ಚಿತ್ರಕಲಾ ಸ್ಪರ್ಧೆಯಲ್ಲಿ ಕಾರ್ತಿಕ್ ಪ್ರಥಮ

0
122

ಶಹಾಬಾದ: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ೬೫ನೇ ಮಹಾಪರಿನಿರ್ವಾಣ ನಿಮಿತ್ತ ವಾಡಿ ನಗರದ ಭೌದ್ಧ ಸಮಾಜ, ಡಾ.ಬಿ.ಆರ್.ಅಂಬೇಡ್ಕರ್ ತರುಣ ಸಂಘ ಹಾಗೂ ಇಂಟರನ್ಯಾಷನಲ್ ಬುದ್ಧಿಷ್ಟ ಯೂತ್ ಆರ್ಗನೈಷೇಷನ್ ಸಂಯುಕ್ತ ಆಶ್ರಯದಲ್ಲಿ ಪ್ರೌಢಶಾಲಾ ವಿದ್ಯಾಥಿಗಳಿಗೆ ಏರ್ಪಡಿಸಲಾಗಿದ್ದ ಚಿತ್ತಾಪೂರ ತಾಲೂಕಾ ಮಟ್ಟದ ಚಿತ್ರಕಲಾ ಸ್ಫರ್ಧೆಯಲ್ಲಿ ಭಂಕೂರ ಗ್ರಾಮದ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಕಾರ್ತಿಕ್ ಮೋಹನ ಪ್ರಥಮ ಸ್ಥಾನ ಪಡೆದುಕೊಂಡಿದ್ದಾನೆ.

ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗೆ ಜನೇವರಿ ೧ ರಂದು ನಡೆಯಲಿರುವ ಸಮಾರಂಭದಲ್ಲಿ ೧೦ಸಾವಿರ ರೂ. ಬಹುಮಾನ ನೀಡಲಾಗುತ್ತದೆ. ಈ ವಿದ್ಯಾರ್ಥಿಯ ಸಾಧನೆಗೆ ಶಾಳೆಯ ಮುಖ್ಯಗುರು, ಚಿತ್ರಕಲಾ ಶಿಕ್ಷಕ ಹಾಗೂ ಸಹಶಿಕ್ಷಕರ ವೃಂದ ಹಾಗೂ ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡಿಸಿದ್ದಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here