ಕನ್ನಡ ಬಾವುಟವನ್ನು ಸುಟ್ಟಿರುವುದು ಅಕ್ಷಮ್ಯವಾದ ಅಪರಾಧ: ಮಹೇಶ್ ಜೋಶಿ

ಬೆಳಗಾವಿ: ‘ನಮ್ಮ ಅಸ್ಮಿತೆಯಾಗಿರುವ ಕನ್ನಡ ಬಾವುಟ ಸುಟ್ಟಿರುವುದು ಅಕ್ಷಮ್ಯ ಅಪರಾಧ. ಈ ಕೃತ್ಯ ಎಸಗಿದ ಹೇಡಿಗಳ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು’ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಡೋಜ ಡಾ.ಮಹೇಶ ಜೋಶಿ ಒತ್ತಾಯಿಸಿದರು.

ನಗರದ ಬಸವರಾಜ ಕಟ್ಟೀಮನಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕನ್ನಡ ಸಾಹಿತ್ಯ ಪರಿಷತ್‌ ಜಿಲ್ಲಾ ಘಟಕದ ಅಧ್ಯಕ್ಷೆ ಮಂಗಲಾ ಮೆಟಗುಡ್ಡ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಬೆಳಗಾವಿಯಲ್ಲಿ ನಡೆಯುವ ಅಧಿವೇಶನ ಹಾಗೂ ಕರ್ನಾಟಕ ರಾಜ್ಯೋತ್ಸವಕ್ಕೆ ಪರ್ಯಾಯವಾಗಿ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ಮಹಾಮೇಳಾವ ಆಯೋಜಿಸುವುದು ಸರಿಯಲ್ಲ. ಗಡಿಯಲ್ಲಿ ಕನ್ನಡಿಗರನ್ನು ಕೆರಳಿಸುತ್ತಿರುವ ಈ ಸಂಘಟನೆಯನ್ನು ರಾಜ್ಯದಲ್ಲಿ ನಿಷೇಧಿಸಬೇಕೆಂದು ಸರ್ಕಾರವನ್ನು ಒತ್ತಾಯಿಸಲಾಗುವುದು’ ಎಂದರು.

‘ಗಡಿನಾಡಿನಲ್ಲಿ ಕನ್ನಡಿಗರು-ಮರಾಠಿಗರು ಒಂದಾಗಿ ಬದುಕುತ್ತಿದ್ದಾರೆ. ಕರ್ನಾಟಕ ಮತ್ತು ಮಹಾರಾಷ್ಟ್ರದ ಮಧ್ಯೆ ಐತಿಹಾಸಿಕ ಹಾಗೂ ಭಾವನಾತ್ಮಕ ಸಂಬಂಧವಿದೆ. ಆದರೆ, ಅವಿವೇಕಿಗಳು ನಾಡವಿರೋಧಿ ಚಟುವಟಿಕೆ ಕೈಗೊಳ್ಳುತ್ತಿದ್ದಾರೆ. ಎಂಇಎಸ್‌ನ ಪುಂಡಾಟಿಕೆ ಸಹಿಸುವುದಿಲ್ಲ’ ಎಂದು ಎಚ್ಚರಿಕೆ ನೀಡಿದರು.

‘ಕನ್ನಡ ಭಾಷೆ, ಸಾಹಿತ್ಯ, ಕಲೆ ಹಾಗೂ ಸಂಸ್ಕೃತಿಯ ರಕ್ಷಣೆ, ಅಭಿವೃದ್ಧಿ ಹಾಗೂ ಪ್ರಸಾರವೇ ಕ.ಸಾ.ಪ. ಮೂಲ ಉದ್ದೇಶವಾಗಿದೆ. ಗಡಿ ಭಾಗದ ಕನ್ನಡ ಶಾಲೆಗಳ ಉಳಿವಿಗೆ ಶ್ರಮಿಸಲಾಗುವುದು’ ಎಂದ ಅವರು, ‘ಕನ್ನಡದ ಬೆಳವಣಿಗೆಗೆ ಶ್ರಮಿಸಿದ ಮಹನೀಯರ ಹೆಸರನ್ನು ಆಯಾ ಗ್ರಾಮದ ಬಸ್‌ ತಂಗುದಾಣಗಳಿಗೆ ನಾಮಕರಣ ಮಾಡಬೇಕು’ ಎಂದು ಒತ್ತಾಯಿಸಿದರು.

ಅಧಿಕಾರ ಸ್ವೀಕರಿಸಿದ ಮಂಗಲಾ ಮೆಟಗುಡ್ಡ ಮಾತನಾಡಿ, ‘ಜಿಲ್ಲೆಯಲ್ಲಿ ಅಪೂರ್ಣ ಹಂತದಲ್ಲಿರುವ ಕನ್ನಡ ಭವನಗಳ ನಿರ್ಮಾಣ ಕಾಮಗಾರಿಗೆ ಅನುದಾನ ಬಿಡುಗಡೆಗೊಳಿಸಬೇಕು. ಪ್ರತಿ ತಾಲ್ಲೂಕಿನಲ್ಲಿ ಕನ್ನಡ ಭವನ ಕಟ್ಟಲು ಆರ್ಥಿಕ ನೆರವು ಒದಗಿಸಬೇಕು. ಜಿಲ್ಲೆಯ ಸಾಹಿತಿಗಳ ಸಾಕ್ಷ್ಯಚಿತ್ರ ನಿರ್ಮಿಸಬೇಕು’ ಎಂದು ಕೋರಿದರು.

