ಶಾಸಕ ಪಿ.ರಾಜೀವ್ ಪ್ರತಿಕೃತಿ ದಹಿಸಿದವರ ಮೇಲೆ ಕೇಸ್ ದಾಖಲಿಸಿ: ಕ್ರಾಂತಿ

ಸುರಪುರ:ನಕಲಿ ಬೇಡ ಜಂಗಮರು ಪರಿಶಿಷ್ಠ ಜಾತಿಯ ಸಂವಿಧಾನ ಬದ್ಧವಾದ ಹಕ್ಕು ವಂಚನೆಗೆ ಮುಂದಾಗಿದ್ದಾರೆ,ಇದನ್ನು ಕುರಿತು ಸರಕಾರದ ಗಮನಕ್ಕೆ ತಂದಿರುವ ಶಾಸಕ ಪಿ.ರಾಜೀವ್ ಅವರ ಪ್ರತಿಕೃತಿಯನ್ನು ದಹಿಸಿದವರ ಮೇಲೆ ಕೇಸ್ ದಾಖಲಿಸುವಂತೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಕ್ರಾಂತಿಕಾರಿ ಬಣದ ಜಿಲ್ಲಾ ಸಂಚಾಲಕ ಮಲ್ಲಿಕಾರ್ಜುನ ಕ್ರಾಂತಿ ಆಕ್ರೋಶ ವ್ಯಕ್ತಪಡಿಸಿದರು.

ಸಂಘಟನೆಯಿಂದ ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಮಾತನಾಡಿ,ಡಾ:ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಶತಮಾನಗಳಿಂದ ತುಳಿತಕ್ಕೊಳಗಾಗಿರುವ ಪರಿಶಿಷ್ಠ ಸಮುದಾಯವನ್ನು ಮೇಲಕ್ಕೆತ್ತಲು ಸಂವಿಧಾನ ಬದ್ಧವಾದ ಮೀಸಲಾತಿಯನ್ನು ಒದಗಿಸಿದರು.ಪರಿಶಿಷ್ಠ ಜಾತಿಯ ಒಟ್ಟು ೧೦೨ರ ಪಟ್ಟಿಯಲ್ಲಿ ಕ್ರಮ ಸಂಖ್ಯೆ ೧೯ ಬೇಡ ಜಂಗಮ ಬುಡ್ಗ ಜಂಗಮ ಜಾತಿ ಇದ್ದು,ಇದು ಅಸ್ಪೃಶ್ಯ ಸಮುದಾಯಕ್ಕೆ ಸೇರಿದೆ.

ನಕಲಿ ಬೇಡ ಜಂಗಮರು ಪರಿಶಿಷ್ಠ ಜಾತಿಯವರ ಸಂವಿಧಾಣ ಬದ್ಧವಾದ ಹಕ್ಕು ಕಬಳಿಸಲು ನಕಲಿ ಪ್ರಮಾಣ ಪತ್ರವನ್ನು ಪಡೆಯಲು ಮುಂದಾಗಿದ್ದಾರೆ.ಇದನ್ನು ಅಧೀವೇಶನದಲ್ಲಿ ಶಾಸಕರಾದ ಪಿ.ರಾಜೀವ್ ನ್ಯಾಯಪರವಾದ ಧ್ವನಿ ಎತ್ತಿದ್ದಾರೆ.ಇದನ್ನು ಸಹಿಸದೆ ಕೆಲ ಮಠಾಧೀಶರು ಕಳೆದ ೧೬ನೇ ತಾರೀಖು ಶಹಾಪುರದಲ್ಲಿ ಪಿ.ರಾಜೀವ್ ಅವರ ಪ್ರತಿಕೃತಿ ದಹಿಸಿದ್ದಾರೆ,ಇದನ್ನು ಉಗ್ರವಾಗಿ ಖಂಡಿಸುತ್ತೇವೆ ಮತ್ತು ಪ್ರತಿಕೃತಿ ದಹಿಸಿದವರ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಬೇಕೆಂದು ಒತ್ತಾಯಿಸುವುದಾಗಿ ತಿಳಿಸಿದರು.

ದಲಿತರನ್ನು ರಾಜಕೀಯವಾಗಿ ಆರ್ಥಿಕವಾಗಿ ತುಳಿಯುವ ಉದ್ದೇಶಿತ ಪಿತೂರಿಯಾಗಿದೆ,ಇದಕ್ಕೆ ಮೇಲ್ಜಾತಿಯ ರಾಜಕೀಯ ಪಕ್ಷಗಳ ಬೆಂಬಲವಿದೆ.ಕಲಬುರ್ಗಿ,ಯಾದಗಿರಿ,ಬೀದರ್,ರಾಯಚೂರು ಮತ್ತು ಬಳ್ಳಾರಿ ಜಿಲ್ಲೆಯ ಆಂಧ್ರಗಡಿಯಲ್ಲಿ ಇರುವ ಹಳ್ಳಿಗಳಲ್ಲಿ ಮಾಲಾ ದಾಸರು,ಮಾದಿಗ ದಾಸರು,ಮಾಲಾ ಜಂಗಮರು,ಮಾದಿಗ ಜಂಗಮರು ನಿಜವಾದ ಬೇಡ ಜಂಗಮರು,ಇಲ್ಲಿರುವವರು ನಕಲಿ ಬೇಡ ಜಂಗಮರು ಎಂದು ಆರೋಪಿಸಿದರು.

ನಂತರ ಪ್ರತಿಕೃತಿಯನ್ನು ಹದನ ಮಾಡಿ ಮುಖ್ಯಮಂತ್ರಿಗಳಿಗೆ ಬರೆದ ಮನವಿಯನ್ನು ತಹಸೀಲ್ದಾರರ ಮೂಲಕ ಸಲ್ಲಿಸಿದರು.ಈ ಸಂದರ್ಭದಲ್ಲಿ ಮುಖಂಡರಾದ ಮಲ್ಲಿಕಾರ್ಜುನ ಕುರಕುಂದಿ,ಮಹಾದೇವಪ್ಪ ಬಿಜಾಸಪುರ,ಬುದ್ಧಿವಂತ ನಾಗರಾಳ,ಜೆಟ್ಟೆಪ್ಪ ನಾಗರಾಳ,ರಾಮಣ್ಣ ಶೆಳ್ಳಗಿ,ಮರಿಲಿಂಗಪ್ಪ ನಾಟೇಕಾರ್,ಖಾಜಾಹುಸೇನ್ ಗುಡಗುಂಟಿ,ಮರಿಲಿಂಗಪ್ಪ ದೇವಿಕೇರಿ,ಮಹೇಶ ಯಾದಗಿರಿ,ಮಹ್ಮದ್ ಅನೀಫ್,ಭೀಮಪ್ಪ ಲಕ್ಷ್ಮೀಪುರ ಸೇರಿದಂತೆ ಅನೇಕರಿದ್ದರು.

emedialine

Recent Posts

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

4 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

9 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

20 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

21 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

22 hours ago

ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿ; ಮತ್ತಿಮಡು

ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…

22 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420