ಬಿಸಿ ಬಿಸಿ ಸುದ್ದಿ

ವಿಧಾನ ಪರಿಷತ್ ಚುನಾವಣೆಯಲ್ಲಿ ಶಾಂತಿಯುತ ಮತದಾನ

ಶಹಾಬಾದ: ಕಲಬುರಗಿ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಶುಕ್ರವಾರ ನಡೆದ ಮತದಾನ ಪ್ರಕ್ರಿಯೆ ಬಹುತೇಖ ಶಾಂತಿಯುತವಾಗಿ ನಡೆದಿದ್ದು, ಶೇ ೯೯.೧೪ರಷ್ಟು ಮತದಾನವಾಗಿದೆ.

ತಾಲೂಕಿನ ಐದು ಮತದಾನ ಕೇಂದ್ರದಗಳಾದ ಶಹಾಬಾದ ನಗರಸಭೆ, ಹೊನಗುಂಟಾ,ಮರತೂರ, ತೊನಸನಹಳ್ಳಿ(ಎಸ್),ಭಂಕೂರ ಗ್ರಾಮ ಪಂಚಾಯತಿಯ ಮತದಾನ ಕೇಂದ್ರದಲ್ಲಿ ಬೆಳಿಗ್ಗೆ ೭ಗಂಟೆಗೆ ಮತದಾನ ಪ್ರಾರಂಭಗೊಂಡಿತು. ಬೆಳಗಿನ ಸಮಯದಲ್ಲಿ ನಗರಸಭೆಯ ಹಾಗೂ ಗ್ರಾಪಂ ಸದಸ್ಯ ಮತದಾರರು ಶೇ೭೫ರಷ್ಟು ಬಂದು ಬಿರುಸಿನ ಮತ ಚಲಾಯಿಸಿದರು. ಮಧ್ಯಾಹ್ನ ಹೊತ್ತಿಗೆ ಮತದಾನ ನೀರಸ ಪ್ರಕ್ರಿಯೆ ಕಂಡುಬಂದಿತು. ನಂತರ ಉಳಿದ ಮತದಾರರು ೨ ಗಂಟೆಯ ಒಳಗಾಗಿ ಮತಚಲಾಯಿಸಿದರು. ನಗರಸಭೆಯ ಹಾಗೂ ಗ್ರಾಪಂ ಸದಸ್ಯರನ್ನು ಕರೆಯಿಸಿ ಮತದಾನ ಮಾಡಲು ವಿವಿಧ ರಾಜಕೀಯ ಪಕ್ಷಗಳು ಹರಸಾಹಸ ಪಟ್ಟರು.

ವಿವಿಧ ಪಕ್ಷದ ಮುಖಂಡರು ಮತದಾರರಿಗೆ ಕರೆ ಮಾಡಿ ಮತ ಚಲಾಯಿಸಲು ಹೇಳುತ್ತಿರುವುದು ಕಂಡು ಬಂದಿತು.ಅಲ್ಲದೇ ತಮ್ಮ ತಮ್ಮ ಅಭ್ಯರ್ಥಿಗಳ ಪರವಾಗಿ ಮತಗಟ್ಟೆಗೆ ಬರುತ್ತಿದ್ದ ಮತದಾರರನ್ನು ಸೆಳೆಯಲು ಕಸರತ್ತು ನಡೆಸುತ್ತಿದ್ದ ದೃಶ್ಯಗಳು ಕಂಡು ಬಂದವು. ಮತದಾನದ ವೇಳೆ ಮಾಸ್ಕ್ ಧರಿಸಲು ಹೇಳಿದಲ್ಲದೇ, ಸಾಮಾಜಿಕ ಅಂತರ ಕಾಪಾಡಿಕೊಂಡು ಮತ ಚಲಾಯಿಸಲು ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗಿತ್ತು.ಯಾವುದೇ ಅಹಿತಕರ ಘಟನೆ ನಡೆಯದಂತೆ ಸೂಕ್ತ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.ಅಲ್ಲದೇ ತಹಸೀಲ್ದಾರ ಸುರೇಶ ವರ್ಮಾ ಹಾಗೂ ನಗರಸಬೆಯ ಪೌರಾಯುಕ್ತ ಡಾ.ಕೆ.ಗುರಲಿಂಗಪ್ಪ ಮತದಾನ ಕೇಂದ್ರಗಳಿಗೆ ಬೇಟಿ ನೀಡಿ ಪರಿಶೀಲಿಸಿದರು. ಮತದಾನ ಕೇಂದ್ರಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಕೂಡ ಮಾಲಾಗಿತ್ತು.

