ ಸತ್ಕಾರ

0
28

ಕಲಬುರಗಿ: ನಗರದ ಕನ್ನಡ ಭವನಕ್ಕೆ ಭೆಟ್ಟಿ ನೀಡಿದ ಹಾರಕೂಡದ ಶ್ರೀ ಡಾ.ಚನ್ನವೀರ ಶಿವಾಚಾರ್ಯ ಮಹಾಸ್ವಾಮಿಜೀ ಅವರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿಗೆ ಅಧ್ಯಕ್ಷರಾಗಿ ಆಯ್ಕೆಯಾದ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಅವರನ್ನು ವಿಶೇಷವಾಗಿ ಸತ್ಕರಿಸಿ ಆಶೀರ್ವದಿಸಿದರು.

ನಂತರ ಮಾತನಾಡಿದ ಶ್ರೀ ಡಾ.ಚನ್ನವೀರ ಶಿವಾಚಾರ್ಯರು, ಯಾವುದೇ ಪಕ್ಷ, ಜಾತಿ, ಧರ್ಮ ಮರೆತು ಎಲ್ಲರನ್ನೂ ಒಗ್ಗೂಡಿಸುವ ಸಾಮರ್ಥ್ಯ ಕನ್ನಡ ಭಾಷೆಗಿದೆ. ಕನ್ನಡ ಸಾಹಿತ್ಯ ಪರಿಷತ್ತಿನವರು ಕನ್ನಡ ಭಾಷೆ ಮತ್ತು ಸಂಸ್ಕೃತಿ ಬೆಳವಣಿಗೆಗೆ ಶ್ರಮಿಸಲಿ ಎಂದು ಹಾರೈಸಿದರು.

Contact Your\'s Advertisement; 9902492681

ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ, ಕನ್ನಡ ನಾಡು-ನುಡಿ, ನೆಲ-ಜಲದ ಸಂರಕ್ಷಣೆ ಮಾಡುವುದು ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿ ಆಗಿದೆ. ಹಾಗಾಗಿ, ಪರಿಷತ್ತಿನ ಘನತೆ ಉಳಿಸುವ ಮತ್ತು ಬೆಳೆಸುವ ಕಾರ್ಯ ಸದಾ ಕಾಲ ಮಾಡುತ್ತೇವೆ ಎಂದರು. ಇದಕ್ಕೆ ಸಾಹಿತಿಗಳು, ಕವಿ-ಕಲಾವಿದರು, ಶಿಕ್ಷಕರ ಸಹಕಾರ ಅಗತ್ಯವಿದೆ ಎಂದರು.

ಗೌರವ ಕಾರ್ಯದರ್ಶಿಗಳಾದ ಸುರೇಶ ಬಡಿಗೇರ, ಶಿವರಾಜ ಅಂಡಗಿ, ಗೌರವ ಕೋಶಾಧ್ಯಕ್ಷ ಡಾ.ಶರಣರಾಜ್ ಛಪ್ಪರಬಂದಿ, ಪ್ರಮುಖರಾದ ಪ್ರಭುಲಿಂಗ ಮೂಲಗೆ, ರವೀಂದ್ರಕುಮಾರ ಭಂಟನಳ್ಳಿ, ಜಗದೀಶ ಮರಪಳ್ಳಿ, ರಾಜೇಂದ್ರ ಮಾಡಬೂಳಕರ್, ವಿಶ್ವನಾಥ ತೊಟ್ನಳ್ಳಿ, ಬಸವರಜ ತೋಟದ, ವಿನೋದ ಜೇನವೇರಿ, ಎಂ.ಎಸ್.ಪಾಟೀಲ ನರಿಬೋಳ, ಡಾ.ಬಾಬುರಾವ ಶೇರಿಕಾರ, ಮಂಜುನಾಥ ಕಂಬಾಳಿಮಠ, ಸಂತೋಷ ಕುಡಳ್ಳಿ, ಧರ್ಮಣ್ಣ ಧನ್ನಿ, ವಿದ್ಯಾಸಾಗರ ದೇಶಮುಖ, ಈರಣ್ಣಾ ನಾವಿ, ಹೆಚ್.ಎಸ್.ಬರಗಾಲಿ, ಬಿ.ಎಂ.ಪಾಟೀಲ ಕಲ್ಲೂರ, ಶ್ರೀಕಾಂತ ಪಾಟೀಲ ತಿಳಗೂಳ, ನಾಗೇಂದ್ರಪ್ಪ ಮಾಡ್ಯಾಳೆ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here