ಗ್ರಾಮೀಣ ಭಾಗಕ್ಕೆ ಬಸ್ ಓಡಿಸಲು ಡಿಎಸ್‌ಎಸ್ ಸಾಗರ ಬಣ ಮನವಿ

0
8

ಸುರಪುರ: ತಾಲೂಕಿನ ಗ್ರಾಮೀಣ ಭಾಗಕ್ಕೆ ಹೆಚ್ಚಿನ ಬಸ್‌ಗಳನ್ನು ಓಡಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಡಿ.ಜಿ ಸಾಗರ ಬಣ)ದ ಮುಖಂಡರು ನಗರದ ಸಾರಿಗೆ ಘಟಕ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಮಿತಿ ಜಿಲ್ಲಾ ಸಂಘಟನಾ ಸಂಚಾಲಕ ಶಿವಲಿಂಗ ಹಸನಾಪುರ ಮಾತನಾಡಿ,ಗ್ರಾಮೀಣ ಭಾಗಕ್ಕೆ ಹೆಚ್ಚಿನ ಬಸ್‌ಗಳಿಲ್ಲದ ಕಾರಣ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯುಂಟಾಗುತ್ತಿದೆ,ಈ ಮುಂಚೆ ಕವಡಿಮಟ್ಟಿ ಮಂಗಿಹಾಳ ಮಾರ್ಗವಾಗಿ ಚಿಕ್ಕನಹಳ್ಳಿ ತಳ್ಳಳ್ಳಿ ಗ್ರಾಮಗಳಿಗೆ ಹೋಗುತ್ತಿದ್ದ ಬಸ್‌ಗಳನ್ನು ಈಗ ರದ್ದು ಮಾಡಿದ್ದರಿಂದ ಈ ಭಾಗದ ವಿದ್ಯಾರ್ಥಿಗಳು ನಿತ್ಯವು ಶಾಲಾ ಕಾಲೇಜಿಗೆ ಬರಲು ಪರದಾಡುವಂತ ಸ್ಥಿತಿ ನಿರ್ಮಾಣವಾಗಿದೆ,ಆದ್ದರಿಂದ ಕೂಡಲೇ ಯಥಾಪ್ರಕಾರ ಬಸ್‌ಗಳನ್ನು ಓಡಿಸುವಂತೆ ಒತ್ತಾಯಿಸಿದರು.

Contact Your\'s Advertisement; 9902492681

ನಮ್ಮ ಮನವಿಗೆ ಸ್ಪಂಧಿಸದಿದ್ದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿ ಘಟಕ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಂಘಟನೆಯ ತಾಲೂಕು ಸಂಚಾಲಕ ವೀರಭದ್ರಪ್ಪ ತಳವಾರಗೇರಾ,ಜಿಲ್ಲಾ ಸಂಘಟನಾ ಸಂಚಾಲಕ ರಮೇಶ ಬಡಿಗೇರ,ಮುಖಂಡರಾದ ತಿಪ್ಪಣ್ಣ ಶೆಳ್ಳಗಿ,ಶೇಖರ ಬಡಿಗೇರ,ಮರಲಿಂಗ ಗುಡಿಮನಿ,ಖಾಜಾ ಅಜ್ಮೀರ್ ಖುರೇಶಿ,ಮಾನಪ್ಪ ಶೆಳ್ಳಗಿ,ಎಮ್.ಪಟೇಲ್,ಚನ್ನಪ್ಪ ದೇವಪುರ,ಆಕಾಶ ಕಟ್ಟಿಮನಿ,ಮಲ್ಲೆಶಿ ಶೆಳ್ಳಗಿ ಗೋವರ್ಧನ ತೇಲ್ಕರ್ ಸೇರಿದಂತೆ ಅನೇಕರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here