ಕಲಬುರಗಿ : ದೇಶದಾದ್ಯಂತ ಹೆಚ್ಚಾಗುತ್ತಿರುವ ನಿರುದ್ಯೋಗ, ಬೆಲೆ ಏರಿಕೆ ಹಾಗೂ ಸಾಂಸ್ಕೃತಿಕ ಅವನತಿಗಳ ವಿರುದ್ಧದ ಹೋರಾಟವನ್ನು ವ್ಯಾಪಕವಾಗಿ ಬೆಳೆಸುವ ಸಲುವಾಗಿ ಅಖಿಲ ಭಾರತ ಪ್ರಜಾಸತ್ತಾತ್ಮಕ ಯುವಜನ ಸಂಘಟನೆ (ಎಐಡಿವೈಓ) ವತಿಯಿಂದ ಡಿಸೆಂಬರ್ 11 ಮತ್ತು 12ರಂದು ಎರಡು ದಿನಗಳ ಕಾಲ ಜಾರ್ಖಂಡ್ ರಾಜ್ಯದ ಘಾಟಶಿಲಾದಲ್ಲಿ 3ನೇ ಅಖಿಲ ಭಾರತ ಯುವಜನ ಸಮ್ಮೇಳನವನ್ನು ಆಯೋಜಿಸಲಾಗಿದೆ ಎಂದು ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಅಂಬಿಕಾ ಎಸ್. ಜಿ. ತಿಳಿಸಿದರು.
ಶುಕ್ರವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು, ಭವಿಷ್ಯದ ಕ್ರಾತಿಕಾರಿ ಯುವಜನ ಚಳುವಳಿಯನ್ನು ರೂಪಿಸುವ ಸಲುವಾಗಿ ಈ ಸಮ್ಮೇಳನದಲ್ಲಿ ಭಾಗವಹಿಸಲು ದೇಶಾದ್ಯಂತ ವಿವಿಧ ರಾಜ್ಯಗಳಿಂದ ಪ್ರತಿನಿಧಿಗಳು ಜಾರ್ಖಖಂಡ್ ರಾಜ್ಯದ ಘಾಟಶಿಲಾಕ್ಕೆ ಬರುತ್ತಿದ್ದಾರೆ. ದೇಶದ ಆರ್ಥಿಕ, ಸಾಮಾಜಿಕ, ಸಾಂಸ್ಕೃತಿಕ ಪರಿಸ್ಥಿತಿ ದಿನೇ ದಿನೇ ಹದಗೆಡುತ್ತಿದ್ದು, ಇದರ ವಿರುದ್ಧ ಬಲಿಷ್ಠ ಚಳುವಳಿ ಹರಿಯಬಿಡಬೇಕಾಗಿದೆ. ಇದು ಇಂದಿನ ಯುವಕರ ಮುಂದಿರುವ ತುರ್ತು ಕೆಲಸವಾಗಿದೆ. ಆ ನಿಟ್ಟಿನಲ್ಲಿ ಯುವಜನತೆ ಸಕ್ರಿಯವಾಗಿ ಭಾಗವಹಿಸಲು ಆಗಮಿಸುವರು ಎಂದರು.
ಈ ಸಮ್ಮೇಳನವನ್ನು ಸೋಷಲಿಷ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ(ಕಮ್ಯುನಿಸ್ಟ್) ಪಕ್ಷದ ಕೇಂದ್ರ ಸಮಿತಿ ಸದಸ್ಯ ಅರುಣ ಕುಮಾರ್ ಸಿಂಗ್ ಉದ್ಘಾಟಿಸುವರು. ಎಐಡಿವೈಒ ರಾಷ್ಟ್ರೀಯ ಘಟಕದ ಅಧ್ಯಕ್ಷ ರಾಮಾಂಜನಪ್ಪ ಆಲ್ದಳ್ಳಿ, ಪ್ರಧಾನ ಕಾರ್ಯದರ್ಶಿ ಪ್ರತಿಭಾ ನಾಯಕ್ ಅವರು ಭಾಷಣಕಾರರಾಗಿ ಮಾತಾನಾಡುವರು.
ಎಸ್.ಯು.ಸಿ.ಐ(ಸಿ) ಪಾಲಿಟ್ ಬ್ಯೂರೋ ಸದಸ್ಯರಾದ ಕೆ.ರಾಧಾಕೃಷ್ಣ ಅವರು ಸಮಾರೋಪ ಭಾಷಣ ಮಾಡುವರು ಎಂದು ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಜಗನ್ನಾಥ್ ಎಸ್. ಎಚ್. ತಿಳಿಸಿದರು.
ಬಸವಕಲ್ಯಾಣ: ವಿಕಲಚೇತನರು ತಮ್ಮ ಅಂಗವಿಕಲತೆ ಬಗ್ಗೆ ಅಗೌರವ ತಾಳಲಾರದೇ,ಅನುಕಂಪ ತೋರಿಸದೇ ಸ್ವ ಪ್ರತಿಭೆ ಹೊಂದಿದ ಅವರಿಗೆ ಮೂಲಭೂತ ಸೌಲಭ್ಯ ಗಳನ್ನು…
ಕಲಬುರಗಿ: ಸ್ಥಾಪಿತ ಸಿದ್ಧಾಂತ ಹೊಡೆದು ಹಾಕಿ ಅವೈದಿಕ ವಚನ ಸಾಹಿತ್ಯವನ್ನು ಜನಮಾನಸಕ್ಕೆ ಮುಟ್ಟಿಸಿದ ಡಾ.ಎಂ.ಎಂ.ಕಲಬುರ್ಗಿ ಯವರು ಸತ್ಯದ ಸಂಶೋಧಕರಾಗಿದ್ದರು ಎಂದು…
ಕಲಬುರಗಿ: ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಗುರುವಾರ ಸಂಜೆ ತಮ್ಮ ಹುಟ್ಟು ಹಬ್ಬವನ್ನು ಕಲಬುರಗಿ ನಗರದ ಆಳಂದ ನಾಕಾ ರಸ್ತೆಯಲ್ಲಿರುವ…
ಕಲಬುರಗಿ; ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳಾದ ಪಹಣಿಗೆ ಆಧಾರ್ ಜೋಡಣೆ ಮತ್ತು ಸರ್ಕಾರಿ ಜಮೀನುಗಳ ಸಂರಕ್ಷಣೆಯ ಲ್ಯಾಂಡ್ ಬೀಟ್ ಅಪ್ಲಿಕೇಶನ್ ನಲ್ಲಿ…
ಸುರಪುರ: ಹಿಂದಿನ ಕಾಲದಲ್ಲಿ ಅನೇಕ ಜನ ರಾಜರು ಸ್ವತಃ ತಾವೇ ಪಾರಂಪರಿಕ ವೈದ್ಯರಾಗಿದ್ದು ಬೇಟೆಗೆ ಹೋದ ಸಂದರ್ಭದಲ್ಲಿ ತಾವೇ ಮದ್ದು…
ಸುರಪುರ: ಸಾರ್ವಜನಿಕರು ತಮ್ಮ ಕೆಸಲ ಕಾರ್ಯಗಳಿಗಾಗಿ ಕಚೇರಿಗೆ ಬಂದಾಗ ವಿಳಂಬ ಮಾಡದೆ ನ್ಯಾಯಯುತವಾದ ಅರ್ಜಿಗಳ ಕೆಲಸ ಮಾಡಿಕೊಡುವಂತೆ ಕರ್ನಾಟಕ ಲೋಕಾಯುಕ್ತ…