ಬಿಸಿ ಬಿಸಿ ಸುದ್ದಿ

ಕಾಂಗ್ರೆಸ್ ಪಕ್ಷ ಈ ದೇಶದ ