ಹಾವೇರಿ: ಆಟೋರಿಕ್ಷಾಗಳಿಗೆ ಹಣ ಹೊಂದಿಸಲಾಗದ ಬಡ ವಿದ್ಯಾರ್ಥಿಗಳು ಕಲ್ಲುಕಡಿ ತುಂಬಿರುವ ಟ್ರ್ಯಾಕ್ಟರ್ಗಳಲ್ಲಿ ಅಪಾಯಕಾರಿ ರೀತಿಯಲ್ಲಿ ಕುಳಿತು ಪ್ರಯಾಣಿಸುವ ಅನಿವಾರ್ಯತೆ ಎದುರಾಗಿದೆ. ಇತ್ತೀಚೆಗೆ ಶಿರಹಟ್ಟಿ ತಾಲೂಕಿನ ಕಡಕೋಳ ಗ್ರಾಮದ ಬಾಲಕಿಯೊಬ್ಬರು ಟ್ರ್ಯಾಕ್ಟರ್ ನಲ್ಲಿ ಶಾಲೆಗೆ ಪ್ರಯಾಣಿಸುತ್ತಿದ್ದಾಗ ಕೆಳಗೆ ಬಿದ್ದು, ಸ್ಥಳದಲ್ಲೇ ಮೃತಟ್ಟಿರುವುದು ನಾಗರಿಕ ಸಮಾಜ ತಲೆ ತಗ್ಗಿಸುವ ಸಂಗತಿ. ಗ್ರಾಮೀಣ ಭಾಗದಲ್ಲಿ ಸೂಕ್ತ ಸಾರಿಗೆ ವ್ಯವಸ್ಥೆ ಇಲ್ಲದಿರುವುದೇ ದುರ್ಘಟನೆಗೆ ಕಾರಣ ಎಂದು ಆಕ್ರೊಶ ವ್ಯಕ್ತಪಡಿಸಿದರು.
ಶಿರಹಟ್ಟಿ ತಾಲೂಕಿನ ಕಡಕೋಳ ಸೇರಿದಂತೆ ಜಿಲ್ಲೆಯ ಗ್ರಾಮಾಂತರ ಪ್ರದೇಶಗಳಿಗೆ ಶಾಲಾ, ಕಾಲೇಜುಗಳ ಸಮಯಕ್ಕೆ ಸರಿಯಾಗಿ ಸಾರಿಗೆ ಬಸ್ ಸೇವೆ ಕಲ್ಪಿಸಬೇಕು. ಕಡಕೋಳ ಗ್ರಾಮದ ಮೃತ ಬಾಲಕಿ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ನೀಡಬೇಕು. ಈ ಕುರಿತು ಸರಕಾರ ಅಲಕ್ಷ್ಯ ಮಾಡಿದರೆ ಎಬಿವಿಪಿಯಿಂದ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಡಾ|ಪುನೀತಕುಮಾರ ಬೆನಕನವಾರಿ, ಜಿಲ್ಲಾ ಸಂಚಾಲಕ ರವಿ ಮಾನ್ವಿ, ಗಿರೀಶ ನರಗುಂದಕರ, ಹನುಂಮತ ಬಗಲಿ, ರವಿ ನರೇಗಲ್, ವೆಂಕಟೇಶ ವಾಲ್ಮೀಕಿ, ಅಭಿಷೇಕ, ಮಹೇಶ್ ಲಮಾಣಿ, ಗುರು ಶಿರಹಟ್ಟಿ, ರುದ್ರಗೌಡ ಕಳಸದ, ತ್ರಿಭುವನ್ ಕುಮಾರ್, ವೆಂಕಟೇಶ್, ಅಭಿಷೇಕ್, ಸಂತೋಷ್, ರಾಜಶೇಖರ, ವೀರೇಶ್, ಮಹೇಶ್, ಸತೀಶ್, ನಾಗರಾಜ್, ವೀರೇಂದ್ರ, ಸಿದ್ದಲಿಂಗೇಶ್ವರ ಅಕ್ಕಿ, ಮಂಜುನಾಥ್, ಜನಾರ್ದನ್, ಹನುಮಂತ ಹಳ್ಳೂರ, ಪೂಜಾ ಪೂಜಾರ, ಸ್ನೇಹಾ ಮತ್ತಿತರರು ಪಾಲ್ಗೊಂಡಿದ್ದರು.
ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ. ಎಂ ಎಸ್ ಪಾಸೋಡಿ ಅವರು ಜಪಾನ್…
ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು…
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…