ಗದಗ: ‘ಚಾಯ್ವಾಲಾ ಮೋದಿ’ ಎಂದೇ ಖ್ಯಾತರಾಗಿರುವ ಗದಗದ ಟೀ ಮಾರಾಟಗಾರರೊಬ್ಬರು ಗದಗ-ಬೆಟಗೇರಿ ಪಟ್ಟಣದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸ್ಪರ್ಧಿಸಲು ಬಿಜೆಪಿಯಿಂದ ಟಿಕೆಟ್ ಪಡೆದಿದ್ದಾರೆ.
ಬಿಜೆಪಿ ಟಿಕೆಟ್ ಗಾಗಿ ಪಕ್ಷದ ಹಲವು ಕಾರ್ಯಕರ್ತರು ಮತ್ತು ಉದ್ಯಮಿಗಳು ಯತ್ನಿಸಿದ್ದರು, ಆದರೆ 23 ನೇ ವಾರ್ಡ್ ನ ಚೆನ್ನಪ್ಪ ದ್ಯಾಮಪುರ್ ಅವರಿಗೆ ಟಿಕೆಟ್ ಸಿಕ್ಕಿದೆ. ಹೀಗಾಗಿ ಸ್ಥಳೀಯ ನಿವಾಸಿಗಳಿಗೆ ಅವರು ಅಭಿನಂದನೆ ಸಲ್ಲಿಸಿದ್ದಾರೆ.
ಚುನಾವಣಾ ಪ್ರಚಾರಕ್ಕೆ ಖರ್ಚು ಮಾಡಲು ಅವರ ಚಾಯ್ವಾಲಾ ಬಳಿ ಹಣವಿಲ್ಲ, ಆದರೆ ಅವರು ಮತದಾರರನ್ನು ಭೇಟಿ ಮಾಡಿ ಬಿಸಿ ಬಿಸಿ ಚಹಾ ನೀಡುತ್ತಿದ್ದಾರೆ, ಜೊತಗೆ ತನಗೆ ಮತ ನೀಡುವಂತೆ ಮನವಿ ಮಾಡುತ್ತಿದ್ದಾರೆ.
ಚೆನ್ನಪ್ಪ ಸ್ನೇಹಿತರು ಮತ್ತು ಕುಟುಂಬದವರು ಕೆಲವು ಖರ್ಚುಗಳನ್ನು ಪೂರೈಸಲು ಸಹಾಯ ಮಾಡುತ್ತಿದ್ದಾರೆ. ಚೆನ್ನಪ್ಪ ಅವರು ಕಳೆದ 25 ವರ್ಷಗಳಿಂದ ಗದಗಿನ ಮುಳಗುಂದ ನಾಕಾ ಮತ್ತು ರಾಚೋಟೇಶ್ವರನಗರ ಬಳಿ ಚಹಾ ಮಾರಾಟ ಮಾಡುತ್ತಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಚಿಕ್ಕ ವಯಸ್ಸಿನಲ್ಲಿ ಚಹಾ ಮಾರುವ ಸುದ್ದಿ ಹರಡಿದ ನಂತರ, ಜನರು ಚೆನ್ನಪ್ಪನನ್ನು ‘ಮೋದಿ’ ಎಂದು ಕರೆಯಲು ಪ್ರಾರಂಭಿಸಿದರಂತೆ. ಎರಡು ವಾರಗಳ ಹಿಂದೆ, ಮುಂಬರುವ ವಾರ್ಡ್ ಚುನಾವಣೆಯಲ್ಲಿ ತಮ್ಮ ನಾಯಕನನ್ನು ಆಯ್ಕೆ ಮಾಡಲು ವಾರ್ಡ್ 23 ರ ನಿವಾಸಿಗಳು ಸಭೆ ಕರೆದರು, ಆಗ ಚೆನ್ನಪ್ಪ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ಸ್ಥಳೀಯ ನಿವಾಸಿಗಳೇ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಿದ್ದು, ಅವರೇ ನಮ್ಮ ಕ್ಷೇತ್ರದ ಮೋದಿ ಎಂದು ನಿವಾಸಿ ಸಿದ್ದಲಿಂಗೇಶ್ವರ ಅರಳಿ ಹೇಳಿದ್ದಾರೆ ರಾಜಕೀಯ ಸೇರುವ ಯೋಚನೆಯೇ ಇರಲಿಲ್ಲ. ಆದರೆ ಜನರು ನನ್ನ ಮೇಲೆ ನಂಬಿಕೆ ಇಟ್ಟಿದ್ದು, ಅವರ ಪರ ಕೆಲಸ ಮಾಡುತ್ತೇನೆ ಎಂದು ಚೆನ್ನಪ್ಪ ಹೇಳಿದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…