ಆನಂದಮಯ ಜೀವನಕ್ಕೆ ಆಧ್ಯಾತ್ಮಿಕ ಶಿಕ್ಷಣ ಅಗತ್ಯ: ಬಿ.ಕೆ ಮೃತ್ಯುಂಜಯ

ಕಲಬುರಗಿ: ಮಾನವನ ಆನಂದಮಯ ಜೀವನ ಸಾಗಿಸಲಿಕ್ಕಾಗಿ ಆಧ್ಯಾತ್ಮಿಕ ಶಿಕ್ಷಣ ಪಡೆದುಕೊಳ್ಳುವುದು ಬಹು ಅಗತ್ಯವಾಗಿದೆ ಎಂದು ಮೌಂಟ್‌ ಅಬುವಿನ ಬ್ರಹ್ಮಕುಮಾರಿ ವಿಶ್ವವಿದ್ಯಾಲಯದ ಶಿಕ್ಷಣ ವಿಭಾಗದ ಚೇರ್‌ಪರ್ಸನ್ ಬಿ.ಕೆ.ಮೃತ್ಯುಂಜಯ ಅವರು ಅಭಿಪ್ರಾಯಪಟ್ಟರು.

ನಗರದ ಹೊರವಲಯದಲ್ಲಿರುವ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಗೀತಾನಗರದ ಅಮೃತ ಸರೋವರದಲ್ಲಿನ ರಿಟ್ರೀಟ್‌ ಸೆಂಟರ್‌ನಲ್ಲಿ ಶರಣಬಸವ ವಿಶ್ವವಿದ್ಯಾಲಯ, ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ, ರಾಜಯೋಗ ಶಿಕ್ಷಣ ಮತ್ತು ಸಂಶೋಧನಾ ಫೌಂಡೇಶನ್‌ ಇವರುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿರುವ ‘ಆಧ್ಯಾತ್ಮ ಮತ್ತು ಮೌಲ್ಯಗಳ ಮೂಲಕ ಸ್ವಸಬಲೀಕರಣ ಮತ್ತು ಒತ್ತಡ ಮುಕ್ತ ಜೀವನಕ್ಕೆ ಶಿಕ್ಷಣ’ ಎಂಬ ಸಮ್ಮೇಳನದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಅವರು ಮಾತನಾಡಿದರು.

ವಿಶ್ವದ ವಿವಿಧೆಡೆ ವಿವಿಧ ರೀತಿಯ ಶಿಕ್ಷಣ ನೀಡುವ ಕೇಂದ್ರಗಳು ಕಾಣಿಸುತ್ತವೆ, ಆದರೆ ಆಧ್ಯಾತ್ಮಿಕ ಶಿಕ್ಷಣ ನೀಡುವುದು ನಮ್ಮ ಭಾರತದಲ್ಲಿ ಅದೂ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ನೀಡುತ್ತಿರುವುದು ಆದರಣೀಯ ಎಂದು ಹೇಳಿದ ಅವರು, ಮಹಿಳೆಯರ ಸಶ್ಯಸ್ತ್ರೀಕರಣಕ್ಕೆ ನಮ್ಮ ಸಂಸ್ಥೆಯಲ್ಲಿ ನೂರಕ್ಕೆ ನೂರು ಪ್ರಮಾಣದಲ್ಲಿ ಮಹಿಳೆಯರಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ಹೇಳಿದರು.

ಇಂದಿನ ದಿನಗಳಲ್ಲಿ ತಾಂತ್ರಿಕ , ವೈದ್ಯಕೀಯ, ಇನ್ನಿತರ ಶಿಕ್ಷಣ ವಿಭಾಗಗಳು ಕೇವಲ ಪದವಿ ಹಾಗೂ ಉದ್ಯೋಗ ಪಡೆಯುವಲ್ಲಿ ಸಹಕರಿಸುತ್ತವೆ. ಆದರೆ, ನಮ್ಮ ಆತ್ಮದ ಶುದ್ದೀಕರಣ, ಸಮಾಜ ವಿಕಾಸಕ್ಕೆ ಆಧ್ಯಾತ್ಮಿಕ ಶಿಕ್ಷಣ ಮುಖ್ಯವಾಗಿದೆ ಎಂದರು.

