ಬಿಸಿ ಬಿಸಿ ಸುದ್ದಿ

ಹವಾಮಾನ ವೈಪರಿತ್ಯ : ಪ್ರಚಲಿತ ಕೃಷಿ ಕುರಿತು ಕಾರ್ಯಗಾರ

ಕಲಬುರಗಿ: ವಲಯ ಕೃಷಿ ಸಂಶೋಧನಾ ಕೇಂದ್ರ ಕಲಬುರಗಿಯಲ್ಲಿ ಪ್ರಚಲಿತ ಕೃಷಿ ಚಟುವಟಿಕೆ ಕುರಿತು ಕಾರ್ಯಗಾರ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಉದ್ಘಾಟಕರಾದ ಸಮದ್ ಪಟೇಲ್, ಉಪ ಕೃಷಿ ನಿರ್ದೇಶಕರು ಇವರು ಮಾತನಾಡುತ್ತಾ ಕಾರ್ಯಗಾರದ ಪ್ರಾಮುಖ್ಯತೆ ವಿವರಿಸಿದರು. ಎಲ್ಲಾ ಕೃಷಿ ಅಧಿಕಾರಿಗಳು ವಿಜ್ಞಾನಿಗಳೊಂದಿಗೆ ಚರ್ಚೆಯಲ್ಲಿ ಸಕ್ರಿಯವಾಗಿ ಭಾಗವಹಿಸಿ ಕಾರ್ಯಗಾರ ಪ್ರಯೋಜನ ಪಡೆದುಕೊಳ್ಳಬೇಕೆಂದು ಮಾಹಿತಿ ನೀಡಿದರು.

ರೈತರು ತೊಗರಿ & ಕಡಲೆ ಬೆಳೆಗಳಲ್ಲಿ ಹವಾಮಾನ ವೈಪರಿತ್ಯ ಹಾಗೂ ವಿವಿಧ ರೋಗಗಳಿಂದ ಸಾಕಷ್ಟು ನಷ್ಟ ಅನುಭವಿಸುತ್ತಿದ್ದಾರೆ ಅದಕ್ಕೆ ಕಾರಣಗಳನ್ನು ತಿಳಿದುಕೊಂಡು ರೈತರು ಮುಂಜಾಗ್ರತೆ ವಹಿಸುವಂತೆ ಕ್ರಮ ಕೈಗೊಳ್ಳಬೇಕೆಂದು ತಿಳಿಸಿದರು. ಕೆ.ವಿ,ಕೆ ಮುಖ್ಯಸ್ಥರಾದ ಡಾ. ರಾಜು ತೆಗ್ಗಳ್ಳಿಯವರು ಮಾತನಾಡುತ್ತಾ ಕೃಷಿ ಸಂಶೋಧನಾ ಕೇಂದ್ರದಲ್ಲಿನ ಹೊಸ ತಾಂತ್ರಿಕತೆಗಳ ಮಾಹಿತಿ ಪಡೆದು ಅದನ್ನು ರೈತರಿಗೆ ಪ್ರಚಾರಪಡಿಸಬೇಕೆಂದು ತಿಳಿಸಿದರು.

ಸಹ ಸಂಶೋಧನಾ ನಿರ್ದೇಶಕರಾದ ಡಾ.ಎಂ.ಎಂ.ಧನೋಜಿ ರವರು ಅಧ್ಯಕ್ಷಿಯ ಭಾಷಣ ಮಾಡುತ್ತಾ, ಈ ಹಿಂದೆ ತೊಗರಿಗೆ ಒಂದು ಅಥವಾ ಎರಡು ರೋಗ ಮತ್ತು ಕೀಟಗಳಿದ್ದು ಇತ್ತೀಚೆಗೆ ಸಾಕಷ್ಟು ಸಮಸ್ಯೆಗಳು ಕಂಡುಬರುತ್ತಿವೆ. ಈ ಸವಾಲಿಗೆ ಪರಿಹಾರ ಕಂಡುಕೊಳ್ಳಬೇಕೆಂದು ಅಭಿಪ್ರಾಯ ಪಟ್ಟರು.