ಮಹಾಂತೇಶ ಮೆಣಸಿನಕಾಯಿ ಅವರ ‘ನಮ್ಮ ರಾಷ್ಟ್ರೀಯ ಹಬ್ಬಗಳು’ ಕೃತಿ ಹಾಗೂ ಸುನೀಲ ಸಾಣಿಕೊಪ್ಪ ಅವರ ‘ಬಯಲು ಗೀತೆ’ ಕವನಸಂಕಲನ ಲೋಕಾರ್ಪಣೆಗೊಳಿಸಲಾಯಿತು. ಕಾರಂಜಿಮಠದ ಗುರುಸಿದ್ಧ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಸಾಹಿತಿ ಪ್ರೊ.ಚಂದ್ರಶೇಖರ ಅಕ್ಕಿ ಅಧ್ಯಕ್ಷತೆ ವಹಿಸಿದ್ದರು. ಗೋವಾ ಕನ್ನಡ ಮಹಿಳಾ ಮಂಡಳದ ಅಧ್ಯಕ್ಷೆ ಜಯಶ್ರೀ ಹೊಸಮನಿ, ಯ.ರು. ಪಾಟೀಲ, ಮೋಹನ ಪಾಟೀಲ, ವಿ.ಎಂ. ಅಂಗಡಿ ಇದ್ದರು.

ಕ.ಸಾ.ಪ. ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಮೊದಲ ಬಾರಿ ಬೆಳಗಾವಿಗೆ ಆಗಮಿಸಿದ ಮಹೇಶ ಜೋಶಿ ಅವರನ್ನು ಅದ್ದೂರಿಯಾಗಿ ಬರಮಾಡಿಕೊಳ್ಳಲಾಯಿತು. ಶ್ರೀಕೃಷ್ಣದೇವರಾಯ ವೃತ್ತದಿಂದ ಬಸವರಾಜ ಕಟ್ಟಿಮನಿ ಸಭಾಂಗಣದವರೆಗೆ ವಾದ್ಯಮೇಳದೊಂದಿಗೆ ಮೆರವಣಿಗೆಯಲ್ಲಿ ಕರೆತರಲಾಯಿತು. ರಾಣಿ ಚನ್ನಮ್ಮನ ಪ್ರತಿಮೆಗೆ ಜೋಶಿ ಮಾಲಾರ್ಪಣೆ ಮಾಡಿದರು.

emedialine

Recent Posts

ಸ್ಲಂ ಜನರಿಗೆ ಹಕ್ಕು ಪತ್ರ ನೀಡುವಂತೆ ರೇಣುಕಾ ಸರಡಗಿ ಸಿಎಂಗೆ ಮನವಿ

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ. ಯಾದಗಿರಿ. ಬೀದರ್. ಕೊಪ್ಪಳ. ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಸ್ಲಂ ನಿವಾಸಿಗಳ ಕುಟುಂಬ 1ಲಕ್ಷ…

2 hours ago

ಶರಣಬಸವ ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ

ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದಲ್ಲಿ ಮಂಗಳವಾರದಂದು, ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ವಿವಿಯ ಧ್ವಜಸ್ಥಂಭದಲ್ಲಿ ಉಪಕುಲಪತಿ ಪ್ರೊ. ಅನಿಲಕುಮಾರ ಬಿಡವೆ ಧ್ವಜಾರೋಹಣ…

2 hours ago

ವಕ್ಫ್ ಬೋರ್ಡ್ ನಿಂದ 15 ಜಿಲ್ಲೆಗಳಲ್ಲಿ ಮಹಿಳಾ ಪದವಿ ಕಾಲೇಜು ಸ್ಥಾಪನೆಗೆ ಸಂಪುಟ ಅಸ್ತು: ಸಚಿವ ಜಮೀರ್ ಅಹಮದ್ ಖಾನ್

ಕಲಬುರಗಿ : ಐತಿಹಾಸಿಕ ವಿಶೇಷ ಸಂಪುಟ ಸಭೆ ಯಲ್ಲಿ ಕರ್ನಾಟಕ ವಖ್ಫ್ ಬೋರ್ಡ್ ವತಿಯಿಂದ ರಾಜ್ಯದ ಹದಿನೈದು ಜಿಲ್ಲೆಗಳಲ್ಲಿ ಮಹಿಳಾ…

4 hours ago

ಸೆ.22 ರಂದು ತುಂಗಭದ್ರೆಗೆ ಬಾಗಿನ ಅರ್ಪಣೆ: ಡಿ.ಕೆ ಶಿವಕುಮಾರ್

ಕಲಬುರಗಿ: ಬರುವ ಸೆಪ್ಟೆಂಬರ್ 22 ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಸಚಿವ ಸಂಪುಟದ ಸಹೊದ್ಯೋಗಿಗಳೊಂದಿಗೆ ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಲಾಗುವುದು…

4 hours ago

ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ: ಡಿಕೆ ಶಿವುಕುಮಾರ್

ಕಲಬುರಗಿ: ಅಮೇರಿಕಾದ ಪ್ರವಾಸದಲ್ಲಿ ತಾವು ಯಾರನ್ನೂ ಭೇಟಿಯಾಗಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದರು. ಸಚಿವ ಸಂಪುಟದ ಸಭೆಯಲ್ಲಿ ಪಾಲ್ಗೊಳ್ಳಲು…

4 hours ago

ನಾಗಮಂಗಲ ಘಟನೆ: ತನಿಖೆ ನಂತರ ಇನ್ನಷ್ಟು ಕ್ರಮ: ಗೃಹ ಸಚಿವ ಪರಮೇಶ್ವರ

ಕಲಬುರಗಿ: ನಾಗಮಂಗಲದ ಅಹಿತರ ಘಟನೆ ಎಲ್ಲ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದ್ದು, ತನಿಖಾ ವರದಿ ನಂತರ ಮುಂದಿನ ಹೆಚ್ಚಿನ ಕ್ರಮ ಕೈಗೊಳ್ಳಲಾಗುವುದು…

4 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420