ಬಿಸಿ ಬಿಸಿ ಸುದ್ದಿ

ಎಸ್.ಎಸ್.ಎಲ್.ಸಿ ಮುಖ್ಯ ಪರೀಕ್ಷೆಗೆ ನೋಂದಾಯಿಸಲು ದಿನಾಂಕ ವಿಸ್ತರಣೆ

ಬೆಂಗಳೂರು: 2021-22ನೇ ಸಾಲಿನ ಎಸ್.ಎಸ್.ಎಲ್.ಸಿ ಮುಖ್ಯ ಪರೀಕ್ಷೆಗೆ ರಾಜ್ಯದ ಸರ್ಕಾರಿ ಮತ್ತು ಸರ್ಕಾರದಿಂದ ಮಾನ್ಯತೆ ಪಡೆದ ಅನುದಾನಿತ, ಅನುದಾನರಹಿತ ಶಾಲಾ/ ಕಾಲೇಜುಗಳಿಂದ ಹಾಜರಾಗುವ ಅರ್ಹ ಶಾಲಾ ವಿದ್ಯಾರ್ಥಿಗಳು, ಖಾಸಗಿ ಅಭ್ಯರ್ಥಿಗಳು ಮತ್ತು ಪುನರಾವರ್ತಿತ ಅಭ್ಯರ್ಥಿಗಳ ಮಾಹಿತಿಯನ್ನು ಆನ್‍ಲೈನ್ ಮುಖಾಂತರ ನೋಂದಾಯಿಸಲು ಹಾಗೂ ಶುಲ್ಕ ಪಾವತಿಸಲು ವಿದ್ಯಾರ್ಥಿಗಳ ನೋಂದಣಿ, ಪರೀಕ್ಷಾ ಶುಲ್ಕ ಪಾವತಿ ಹಾಗೂ ಪ್ರಸ್ತಾವನೆ ಸಲ್ಲಿಕೆ ದಿನಾಂಕಗಳನ್ನು ವಿಸ್ತರಿಸಲಾಗಿದೆ.

ಮಂಡಳಿ ಜಾಲತಾಣದ ಶಾಲಾಲಾಗಿನ್ ಮೂಲಕ CCERF, CCEPF CCERR , CCEPR,  NSR & NSPR     ವಿದ್ಯಾರ್ಥಿಗಳ ಮಾಹಿತಿಯನ್ನು ಅಪ್‍ಲೋಡ್ ಮಾಡಲು ನಿಗದಿಪಡಿಸಿರುವ ಅಂತಿಮ ದಿನಾಂಕ:  10.01.2022. ಮಂಡಳಿ ಜಾಲತಾಣದ ಶಾಲಾಲಾಗಿನ್ ಮೂಲಕ CCERF, CCEPF CCERR , CCEPR,  NSR & NSPR ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕದ ಚಲನ್ ಮುದ್ರಿಸಿಕೊಳ್ಳಲು ನಿಗದಿಪಡಿಸಿರುವ ದಿನಾಂಕ : 12.01.2022 ರಿಂದ 17.01.2022, ಹಾಗೂ ಚಲನ್ ಮುದ್ರಿಸಿಕೊಂಡು ಬ್ಯಾಂಕ್‍ಗೆ ಜಮೆ ಮಾಡಲು ನಿಗದಿಪಡಿಸಿರುವ ದಿನಾಂಕ: 12.01.2022 ರಿಂದ 19.01.2022. 2002 ಮತ್ತು ಹಿಂದಿನ ವರ್ಷಗಳ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಪುನರಾವರ್ತಿತ ಅಭ್ಯರ್ಥಿಗಳ (NSR & NSPR) ಪರೀಕ್ಷಾ ಶುಲ್ಕವನ್ನು ಹಳೆಯ ಪದ್ದತಿಯಂತೆ ಮಂಡಳಿಯ ನೆಫ್ಟ್ ಚಲನ್ ಮೂಲಕ ರಾಷ್ಟ್ರೀಕೃತ ಬ್ಯಾಂಕಿನಲ್ಲಿ ಪಾವತಿಸಲು ನಿಗದಿಪಡಿಸಿದ ಅಂತಿಮ ದಿನಾಂಕ: 19.01.2022.

CCERF, CCEPF CCERR , CCEPR,  NSR & NSPR ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕವನ್ನೊಳಗೊಂಡಂತೆ ಶಾಲಾಲಾಗಿನ್‍ನಲ್ಲಿ ಸೃಜಿಸಲಾಗುವ ಚಲನ್ ಬಳಸಿಕೊಂಡು ಶುಲ್ಕ ಪಾವತಿಸಿದ ಮೂಲ ಚಲನ್, 2002 ಮತ್ತು ಹಿಂದಿನ ವರ್ಷಗಳ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಪುನರಾವರ್ತಿತ ಅಭ್ಯರ್ಥಿಗಳ (NSR & NSPR) ಎಂಎಸ್‍ಎ ಮತ್ತು ಹಿಂದಿನ ಪದ್ದತಿಯಂತೆ ಮಂಡಳಿ ನೆಫ್ಟ್ ಚಲನ್ ಮೂಲಕ ಶುಲ್ಕ ಪಾವತಿಸಿದ ಮೂಲ ಚಲನ್, ನಾಮಿನಲ್‍ರೋಲ್ ಮತ್ತು ಸಂಬಂಧಿಸಿದ ಇತರೆ ದಾಖಲೆಗಳನ್ನು ಮಂಡಳಿಗೆ ಸಲ್ಲಿಸಲು ಅಂತಿಮ ದಿನಾಂಕ: 25.01.2022ಕ್ಕೆ ನಿಗಧಿಪಡಿಸಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

