ಶಹಾಬಾದ: ನಗರದ ಸಹರಾ ಫಂಕ್ಷನ್ ಹಾಲ್ನಲ್ಲಿ ಡಿಸೆಂಬರ್ ೧೮ ರಂದು ಬೆಳಿಗ್ಗೆ ೯ ಗಂಟೆಗೆ ಕೋವಿಡ್-೧೯ ಸಂದರ್ಭದಲ್ಲಿ ಮರಣ ಹೊಂದಿದ ಹಾಗೂ ಸಿಡಿಲು ಬಡಿದು ಸಾವನಪ್ಪಿದವರ ಕುಟುಂಬಕ್ಕೆ ಪರಿಹಾರ ಚೆಕ್ನ್ನು ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಪರಿಹಾರ ಚೆಕ್ ಅನ್ನು ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಅವರು ವಿತರಿಸಲಿದ್ದಾರೆ ಎಂದು ತಹಸೀಲ್ದಾರ ಸುರೇಶ ವರ್ಮಾ ತಿಳಿಸಿದ್ದಾರೆ.