ಸುರಪುರ:ಬಸವೇಶ್ವರ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

ಸುರಪುರ:ನಗರದ ಬಸವೇಶ್ವರ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆಯನ್ನು ನಗರದ ರಂಗಂಪೇಟೆಯ ವೀರಶೈವ ಕಲ್ಯಾಣ ಮಂಟಪದಲ್ಲಿ ನಡೆಸಲಾಯಿತು.

ಕಾರ್ಯಕ್ರಮದ ಆರಂಭದಲ್ಲಿ ವಿಶ್ವಗುರು ಬಸವೇಶ್ವರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಲಾಯಿತು.ಅಲ್ಲದೆ ಕಳೆದ ಕೆಲ ತಿಂಗಳುಗಳ ಹಿಂದೆ ನಿಧನರಾದ ಸಂಘದ ಮಾಜಿ ಉಪಾಧ್ಯಕ್ಷ ಶಾಂತರಾಜ ಬಾರಿ,ಹೆಲಿಕಾಪ್ಟರ್ ಅಪಘಾತದಲ್ಲಿ ನಿಧನರಾದ ಸೇನಾ ಜನರಲ್ ಬಿಪಿನ್ ರಾವತ್ ಸೇರಿದಂತೆ ಅನೇಕರ ನಿಧನಕ್ಕೆ ಎರಡು ನಿಮಿಷಗಳ ಮೌನಾಚರಣೆಯೊಂದಿಗೆ ಶ್ರದ್ಧಾಂಜಲಿ ಅರ್ಪಿಸಿದರು.

ನಂತರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಸುರೇಶ ಸಜ್ಜನ್ ಮಾತನಾಡಿ,ಕೋವಿಡ್ ಸಂದರ್ಭದಲ್ಲಿಯೂ ನಮ್ಮ ಬಸವೇಶ್ವರ ಪತ್ತಿನ ಸಹಕಾರ ಸಂಘ ಉತ್ತಮವಾಗಿ ವ್ಯವಹಾರವನ್ನು ನಡೆಸುವ ಮೂಲಕ ಲಾಭವನ್ನು ಗಳಿಸಿದೆ.ನಮ್ಮ ಸಂಘದ ಕೇಂದ್ರ ಕಚೇರಿ ಸೇರಿದಂತೆ ಕೆಂಭಾವಿ ಹುಣಸಗಿ ಕಕ್ಕೇರಾ ಮತ್ತು ಕೊಡೇಕಲ್ ಶಾಖೆಗಳ ಒಟ್ಟು ಲಾಭ ೬೮ ಲಕ್ಷ ೫೫ ಸಾವಿರ ೬೬೪ ರೂಪಾಯಿಗಳ ನಿವ್ವಳ ಲಾಭ ಗಳಿಸಿದೆ.ಮುಂದಿನ ವರ್ಷದಿಂದ ನಮ್ಮ ಬ್ಯಾಂಕ್‌ನಲ್ಲಿಯೂ ಇಂಟರ್ನೆಟ್ ಬ್ಯಾಂಕಿಂಗ್ ವ್ಯವಸ್ಥೆ ಆರಂಭಿಸಲಾಗುತ್ತಿದೆ,ಅಲ್ಲದೆ ಬಂಗಾರ ಸೇರಿ ವಿವಿಧ ಸಾಲಗಳ ಮೇಲಿನ ಬಡ್ಡಿದರದಲ್ಲಿ ಶೇ ೩ ರಷ್ಟು ಇಳಿಕೆ ಮಾಡಲಾಗಿದ್ದು ಗ್ರಾಹಕರು ಇದರ ಲಾಭ ಪಡೆದುಕೊಳ್ಳಬಹುದು ಎಂದರು.

ನಂತರ ವಾರ್ಷಿಕ ವರದಿಯ ಮೇಲೆ ಆಯ ವ್ಯಯದ ಕುರಿತು ಸಮಗ್ರ ಚರ್ಚೆ ನಡೆಸಲಾಯಿತು.ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಮನೋಹರ ಜಾಲಹಳ್ಳಿ,ನಿರ್ದೇಶಕರಾದ ಹೆಚ್.ಸಿ ಪಾಟೀಲ್,ವಿಶ್ವರಾಧ್ಯ ಸತ್ಯಂಪೇಟೆ,ರವೀಂದ್ರ ಅಂಗಡಿ,ನಂದಯ್ಯ ಮಠಪತಿ,ಶರಣಪ್ಪ ಕಳ್ಳಿಮನಿ,ವಿಜಯಕುಮಾರ ಬಂಡೋಳಿ,ಜಗದೀಶ ಪಾಟೀಲ್,ಜಯಲಲಿತಾ ಪಾಟೀಲ್,ಶ್ವೇತಾ ಗುಳಗಿ,ವೀರಪ್ಪ ಆವಂಟಿ,ಬಸವರಾಜ ಬೂದಿಹಾಳ,ಕಾನೂನು ಸಲಹೆಗಾರ ಎಸ್.ಎಮ್ ಕನಕರಡ್ಡಿ ಸೇರಿದಂತೆ ಸೂಗೂರೇಶ ಮಡ್ಡಿ,ವಿರೇಶನಿಷ್ಠಿ ದೇಶಮುಖ,ಬಸವಲಿಂಗಯ್ಯ ಹಿರೇಮಠ,ಮಂಜುನಾಥ ಬಳಿ,ಶಿವರಾಜ ಬುದೂರು ಹಾಗು ಮುಖಂಡರಾದ ಬಸವರಾಜ ಜಮದ್ರಖಾನಿ,ಬಸವರಾಜಪ್ಪ ನಿಷ್ಠಿ ದೇಶಮುಖ,ಸೋಮಶೇಖರ ಶಾಬಾದಿ,ನಾಗರಾಜ ಜಮದ್ರಖಾನಿ,ಶಿವು ಸಾಹುಕಾರ ರುಕ್ಮಾಪುರ,ಮಂಜುನಾಥ ಜಾಲಹಳ್ಳಿ,ಸಿದ್ದನಗೌಡ ಹೆಬ್ಬಾಳ,ವಿರೇಶ ಪಂಚಾಂಗಮಠ,ಪ್ರದೀಪ ಕದರಾಪುರ ಸೇರಿದಂತೆ ಬ್ಯಾಂಕ್‌ನ ಉಪ ಸಮಿತಿ ಸದಸ್ಯರು,ಸಲಹಾ ಸಮಿತಿ ಸದಸ್ಯರು ಸೇರಿದಂತೆ ಅನೇಕರಿದ್ದರು.ಬ್ಯಾಂಕ್‌ನ ನಿರ್ದೇಶಕ ಡಿ.ಸಿ ಪಾಟೀಲ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

7 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

10 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

10 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

10 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

10 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

10 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420