ಜಂಟಿ ಕೃಷಿ ನಿರ್ದೇಶಕರಾದ ರತೇಂದ್ರನಾಥ ಸೂಗೂರು ಸಹ ಕಾರ್ಯಗಾರದಲ್ಲಿ ಭಾಗವಹಿಸಿ ತಮ್ಮ ಇಲಾಖೆ ಸಿಬ್ಬಂದಿಗಳೊಂದಿಗೆ ವಿವಿಧ ಕೃಷಿ ಪ್ರಚಲಿತ ವಿಷಯಗಳ ಕುರಿತು ಚರ್ಚೆ ನಡೆಸಿದರು ಹಾಗು ಕಾರ್ಯಗಾರದ ಸದುಪಯೋಗ ಪಡಿಸಕೊಳ್ಳಬೇಕೆಂದು ಅಭಿಪ್ರಾಯ ಪಟ್ಟರು. ಡಾ. ಅನುಸುಯಾ ಹೂಗಾರ ಉಪ ಕೃಷಿ ನಿರ್ದೇಶಕರು, ಕೃಷಿ ಇಲಾಖೆ, ಕಲಬುರಗಿ-೧ ಇವರು ಸಹ ಈ ಕಾರ್ಯಗಾರ ಅಯೋಜಿಸಲು ಕಾರಣಿ ಭೂತರಾಗಿದ್ದು ಪ್ರಚಲಿತ ಕೃಷಿ ವಿದ್ಯಾಮಾನಗಳ ಕುರಿತು ಮಾಹಿತಿ ನೀಡಿದರು.

ಈ ಕಾರ್ಯಕ್ರಮದಲ್ಲಿ ಹಿರಿಯ ವಿಜ್ಞಾನಿಗಳಾದ ಡಾ.ರಾಚಪ್ಪ ವ್ಹಿ. ಹಾವೇರಿ, ಕ್ಷೀಪ್ರ ಸಂಚಾರ ಸಮೀಕ್ಷಾ ವರದಿ ಸಾರಾಂಶ ಮಂಡಿಸಿದರು ಹಾಗು ತೊಗರಿ ಖಂಡಾಗಲು ಕಾರಣ ಮತ್ತು ನಿರ್ವಹಣೆ ಮಾಹಿತಿ ನೀಡಿದರು. ಡಾ. ಮಲ್ಲಿಕಾರ್ಜುನ ಕೆಂಗನಾಳ ಇವರು ದ್ವಿದಳ ದಾನ್ಯಗಳಲ್ಲಿ ಕಂಡು ಬರುತ್ತಿರುವ ಹೊಸ ರೋಗಗಳ ಪರಿಚಯ, ಉಲ್ಬಣಕ್ಕೆ ಕಾರಣಗಳು ಮತ್ತು ನಿರ್ವಹಣೆ ಮಾಹಿತಿ ನೀಡಿದರು. ಡಾ.ಮುನಿಸ್ವಾಮಿ ಎಸ್. ಇತ್ತೀಚೆಗೆ ಬಿಡುಗಡೆಯಾದ ತೊಗರಿ ತಳಿಗಳ ಗುಣಲಕ್ಷಣಗಳು ಕುರಿತು ಮಾಹಿತಿ ಮಾಡಿಕೊಟ್ಟರು.

ಕಾರ್ಯಗಾರ ನಂತರ ಕ್ಷೇತ್ರ ಬೇಟಿ ಅಯೋಜಿಸಲಾಗಿದ್ದು ಡಾ. ಲಕ್ಷುಮಣ, ಸೇರಿದಂತೆ ವಲಯ ಕೃಷಿ ಸಂಶೋಧನಾ ಕೇಂದ್ರ ಹಾಗು ಕೆ,ವಿ.ಕೆ ಕಲಬುರಗಿಯ ಎಲ್ಲಾ ವಿಜ್ಞಾನಿಗಳು ಕ್ಷೇತ್ರ ಭೇಟಿಯಲ್ಲಿ ಭಾಗವಹಿಸಿ ನೂತನ ತಾಂತ್ರಿಕತೆಗಳ ಕುರಿತು ಕೃಷಿ ಇಲಾಖೆ ಅಧಿಕಾರಿಗಳಗೆ ಮಾಹಿತಿ ಮಾಡಿ ಕೊಟ್ಟರು. ಈ ಕಾರ್ಯಕ್ರಮದಲ್ಲಿ ಕೃಷಿ ಇಲಾಖೆಯ ಸುಮಾರು ೧೦೩ ಜನ ಅಧಿಕಾರಿಗಳು ಭಾಗವಹಿಸಿದ್ದರು.

