ಶಹಾಬಾದ: ಇತ್ತಿಚ್ಚಿಗೆ ನಿಧನರಾದ ಲಕ್ಷ್ಮಿಬಾಯಿ ಭೀಮರಾಯ ಮುದ್ನಾಳ ಅವರ ಮನೆಗೆ ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಅವರು ಬೇಟಿ ನೀಡಿ ಕುಟುಂಬದ ಸದಸ್ಯರಿಗೆ ಸ್ವಾಂತನ ಹೇಳಿದರು.
ಶಾಸಕ ಬಸವರಾಜ ಮತ್ತಿಮಡು ಅವರು ರವಿವಾರ ಶಿವಶರಣ ಮಾದಾರ ಚನ್ನಯ್ಯ ಜಯಂತೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.ಮಾದಾರ ಚನ್ನಯ್ಯ ಜಯಂತೋತ್ಸವ ಸಮಿತಿಯ ಗೌರವಾಧ್ಯಕ್ಷ ಭೀಮರಾಯ ಮುದ್ನಾಳ ಅವರ ಪತ್ನಿ ಲಕ್ಷ್ಮಿಬಾಯಿ ಹೃದಯಾಘಾತದಿಂದ ಎರಡು ದಿನಗಳ ಹಿಂದೆ ನಿಧನರಾದ ಸುದ್ದಿ ತಿಳಿಸಿದರು.
ಸುದ್ದಿ ತಿಳಿಯುತ್ತಿದ್ದಂತೆ, ಅವರ ಮನೆಗೆ ಬೇಟಿ ನೀಡಿ ಕುಟುಂಬದ ಸದಸ್ಯರಿಗೆ ಸ್ವಾಂತನ ಹೇಳಿದಲ್ಲದೇ, ನಾವು ನಿಮ್ಮೊಂದಿಗಿದ್ದೇವೆ ಎಂದು ಧೈರ್ಯ ತುಂಬಿದರು. ನನ್ನ ಕ್ಷೇತ್ರ ನನಗೆ ಕುಟುಂಬ ಇದ್ದ ಹಾಗೇ.ಇಲ್ಲಿ ಯಾರೇ ಅಗಲಿದರೂ ನನ್ನು ಕುಟುಂಬದ ಸದಸ್ಯರನ್ನು ನಾನು ಕಳೆದುಕೊಂಡಂತೆ.ನಿಮಗೆ ಯಾವುದೇ ಸಮಸ್ಯೆ ಇದ್ದರೇ ತಿಳಿಸಿ ಅದನ್ನು ಪರಿಹರಿಸುವ ಜವಾಬ್ದಾರಿ ನನ್ನದು ಎಂದು ಹೇಳಿದರು.
ಈ ಸಂದರ್ಭದಲ್ಲಿ ವಾಡಿ-ಶಹಾಬಾದ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕನಕಪ್ಪ ದಂಡಗುಲಕರ್, ಮುಖಂಡರಾದ ನಾಗರಾಜ ಮೇಲಗಿರಿ, ನಿಂಗಣ್ಣ ಹುಳಗೋಳಕರ್,ಮಹಾದೇವ ಗೊಬ್ಬೂರಕರ್,ಶಾಮಕುಮಾರ, ಯಲ್ಲಪ್ಪ ಸೇರಿದಂತೆ ಅನೇಕರು ಇದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…