emedialine

Recent Posts

ಡಾ.ಶರಣಬಸಪ್ಪ ಕ್ಯಾತನಾಳಗೆ ಮುಖ್ಯಮಂತ್ರಿಗಳಿಂದ ಶ್ರೇಷ್ಠ ವೈದ್ಯ ಶ್ರೀ ಪ್ರಶಸ್ತಿ ಪ್ರದಾನ

ಕಲಬುರಗಿ: ಕರ್ನಾಟಕ ಸರ್ಕಾರವು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ರಾಷ್ಟ್ರೀಯ ವೈದ್ಯರ ದಿನಾಚರಣೆಯ ಅಂಗವಾಗಿ ಪ್ರತಿ ವರ್ಷ ಜುಲೈ…

4 hours ago

ಮುಸ್ಲಿಮರಿಗೆ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಸ್ಥಾನ ನೀಡಿ: ಅಬ್ದುಲ್ ರಹೀಮಾನ್ ಪಟೇಲ್

ಕಲಬುರಗಿ: ‘ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಸ್ಥಾನವನ್ನು ಮುಸ್ಲಿಂ ಸಮುದಾಯಕ್ಕೆ ನೀಡಬೇಕು. ಮುಂಬರುವ ದಿನಗಳಲ್ಲಿ ಬರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ…

5 hours ago

ಡಾ. ಫ.ಗು. ಹಳಕಟ್ಟಿ ಯವರ ಜಯಂತಿ ಅಂಗವಾಗಿ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ

ಕಲಬುರಗಿ: ವಚನ ಪಿತಾಮಹ ಎಂದು ಕರೆಸಿಕೊಳ್ಳುವ ಡಾ. ಫ.ಗು. ಹಳಕಟ್ಟಿ ಯವರು ಬಸವಾದಿ ಶರಣರ ವಚನ ಸಾಹಿತ್ಯವನ್ನು ಸಂರಕ್ಷಣೆ ಮಾಡುವ…

6 hours ago

ಮೊಬೈಲ್ ರೀಚಾರ್ಜ್‍ಗಳ ಬೆಲೆ ಹೆಚ್ಚಳ ತಕ್ಷಣವೇ ಹಿಂಪಡೆಯಬೇಕೆಂದು ಆಗ್ರಹಿಸಿ ಪ್ರತಿಭಟನೆ

ಶಹಾಬಾದ: ಖಾಸಗಿ ಟೆಲಿಕಾಂ ಕಂಪನಿಗಳು ಮೊಬೈಲ್ ರೀಚಾರ್ಜ್‍ಗಳ ಬೆಲೆಗಳನ್ನು ಅನಿಯಂತ್ರಿತವಾಗಿ ಹೆಚ್ಚಳ ಮಾಡಿರುವುದನ್ನು ತಕ್ಷಣವೇ ಹಿಂಪಡೆಯಬೇಕೆಂದು ಆಗ್ರಹಿಸಿ ಎಐಡಿವಾಯ್‍ಓ ವತಿಯಿಂದ…

6 hours ago

ಸಾರ್ವಜನಿಕರು ಮಕ್ಕಳನ್ನು ಸರಕಾರಿ ಶಾಲೆಗೆ ದಾಖಲಿಸಿ

ಶಹಾಬಾದ :ಎಲ್ಲರಿಗೂ ಸರಕಾರಿ ನೌಕರಿ ಬೇಕು.ಆದರೆ ಸರಕಾರಿ ಶಾಲೆಯಲ್ಲಿ ನಿಮ್ಮ ಮಕ್ಕಳು ಓದುವುದು ಬೇಡ ಎಂದರೆ ಹೇಗೆ ? ಮೊದಲು…

6 hours ago

ಪಠ್ಯಕ್ರಮ ರಚನೆ ಗುಣಾತ್ಮಕ ಅಂಶಗಳಿಂದ ಕೂಡಿರಲಿ

ವಿಜಯಪುರ: ಇಂದಿನ ಪ್ರಸ್ತುತ ಶಿಕ್ಷಣ ಪದ್ದತಿ ಕೌಶಲ್ಯಾಧಾರಿತ ಹಾಗೂ ಔದ್ಯೋಗಿಕ ಮತ್ತು ಉದ್ಯೋಗ ಪೂರಕನಂತೆ ಇರಬೇಕು ಎಂದು ಕರ್ನಾಟಕ ರಾಜ್ಯ…

8 hours ago