ಸುರಪುರ: ತಾಲೂಕಿನ ಮಂಗಿಹಾಳ ಗ್ರಾಮದಲ್ಲಿ ನಿರ್ಮಿಸುತ್ತಿರುವ ಸಿಸಿ ರಸ್ತೆ ಕಾಮಗಾರಿ ಕಳಪೆಯಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಸಂಘಟನೆಗಳ ಒಕ್ಕೂಟ ಕನ್ನಡಿಗರ ಸಾರಥ್ಯದಲ್ಲಿ ಸಂಘಟನೆಯಿಂದ ಆರೋಪಿಸಲಾಗಿದೆ.
ನಗರದ ಲೊಕೋಪಯೋಗಿ ಇಲಾಖೆ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಮಾತನಾಡಿದ ಸಂಘಟನೆ ಜಿಲ್ಲಾಧ್ಯಕ್ಷ ಶಿವಮೋನಯ್ಯ ಎಲ್.ಡಿ ನಾಯಕ,ಮಂಗಿಹಾಳ ಗ್ರಾಮದ ರಡ್ಡೆಪ್ಪಗೌಡ ಮನೆಯಿಂದ ತಿಪ್ಪಣ್ಣನ ಮನೆಯವರೆಗಿನ ರಸ್ತೆ ಕಾಮಗಾರಿ ಕಳಪೆಯಾಗಿದೆ.ಕಳಪೆ ಗುಣಮಟ್ಟದ ವಸ್ತುಗಳನ್ನು ಬಳಸಿ ರಸ್ತೆ ನಿರ್ಮಾಣ ಮಾಡಿದ್ದರಿಂದ ಕೆಲವೆ ದಿನಗಳಲ್ಲಿ ರಸ್ತೆ ಕಿತ್ತು ಹೋಗಲಿದೆ.
ಆದ್ದರಿಂದ ಕೂಡಲೇ ಕಳಪೆ ರಸ್ತೆ ನಿರ್ಮಾಣಕ್ಕೆ ಕಾರಣರಾದ ಅಧಿಕಾರಿಗಳು ಮತ್ತು ಗುತ್ತಿಗೆದಾರರ ಮೇಲೆ ಕ್ರಮ ಕೈಗೊಳ್ಳಬೇಕು ಇಲ್ಲವಾದಲ್ಲಿ ಸಂಘಟನೆಯಿಂದ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿ ನಂತರ ಲೊಕೋಪಯೋಗಿ ಇಲಾಖೆ ಸಹಾಯಕ ಕಾರ್ಯನಿರ್ವಾಹ ಅಭಿಯಂತರರಿಗೆ ಬರೆದ ಮನವಿಯನ್ನು ಕಚೇರಿ ಸಿರಸ್ಥೆದಾರರ ಮೂಲಕ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಂಘಟನೆಯ ತಾಲೂಕು ಉಪಾಧ್ಯಕ್ಷ ರಾಮನಗೌಡ ಪಾಟೀಲ್,ಹುಣಸಗಿ ತಾಲೂಕು ಗೌರವಾಧ್ಯಕ್ಷ ಪ್ರಭು ನಾಯಕ ಟೆಲರ್,ಪ್ರಭುಗೌಡ ಪಾಟೀಲ್,ಬಂದೇನವಾಜ್ ಮಾಳನೂರ,ದಸ್ತಗಿರ್ ಕಕ್ಕೇರಾ,ದೇವಪ್ಪ ನಾಯಕ ಸೇರಿದಂತೆ ಅನೇಕರಿದ್ದರು.