ಶಿಕ್ಷಣವು ನಮ್ಮ ಆಂತರಿಕ ಜ್ಯೋತಿಯನ್ನು ಜಾಗೃತಿಗೊಳಿಸಬೇಕು, ನಿತ್ಯ ನಮ್ಮಲ್ಲಿರುವ ಒತ್ತಡ ನಿಯಂತ್ರಿಸಲು ಸ್ವಯ0 ಶಕ್ತಿಯೂ ಅಗತ್ಯವಾಗಿರುತ್ತದೆ, ಆ ತರಹದ ಉತ್ತಮ ಶಿಕ್ಷಣ ಪಡೆದಾಗ ಮಾತ್ರ ಸಮಾಜದ ಅಭ್ಯುದಯವಾಗುವುದು ಎಂದು ಬಿ.ಕೆ.ಮೃತ್ಯುಂಜಯ ಅವರು ತಿಳಿಸಿದರು.

ಪ್ರಸ್ತುತ ದಿನಗಳಲ್ಲಿ ಅಪರಾಧೀಕರಣ, ಜಾತೀಕರಣ ಹಾಗೂ ವಾಣಿಜ್ಯಕರಣ ಹೆಚ್ಚಳವಾಗಿದೆ, ಪ್ರಕೃತಿಯೊಂದಿಗೆ ಬೆರೆತು ಜೀವನ ನಡೆಸುವ ಶಿಕ್ಷಣ ಕಾಣುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಬಟ್ಟು ಸತ್ಯನಾರಾಯಣ ಅವರು ಮಾತನಾಡಿದರು.

ಮುಖ್ಯ ಅತಿಥಿಗಳಾಗಿ ಬಿ.ಕೆ ಸುಮನ್, ಬಿ.ಕೆ.ಲಕ್ಷ್ಮಿ, ಬಿ.ಕೆ.ಪ್ರೇಮ್, ಶರಣಬಸವ ವಿ.ವಿಯ ಸಮ ಕುಲಪತಿ ಡಾ. ವಿ. ಡಿ ಮೈತ್ರಿ, ಕುಲಸಚಿವ ಡಾ.ಅನಿಲಕುಮಾರ , ಬಿ.ಕೆ ಧಾನೇಶ್ವರಿ, ಬಿ.ಕೆ ಶೀವಲೀಲಾ, ಸವಿತಾ, ರಾಜೇಶ್ವರಿ, ಕಿರಣ ಮಾಕಾ, ಸೇರಿದಂತೆ ಇನ್ನಿತರರು ವೇದಿಕೆಯ ಮೇಲೆ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ರಾಜಯೋಗಿನಿ ಬಿ.ಕೆ ವಿಜಯಾ ಅವರು ಪ್ರಾಸ್ತಾವಿಕ ಮಾತನಾಡಿ, ಅತಿಥಿಗಳನ್ನು ಸ್ವಾಗತಿಸಿದರು. ತನುಪ್ರಿಯಾ ಭಾರತ ನಾಟ್ಯ ಪ್ರದರ್ಶಿಸಿದರು. ಈ ವೇಳೆ ಶರಣಬಸವ ವಿವಿಯ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಜರಿದ್ದರು. ಕಾರ್ಯಕ್ರಮ ಪ್ರಾರಂಭಕ್ಕಿಂತ ಮುಂಚೆ ಇತ್ತೀಚೆಗೆ ಹೆಲಿಕಾಪ್ಟರ್ ದುರಂತದಲ್ಲಿ ನಿಧನರಾದ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿ, ಮೌನಚರಣೆ ಮಾಡಲಾಯಿತು.

emedialine

Recent Posts

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

2 hours ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

6 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

7 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

9 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

20 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

22 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420