emedialine

Recent Posts

ನೀರಾವರಿ ಸಲಹಾ ಸಮಿತಿಗೆ ರೈತ ಹೋರಾಟಗಾರರ ತೆಗೆದುಕೊಳ್ಳಿ; ಮಲ್ಲಿಕಾರ್ಜುನ ಸತ್ಯಂಪೇಟೆ

ಸುರಪುರ: ಕೃಷ್ಣಾ ಕಾಲುವೆಗಳಿಗೆಗೆ ನೀರು ಹರಿಸಲು ನಿರ್ಣಯ ಕೈಗೊಳ್ಳಲು ನಡೆಸುವ ನೀರಾವರಿ ಸಲಹಾ ಸಮಿತಿಗೆ ರೈತ ಹೋರಾಟಗಾರರನ್ನು ಸೇರಿಸಿಕೊಳ್ಳಬೇಕು ಎಂದು…

19 mins ago

ಅಖಿಲ ಭಾರತ ವೀ.ಲಿಂ ಮಹಾಸಭಾ ನೂತನ ಅಧ್ಯಕ್ಷ ನಿದೇರ್ಶಕರ ನೇಮಕ

ಸುರಪುರ: ತಾಲೂಕ ವೀರಶೈವ ಲಿಂಗಾಯಕ ಸಮಿತಿಯಂತೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಕೂಡ ಎರಡು ತಾಲೂಕಿನ ವೀರಶೈವ ಲಿಂಗಾಯತ…

22 mins ago

ಡೆಂಘೀ ವಿರೋಧಿ ಮಾಸಾಚರಣೆ | ಮನೆಯ ಹೊರಗೂ ಸ್ವಚ್ಛತೆಗೆ ಆದ್ಯತೆ ನೀಡಿದರೆ ಯಾವ ಕಾಯಿಲೆ ಬರದು

ಸುರಪುರ: ಎಲ್ಲರು ತಮ್ಮ ಮನೆಯೊಳಗೆ ಸ್ವಚ್ಛತೆಗೆ ಆದ್ಯತೆ ನೀಡುತ್ತಾರೆ,ಅದರಂತೆ ಮನೆಯ ಹೊರಗೂ ಸ್ವಚ್ಛತೆಗೆ ಆದ್ಯತೆ ನೀಡಿದಲ್ಲಿ ಡೆಂಘೀ ಸೇರಿದಂತೆ ಯಾವುದೇ…

25 mins ago

ಶಾಸಕ ಅಲ್ಲಮಫ್ರಬು ಪಾಟೀಲರಿಂದ ಕಂಪ್ಯೂಟರ್ ಪ್ರಮಾಣ ಪತ್ರ ವಿತರಣೆ

ಕಲಬುರಗಿ: ನಗರದ ಬಸವ ಸಿರಿ ಕಂಪ್ಯೂಟರ್ ತರಬೇತಿ ಕೇಂದ್ರದಲ್ಲಿ ಭಾನುವಾರ ಮುಂಜಾನೆ. 11 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷ ಮತ್ತು…

31 mins ago

ತೊಗರಿ ಮತ್ತು ಹತ್ತಿ ಬೆಳೆಗಳ ಸಸ್ಯ ಸಂರಕ್ಷಣಾ ತರಬೇತಿ 18ಕ್ಕೆ

ಕಲಬುರಗಿ; ಜಿಲ್ಲೆಯಲ್ಲಿ ಮುಂಗಾರು ಬೆಳೆಗಳಾದ ತೊಗರಿ, ಹತ್ತಿ, ಉದ್ದು, ಹೆಸರು ಮತ್ತು ಸೋಯಾಬಿನ್ ಬೆಳೆಯಲಾಗಿದ್ದು, ಇದರಲ್ಲಿ ಕಂಡು ಬರುವ ಹುಳು,…

48 mins ago

ಡೆಂಗ್ಯೂ ,ಝಿಕಾ, ಚಿಕನ್ ಗುನ್ಯಾ ತಡೆಗಟ್ಟಲು ಸರಕಾರಕ್ಕೆ ವೆಲ್ಫೇರ್ ಪಾರ್ಟಿ ಆಗ್ರಹ

  ಕಲಬುರಗಿ : "ಜಿಲ್ಲೆಯಲ್ಲಿ ಡೆಂಗಿ ಜ್ವರ ಹಾವಳಿ ದಿನೇ ದಿನೇ ವ್ಯಾಪಕವಾಗುತ್ತಿದೆ. ಝಿಕಾ ವೈರಾಣು ಸೋಂಕು, ಚಿಕನ್ ಗುನ್ಯಾ…

1 hour ago