ಶಹಾಬಾದ:ವಿಜಯಪುರ ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ಹಾಗೂ ಚಿತ್ತಾಪೂರ ಪುರಸಭೆಯ ಕಂದಾಯ ನಿರೀಕ್ಷಕ ರಾಹುಲ ಕಾಂಬಳೆ ಮೇಲೆ ಹಲ್ಲೆಯನ್ನು ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘದ ಜಿಲ್ಲಾಧ್ಯಕ್ಷ ಮುತ್ತಣ್ಣ ಭಂಡಾರಿ ತೀವ್ರವಾಗಿ ಖಂಡಿಸಿದ್ದಾರೆ.
ಅವರು ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ಅವರು ಜಿಲ್ಲೆಯಲ್ಲಿ ಪ್ರಾಮಾಣಿಕ ಕರ್ತವ್ಯದ ಮೂಲಕವೇ ತಮ್ಮನ್ನು ವಿಶಿಷ್ಟವಾಗಿ ಗುರುತಿಸಿಕೊಂಡಿದ್ದಾರೆ.ಇಂತಹ ಅಧಿಕಾರಿ ಮೇಲೆ ವಿನಾಕಾರಣ ಮಾರಾಣಾಂತಿಕ ಹಲ್ಲೆ ನಡೆಸಿ ಅಧಿಕಾರಿಗಳಲ್ಲಿ ಭಯದ ವಾತಾವರಣ ಸೃಷ್ಟಸಲಾಗುತ್ತಿದೆ ಎಂದು ದೂರಿದರು.
ಅಲ್ಲದೇ ಚಿತ್ತಾಪೂರ ಪುರಸಭೆಯ ಕಂದಾಯ ನಿರೀಕ್ಷಕ ರಾಹುಲ ಕಾಂಬಳೆ ಮೇಲೆ ವಿನಾಕಾರಣ ಹಲ್ಲೆ ನಡೆಸಲಾಗಿದೆ.ಒಂದು ವೇಳೆ ಸಿಬ್ಬಂದಿಯ ಬಗ್ಗೆ ದೂರು ಇದ್ದರೇ ಮೇಲಾಧಿಕಾರಿಗಳ ಗಮನಕ್ಕೆ ತರಬೇಕು.ಅದನ್ನು ಬಿಟ್ಟು ಹಲ್ಲೆ ಮಾಡುವುದು ಅಪರಾಧ. ಭವಿಷ್ಯದಲ್ಲಿ ಇಂಥ ಘಟನೆಗಳು ನಡೆಯದಂತೆ ನೌಕರರಿಗೆ ಸೇವಾ ಭದ್ರತೆ ನೀಡಬೇಕು.
ಕರ್ತವ್ಯ ನಿರ್ವಹಣೆಯಲ್ಲಿ ಅಡ್ಡಿಪಡಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.ಒಂದು ವೇಳೆ ತಪ್ಪಿತಸ್ಥರನ್ನು ಬಂಧಿಸದಿದ್ದಲ್ಲಿ ಹಂತ ಹಂತವಾಗಿ ರಾಜ್ಯಾದಾದ್ಯಂತ ಉಗ್ರ ಹೋರಾಟ ಕೈಗೊಳ್ಳಲಾಗುವುದೆಂದು ಎಚ್ಚರಿಕೆ ನೀಡಿದರು.
ಕಲಬುರಗಿ: ಹೈದ್ರಾಬಾದ್ ಕರ್ನಾಟಕ ಹೋರಾಟ ಸಮಿತಿಯು, ಬೆಂಗಳೂರಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಚುನಾಯಿತ ಪ್ರತಿನಿಧಿಗಳು ಮತ್ತು ಸಚಿವರ ಸಭೆ ನಡೆಸಿ,…
ಸುರಪುರ: ಇಲ್ಲಿಯ ರಂಗಂಪೇಟೆ-ತಿಮ್ಮಾಪುರದ ಆರಾಧ್ಯ ದೇವತೆ ಮರಗಮ್ಮ ದೇವಿಯ ನೂತನ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ದೇವಿಯ ಬೆಳ್ಳಿಯ ಮೂರ್ತಿ ಗಂಗಾಸ್ನಾನ…
ಸುರಪುರ: ಯುವ ಸಬಲೀಕರಣ, ಅರೋಗ್ಯ ಜೀವನಶೈಲಿ,ಲೈಂಗಿಕತೆ ಮತ್ತು ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ನಿಭಾಯಿಸುತ್ತಿರುವ ಸವಾಲುಗಳು, ಭಾವನಾತ್ಮಕ ಸಮಸ್ಯೆಗಳು ಭಾವನೆಗಳ ನಿಭಾಯಿಸುವಿಕೆ,ನೆನಪಿನ…
ಶಹಾಬಾದ: ನೀತಿ ಆಯೋಗವು ಮಾನವ ಅಭಿವೃದ್ಧಿ ಸೂಚಕಗಳಲ್ಲಿ ಹಿಂದುಳಿದ ತಾಲೂಕಗಳಿಗೆ ಆರೋಗ್ಯ, ಪೆÇೀಷಣೆ, ಕೃಷಿ ಮೇಲೆ ಕೇಂದ್ರೀಕರಿಸಿದ ಸಂಪೂರ್ಣತಾ ಅಭಿಯಾನ…
ಶಹಾಬಾದ: ಕೇವಲ ಒಂದು ದಿನ ವನಮಹೋತ್ಸವ ಪರಿಸರ ದಿನಾಚರಣೆಯಂತಹ ಕಾರ್ಯಕ್ರಮ ಮಾಡಿದರೆ ಸಾಲದು, ಬದಲಾಗಿ ಗಿಡ-ಮರಗಳ ಸಂರಕ್ಷಣೆ ಮಾಡುವುದು ಅವಶ್ಯವಾಗಿದೆ.…
ಶಹಾಬಾದ: ತುಳಿತಕ್ಕೆ ಒಳಗಾದವರ ಹಾಗೂ ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮರಾಗಿದ್ದರು ಎಂದು ಕಾರ್ಮಿಕ ಪ್ರಧಾನ…