ಕಲಬುರಗಿ: ನಗರದ ಎಂ.ಎಸ್.ಇರಾಣಿ ಪದವಿ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನೆಗಳ ಅಡಿಯಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಎಸ್.ಎಸ್.ಎಲ್. ಕಾನೂನು ಮಹಾವಿದ್ಯಾಲಯದ ಪ್ರಾಧ್ಯಾಪಕಿ ಶಾಂತೇಶ್ವರಿ ಶಾಂತಗಿರ ಅವರು ಉದ್ಘಾಟಿಸಿ ಮಾತನಾಡುತ್ತಾ ೨೦೦೫ರ ಮೊದಲು ದೇಶದಲ್ಲಿ ಯಾವುದೇ ವಿಷಯದ ಒಂದು ಮಾಹಿತಿ ಪಡೆಯಬೇಕಾದರೆ ಹರಸಾಹಸ ಪಡುವ ಜನರ ಸಮಸ್ಯೆಯನ್ನು ದೂರಮಾಡಲು ೨೦೦೫ ಮಾಹಿತಿ ಹಕ್ಕು ಅಧಿನಿಯಮ ಜಾರಿಗೊಳಿಸಲಾಯಿತು.
ದೇಶದ ಹಲವಾರು ಇಲಾಖೆಗಳ ಮಾಹಿತಿಯನ್ನು ಸಾಮಾನ್ಯ ಜನರು ಪಡೆದು ಕೊಳ್ಳುವ ಉದ್ದೇಶದಿಂದ ಮಾಹಿತಿ ಹಕ್ಕು ಅಧಿನಿಯಮವನ್ನು ೨೦೦೫ರಲ್ಲಿ ಜಾರಿಗೋಲುಸಲಾಯಿತು ಎಂದು ಶಾಂತೇಶ್ವರಿ ಶಾಂತಗಿರ ಅವರು ನುಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಚಾರ್ಯರಾದ ಡಾ. ನೀಲಕಂಠ ವಾಲಿಯವರು ವಹಿಸಿಕೊಂಡು ಮಾಹಿತಿ ಹಕ್ಕು ಅಧಿಯಮದ ಉಪಯೋಗಗಳನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.
ಈ ಸಂದಭದಲ್ಲಿ ಡಾ. ಪ್ರಾಣೇಶ ಶಾಂತರಾಮ ಅವರು ಸ್ವಾಗತಿಸಿದರು, ಡಾ. ಪ್ರೇಮಚಂದ ಚವ್ಹಾಣ ನಿರೂಪಿಸಿದರು, ಗೀತಾ ಪಾಟೀಲ ವಂದಿಸಿದರು.
ಕಲಬುರಗಿ: ಹೈದ್ರಾಬಾದ್ ಕರ್ನಾಟಕ ಹೋರಾಟ ಸಮಿತಿಯು, ಬೆಂಗಳೂರಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಚುನಾಯಿತ ಪ್ರತಿನಿಧಿಗಳು ಮತ್ತು ಸಚಿವರ ಸಭೆ ನಡೆಸಿ,…
ಸುರಪುರ: ಇಲ್ಲಿಯ ರಂಗಂಪೇಟೆ-ತಿಮ್ಮಾಪುರದ ಆರಾಧ್ಯ ದೇವತೆ ಮರಗಮ್ಮ ದೇವಿಯ ನೂತನ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ದೇವಿಯ ಬೆಳ್ಳಿಯ ಮೂರ್ತಿ ಗಂಗಾಸ್ನಾನ…
ಸುರಪುರ: ಯುವ ಸಬಲೀಕರಣ, ಅರೋಗ್ಯ ಜೀವನಶೈಲಿ,ಲೈಂಗಿಕತೆ ಮತ್ತು ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ನಿಭಾಯಿಸುತ್ತಿರುವ ಸವಾಲುಗಳು, ಭಾವನಾತ್ಮಕ ಸಮಸ್ಯೆಗಳು ಭಾವನೆಗಳ ನಿಭಾಯಿಸುವಿಕೆ,ನೆನಪಿನ…
ಶಹಾಬಾದ: ನೀತಿ ಆಯೋಗವು ಮಾನವ ಅಭಿವೃದ್ಧಿ ಸೂಚಕಗಳಲ್ಲಿ ಹಿಂದುಳಿದ ತಾಲೂಕಗಳಿಗೆ ಆರೋಗ್ಯ, ಪೆÇೀಷಣೆ, ಕೃಷಿ ಮೇಲೆ ಕೇಂದ್ರೀಕರಿಸಿದ ಸಂಪೂರ್ಣತಾ ಅಭಿಯಾನ…
ಶಹಾಬಾದ: ಕೇವಲ ಒಂದು ದಿನ ವನಮಹೋತ್ಸವ ಪರಿಸರ ದಿನಾಚರಣೆಯಂತಹ ಕಾರ್ಯಕ್ರಮ ಮಾಡಿದರೆ ಸಾಲದು, ಬದಲಾಗಿ ಗಿಡ-ಮರಗಳ ಸಂರಕ್ಷಣೆ ಮಾಡುವುದು ಅವಶ್ಯವಾಗಿದೆ.…
ಶಹಾಬಾದ: ತುಳಿತಕ್ಕೆ ಒಳಗಾದವರ ಹಾಗೂ ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮರಾಗಿದ್ದರು ಎಂದು ಕಾರ್ಮಿಕ ಪ್ರಧಾನ…