ಒಟ್ಟು ೧೨೨ ಮತದಾರರಲ್ಲಿ ೧೨೧ ಮತದಾರರು ಮತ ಚಲಾಯಿಸಿದರು. ಅದರಲ್ಲಿ ೫೯ ಪುರುಷ ಮತದಾರರು ಮತ್ತು ೬೨ ಮಹಿಳಾ ಮತದಾರರು ಮತ ಚಲಾಯಿಸಿದರು.ಭಂಕೂರ ಗ್ರಾಪಂಯ ಸದಸ್ಯರೊಬ್ಬರೂ ಮಾತ್ರ ಮತದಾನವನ್ನು ಬಹಿಷ್ಕಾರ ಮಾಡಿರುವುದು ಕಂಡು ಬಂದಿತು.ಇವರೊಬ್ಬರು ಮತದಾನ ಮಾಡಿದ್ದರೇ ನೂರಕ್ಕೆ ನೂರರಷ್ಟು ಮತದಾನವಾಗುತ್ತಿತ್ತು.

emedialine

Recent Posts

371 (ಜೆ) ವಿಧಿಯ ನಿಬಂಧನೆಗಳ ಪರಿಣಾಮಕಾರಿ ಅನುμÁ್ಠನಕ್ಕೆ ಒತ್ತಾಯ

ಕಲಬುರಗಿ: ಹೈದ್ರಾಬಾದ್ ಕರ್ನಾಟಕ ಹೋರಾಟ ಸಮಿತಿಯು, ಬೆಂಗಳೂರಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಚುನಾಯಿತ ಪ್ರತಿನಿಧಿಗಳು ಮತ್ತು ಸಚಿವರ ಸಭೆ ನಡೆಸಿ,…

6 hours ago

ಮರಗಮ್ಮ ದೇವಿ ಮೂರ್ತಿ ಗಂಗಾಸ್ನಾನ | ಎಂಟು ಗಂಟೆಗಳ ಕಾಲ ಮೆರವಣಿಗೆ

ಸುರಪುರ: ಇಲ್ಲಿಯ ರಂಗಂಪೇಟೆ-ತಿಮ್ಮಾಪುರದ ಆರಾಧ್ಯ ದೇವತೆ ಮರಗಮ್ಮ ದೇವಿಯ ನೂತನ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ದೇವಿಯ ಬೆಳ್ಳಿಯ ಮೂರ್ತಿ ಗಂಗಾಸ್ನಾನ…

7 hours ago

ಒತ್ತಡ ನಿಭಾಯಿಸಲು ಪರಿಹಾರ ಒದಗಿಸುವುದು ಯುವ ಸ್ಪಂದನೆ ಉದ್ದೇಶ

ಸುರಪುರ: ಯುವ ಸಬಲೀಕರಣ, ಅರೋಗ್ಯ ಜೀವನಶೈಲಿ,ಲೈಂಗಿಕತೆ ಮತ್ತು ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ನಿಭಾಯಿಸುತ್ತಿರುವ ಸವಾಲುಗಳು, ಭಾವನಾತ್ಮಕ ಸಮಸ್ಯೆಗಳು ಭಾವನೆಗಳ ನಿಭಾಯಿಸುವಿಕೆ,ನೆನಪಿನ…

7 hours ago

ಶಹಾಬಾದ: ಸಂಪೂರ್ಣತಾ ಅಭಿಯಾನ ಉತ್ಸವಕ್ಕೆ ಚಾಲನೆ

ಶಹಾಬಾದ: ನೀತಿ ಆಯೋಗವು ಮಾನವ ಅಭಿವೃದ್ಧಿ ಸೂಚಕಗಳಲ್ಲಿ ಹಿಂದುಳಿದ ತಾಲೂಕಗಳಿಗೆ ಆರೋಗ್ಯ, ಪೆÇೀಷಣೆ, ಕೃಷಿ ಮೇಲೆ ಕೇಂದ್ರೀಕರಿಸಿದ ಸಂಪೂರ್ಣತಾ ಅಭಿಯಾನ…

7 hours ago

ಗಿಡ-ಮರಗಳ ಸಂರಕ್ಷಣೆ ಮಾಡದಿದ್ದರೇ ಪ್ರಕೃತಿಗೆ ಗಂಡಾಂತರ ತಪ್ಪಿದ್ದಲ್ಲ

ಶಹಾಬಾದ: ಕೇವಲ ಒಂದು ದಿನ ವನಮಹೋತ್ಸವ ಪರಿಸರ ದಿನಾಚರಣೆಯಂತಹ ಕಾರ್ಯಕ್ರಮ ಮಾಡಿದರೆ ಸಾಲದು, ಬದಲಾಗಿ ಗಿಡ-ಮರಗಳ ಸಂರಕ್ಷಣೆ ಮಾಡುವುದು ಅವಶ್ಯವಾಗಿದೆ.…

7 hours ago

ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮ

ಶಹಾಬಾದ: ತುಳಿತಕ್ಕೆ ಒಳಗಾದವರ ಹಾಗೂ ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮರಾಗಿದ್ದರು ಎಂದು ಕಾರ್ಮಿಕ ಪ್ರಧಾನ…

7 hours ago