ಸುರಪುರ: ತಾಲೂಕಿನ ಪೇಠ ಅಮ್ಮಾಪುರ ಗ್ರಾಮದಲ್ಲಿ ಮಾರುತೇಶ್ವರ ಕಾರ್ತಿಕೋತ್ಸವದ ಅಂಗವಾಗಿ ಗ್ರಾಮ ಮಟ್ಟದ ವಾಲಿಬಾಲ್ ಟೂರ್ನಾಮೆಂಟ್ ಹಮ್ಮಿಕೊಳ್ಳಲಾಗಿತ್ತು.
ದಿ:ವೆಂಕಣ್ಣ ಬಿ ಯಾದವ್ ಮತ್ತು ಬಸವಲಿಂಗಪ್ಪ ಕಂಗಳ ಇವರ ಸ್ಮರ್ಣಾರ್ಥವಾಗಿ ಪಂದ್ಯಾವಳಿ ಆಯೋಜಿಸಲಾಗಿತ್ತು.ಪಂದ್ಯಾವಳಿಯಲ್ಲಿ ಪ್ರಥಮ ಬಹುಮಾನ ೧೧೧೧೧ ರೂಪಾಯಿ ಮತ್ತು ಕಪ್,ದ್ವಿತಿಯ ಬಹುಮಾನ ೫೫೫೫ ಮತ್ತು ಕಪ್ ಹಾಗು ತೃತಿಯ ಬಹುಮಾನ ೩೩೩೩ ಮತ್ತು ಕಪ್ ಬಹುಮಾನ ಇರಿಸಲಾಗಿತ್ತು.
ಸ್ಥಳಿಯ ಪೇಠ ಅಮ್ಮಾಪುರ ಯುವಕರಿಂದ ೧೦ ತಂಡಗಳನ್ನು ಮಾಡಿ ಬೆಳಿಗ್ಗೆಯಿಂದ ಪಂದ್ಯಾವಳಿ ಆರಂಭಿಸಲಾಗಿತ್ತು.ಸಂಜೇಯವರೆಗೂ ನಡೆದ ಪಂದ್ಯಾವಳಿಯಲ್ಲಿ ಕೊನೆಯದಾಗಿ ಮಾರುತೇಶ್ವರ ವಾಲಿಬಾಲ್ ತಂಡ ಮತ್ತು ಅಪ್ಪು ವಾಲಿಬಾಲ್ ತಂಡ ಫೈನಲ್ ತಲುಪಿ ಅಂತಿಮವಾಗಿ ಮಾರುತೇಶ್ವರ ತಂಡ ಪ್ರಥಮ ಬಹುಮಾನ ತನ್ನದಾಗಿಸಿಕೊಂಡಿತು.ಅಪ್ಪು ತಂಡ ದ್ವಿತಿಯ ಬಹುಮಾನ ಮತ್ತು ಬಸವೇಶ್ವರ ವಾಲಿಬಾಲ್ ತಂಡ ತೃತಿಯ ಬಹುಮಾನಕ್ಕೆ ತೃಪ್ತಿ ಪಟ್ಟಕೊಂಡವು.
ನಂತರ ನಡೆದ ಬಹುಮಾನ ವಿತರಣೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಯುವ ಮುಖಂಡ ಮಹೇಶ ವ್ಹಿ ಯಾದವ್ ಹಾಗು ಗ್ರಾಮ ಪಂಚಾಯತಿ ಅಧ್ಯಕ್ಷ ಶರಣಬಸವ ಕಂಗಳ ಅವರು ಭಾಗವಹಿಸಿ ವಿಜೇತ ತಂಡಗಳಿಗೆ ಬಹುಮಾನ ವಿತರಿಸಿದರು.
ಕಲಬುರಗಿ: ಕರ್ನಾಟಕ ಸರ್ಕಾರವು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ರಾಷ್ಟ್ರೀಯ ವೈದ್ಯರ ದಿನಾಚರಣೆಯ ಅಂಗವಾಗಿ ಪ್ರತಿ ವರ್ಷ ಜುಲೈ…
ಕಲಬುರಗಿ: ‘ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಸ್ಥಾನವನ್ನು ಮುಸ್ಲಿಂ ಸಮುದಾಯಕ್ಕೆ ನೀಡಬೇಕು. ಮುಂಬರುವ ದಿನಗಳಲ್ಲಿ ಬರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ…
ಕಲಬುರಗಿ: ವಚನ ಪಿತಾಮಹ ಎಂದು ಕರೆಸಿಕೊಳ್ಳುವ ಡಾ. ಫ.ಗು. ಹಳಕಟ್ಟಿ ಯವರು ಬಸವಾದಿ ಶರಣರ ವಚನ ಸಾಹಿತ್ಯವನ್ನು ಸಂರಕ್ಷಣೆ ಮಾಡುವ…
ಶಹಾಬಾದ: ಖಾಸಗಿ ಟೆಲಿಕಾಂ ಕಂಪನಿಗಳು ಮೊಬೈಲ್ ರೀಚಾರ್ಜ್ಗಳ ಬೆಲೆಗಳನ್ನು ಅನಿಯಂತ್ರಿತವಾಗಿ ಹೆಚ್ಚಳ ಮಾಡಿರುವುದನ್ನು ತಕ್ಷಣವೇ ಹಿಂಪಡೆಯಬೇಕೆಂದು ಆಗ್ರಹಿಸಿ ಎಐಡಿವಾಯ್ಓ ವತಿಯಿಂದ…
ಶಹಾಬಾದ :ಎಲ್ಲರಿಗೂ ಸರಕಾರಿ ನೌಕರಿ ಬೇಕು.ಆದರೆ ಸರಕಾರಿ ಶಾಲೆಯಲ್ಲಿ ನಿಮ್ಮ ಮಕ್ಕಳು ಓದುವುದು ಬೇಡ ಎಂದರೆ ಹೇಗೆ ? ಮೊದಲು…
ವಿಜಯಪುರ: ಇಂದಿನ ಪ್ರಸ್ತುತ ಶಿಕ್ಷಣ ಪದ್ದತಿ ಕೌಶಲ್ಯಾಧಾರಿತ ಹಾಗೂ ಔದ್ಯೋಗಿಕ ಮತ್ತು ಉದ್ಯೋಗ ಪೂರಕನಂತೆ ಇರಬೇಕು ಎಂದು ಕರ್ನಾಟಕ ರಾಜ್ಯ…