ಬಿಸಿ ಬಿಸಿ ಸುದ್ದಿ

ಗ್ರಾಮೀಣ ಭಾಗಕ್ಕೆ ಬಸ್ ಓಡಿಸಲು ಡಿಎಸ್‌ಎಸ್ ಸಾಗರ ಬಣ ಮನವಿ

ಸುರಪುರ: ತಾಲೂಕಿನ ಗ್ರಾಮೀಣ ಭಾಗಕ್ಕೆ ಹೆಚ್ಚಿನ ಬಸ್‌ಗಳನ್ನು ಓಡಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಡಿ.ಜಿ ಸಾಗರ ಬಣ)ದ ಮುಖಂಡರು ನಗರದ ಸಾರಿಗೆ ಘಟಕ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಮಿತಿ ಜಿಲ್ಲಾ ಸಂಘಟನಾ ಸಂಚಾಲಕ ಶಿವಲಿಂಗ ಹಸನಾಪುರ ಮಾತನಾಡಿ,ಗ್ರಾಮೀಣ ಭಾಗಕ್ಕೆ ಹೆಚ್ಚಿನ ಬಸ್‌ಗಳಿಲ್ಲದ ಕಾರಣ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯುಂಟಾಗುತ್ತಿದೆ,ಈ ಮುಂಚೆ ಕವಡಿಮಟ್ಟಿ ಮಂಗಿಹಾಳ ಮಾರ್ಗವಾಗಿ ಚಿಕ್ಕನಹಳ್ಳಿ ತಳ್ಳಳ್ಳಿ ಗ್ರಾಮಗಳಿಗೆ ಹೋಗುತ್ತಿದ್ದ ಬಸ್‌ಗಳನ್ನು ಈಗ ರದ್ದು ಮಾಡಿದ್ದರಿಂದ ಈ ಭಾಗದ ವಿದ್ಯಾರ್ಥಿಗಳು ನಿತ್ಯವು ಶಾಲಾ ಕಾಲೇಜಿಗೆ ಬರಲು ಪರದಾಡುವಂತ ಸ್ಥಿತಿ ನಿರ್ಮಾಣವಾಗಿದೆ,ಆದ್ದರಿಂದ ಕೂಡಲೇ ಯಥಾಪ್ರಕಾರ ಬಸ್‌ಗಳನ್ನು ಓಡಿಸುವಂತೆ ಒತ್ತಾಯಿಸಿದರು.

ನಮ್ಮ ಮನವಿಗೆ ಸ್ಪಂಧಿಸದಿದ್ದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿ ಘಟಕ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಂಘಟನೆಯ ತಾಲೂಕು ಸಂಚಾಲಕ ವೀರಭದ್ರಪ್ಪ ತಳವಾರಗೇರಾ,ಜಿಲ್ಲಾ ಸಂಘಟನಾ ಸಂಚಾಲಕ ರಮೇಶ ಬಡಿಗೇರ,ಮುಖಂಡರಾದ ತಿಪ್ಪಣ್ಣ ಶೆಳ್ಳಗಿ,ಶೇಖರ ಬಡಿಗೇರ,ಮರಲಿಂಗ ಗುಡಿಮನಿ,ಖಾಜಾ ಅಜ್ಮೀರ್ ಖುರೇಶಿ,ಮಾನಪ್ಪ ಶೆಳ್ಳಗಿ,ಎಮ್.ಪಟೇಲ್,ಚನ್ನಪ್ಪ ದೇವಪುರ,ಆಕಾಶ ಕಟ್ಟಿಮನಿ,ಮಲ್ಲೆಶಿ ಶೆಳ್ಳಗಿ ಗೋವರ್ಧನ ತೇಲ್ಕರ್ ಸೇರಿದಂತೆ ಅನೇಕರಿದ್ದರು.

emedialine

Recent Posts

ಸಮಸ್ತ ಲಿಂಗಾಯತರ ಪ್ರಗತಿಗೆ ಲಿಂಗಾಯತ ಸ್ವತಂತ್ರ ಧರ್ಮ ಅಗತ್ಯ: ಪೂಜ್ಯ ಶ್ರೀ ಶಿವಾನಂದ ಮಹಾಸ್ವಾಮಿಗಳು

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗಕ್ಕೆ ಕಲಂ 371ಜೆ ಯಂತೆ ಲಿಂಗಾಯತ ಧರ್ಮವನ್ನು ಸ್ವತಂತ್ರ ಧರ್ಮ ಎಂದು ಘೋಷಣೆ ಮಾಡಲು ಸರಕಾರದ…

10 mins ago

ವಿಭಾಗ ಮಟ್ಟದ ದಾಸ ಸಾಹಿತ್ಯ ಸಮ್ಮೇಳನದಲ್ಲಿ ವೈದ್ಯ ಶ್ರೀ ಪುರಸ್ಕೃತ ಡಾ. ಶರಣಬಸಪ್ಪ ಕ್ಯಾತನಾಳ ಪುರಸ್ಕಾರ

ಕಲಬುರಗಿ: ನಗರದ ಸಂಗಮೇಶ್ವರ ಸಭಾಗೃಹದಲ್ಲಿ  ಕನ್ನಡ ಸಾಹಿತ್ಯ ಪರಿಷತ್ತು ದಕ್ಷಿಣ ವಲಯದ ವಿಭಾಗ ಮಟ್ಟದ 2ನೇ ದಾಸ ಸಾಹಿತ್ಯ ಸಮ್ಮೇಳನ…

50 mins ago

ಜಪಾನ್ ವಿ. ವಿಯಲ್ಲಿ ಪ್ರಬಂಧ ಮಂಡನೆ ಮಾಡಿದ ಡಾ. ಪಾಸೋಡಿ

ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ. ಎಂ ಎಸ್ ಪಾಸೋಡಿ ಅವರು ಜಪಾನ್…

3 hours ago

ಕಲಬುರಗಿ: ಡೆಂಗ್ಯೂ, ಮಲೇರಿಯಾ ರೋಗಗಳನ್ನು ನಿಯಂತ್ರಿಸಲು ಬಾಲರಾಜ್ ಗುತ್ತೇದಾರ ಆಗ್ರಹ

ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು…

3 hours ago

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

5 hours ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

5 hours ago