ಉತ್ತಮ ಸಮಾಜದ ನಿರ್ಮಾಣಕ್ಕಾಗಿ ತಪ್ಪದೇ ಮತ ಚಲಾಯಿಸಿ: ಸುರೇಶ ವರ್ಮಾ

0
48

ಶಹಾಬಾದ:ಪ್ರಜಾಪ್ರಭುತ್ವ ಎಂದರೆ ಜನರಿಗೆ ಸೇರಿದ, ಜನರಿಗೋಸ್ಕರ, ಜನರೇ ನಡೆಸುವ ಒಂದು ವ್ಯವಸ್ಥೆ, ಈ ಪ್ರಜಾಪ್ರಭುತ್ವದ ಅತ್ಯಂತ ಪ್ರಮುಖವಾದ ಅಂಗವಾದ ಚುನಾವಣೆಯಲ್ಲಿ ಮತದಾನ ಮಾಡುವ ಮೂಲಕ ನಿಮ್ಮ ಪ್ರತಿನಿಧಿಗಳನ್ನು ಆಯ್ಕೆ ಮಾಡಬೇಕೆಂದು ತಹಸೀಲ್ದಾರ ಸುರೇಶ ವರ್ಮಾ ಹೇಳಿದರು.

ಅವರು ಸೋಮವಾರ ನಗರಸಭೆಯ ಸಭಾಂಗಣದಲ್ಲಿ ವಿಧಾನಪರಿಷತ್ ಚುನಾವಣೆಯ ನಿಮಿತ್ತ ನಗರಸಭೆಯ ಎಲ್ಲಾ ಸದಸ್ಯರಿಗೆ ಮತದಾನದ ಕುರಿತು ತಿಳುವಳಿಕೆ ನೀಡು ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

Contact Your\'s Advertisement; 9902492681

ಪ್ರಜಾಪ್ರಭುತ್ವ ರಾ?ದ ಪ್ರಜೆಯಾಗಿರುವುದು ನಮಗೆ ಹೆಮ್ಮೆ. ಹಾಗೆಯೇ, ಮತ ಹಾಕುವುದು ನಮ್ಮ ಹಕ್ಕು ಮಾತ್ರವಲ್ಲ, ಜವಾಬ್ದಾರಿ ಕೂಡ. ಈ ಜವಾಬ್ದಾರಿಯನ್ನೂ ನಾವು ನಿ?ಯಿಂದ ನಿಭಾಯಿಸಬೇಕಿದೆ. ಉತ್ತಮ ಸಮಾಜದ ನಿರ್ಮಾಣಕ್ಕಾಗಿ, ಸಮರ್ಥ ಜನಪ್ರತಿನಿಧಿಯ ಆಯ್ಕೆಗಾಗಿ ತಪ್ಪದೇ ಮತ ಚಲಾಯಿಸಬೇಕು. ಸೂಚನೆಗಳು ಕಾಲಕಾಲಕ್ಕೆ ಗಣನೀಯವಾಗಿ ಬದಲಾಗುತ್ತಿರುತ್ತವೆ. ಈ ಹಿನ್ನೆಲೆಯಲ್ಲಿ ಪ್ರತಿ ಚುನಾವಣೆಯ ಕಾರ್ಯವು ಹೊಸದಾಗಿರುತ್ತದೆ. ನಾವುಗಳು ಎ? ತರಬೇತಿ ಪಡೆದಿದ್ದರೂ ಕೆಲವು ವಿ?ಯಗಳನ್ನು ಮತ್ತೆ ಮತ್ತೆ ಕಲಿಯಬೇಕಾಗುತ್ತದೆ. ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಗೊಳಿಸಲು ಎಲ್ಲರೂ ಮತದಾನದಲ್ಲಿ ಭಾಗವಹಿಸಬೇಕು ಎಂದರಲ್ಲದೇ ಮತದಾನದ ವಿಧಾನದ ಕುರಿತು ಅಣುಕು ಮತದಾನ ಮಾಡುವ ಹಾಗೂ ಮತದಾನದ ದಿನ ಅನುಸರಿಸಬೇಕಾದ ಕ್ರಮದ ಬಗ್ಗೆ ಮಾಹಿತಿ ಒದಗಿಸಿದರು.

ನಗರಸಭೆಯ ಪೌರಾಯುಕ್ತ ಡಾ.ಕೆ.ಗುರಲಿಂಗಪ್ಪ ಮಾತನಾಡಿ, ಮತ ಚಲಾಯಿಸುವ ಅವಕಾಶವನ್ನು ನಾವೆಂದೂ ಕಳೆದುಕೊಳ್ಳಬಾರದು. ನಾವು ಕೊಡುವ ಒಂದು ಮತ ಸ್ವಸ್ಥ ಸಮಾಜಕ್ಕೆ ನಮ್ಮ ಅಮೂಲ್ಯ ಕೊಡುಗೆ. ಹಾಗೆಯೇ, ಸೂಕ್ತ ವ್ಯಕ್ತಿಯನ್ನು ಆರಿಸುವುದೂ ಅಷ್ಟೇ ಮುಖ್ಯ. ತಪ್ಪದೇ ಮತ ಚಲಾಯಿಸಿ. ಯಾವುದೇ ಭಯ, ಆಮಿ?ಗಳಿಲ್ಲದೆ ಮುಕ್ತವಾಗಿ ಮತದಾನದಲ್ಲಿ ಭಾಗವಹಿಸಿ ಪ್ರಜಾಪ್ರಭುತ್ವದ ವ್ಯವಸ್ಥೆ ಗಟ್ಟಿಗೊಳ್ಳಬೇಕಾದರೆ ನೀವೆಲ್ಲಾ ಮತದಾನದಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ನಗರಸಭೆಯ ಅಧ್ಯಕ್ಷೆ ಅಂಜಲಿ ಗಿರೀಶ ಕಂಬಾನೂರ,ಉಪಾಧ್ಯಕ್ಷೆ ಸಲೀಮಾಬೇಗಂ, ಸ್ಥಾಯಿ ಸಮಿತಿ ಅಧ್ಯಕ್ಷ ತಿಪ್ಪಣ್ಣ ನಾಟೇಕಾರ, ನಗರಸಭೆಯ ಚುನಾಯಿತ ಸರ್ವ ಸದಸ್ಯರು, ನಾಮ ನಿರ್ದೇಶಿತ ಸದಸ್ಯರು ಹಾಗೂ ಸಿಬ್ಬಂದಿಗಳು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here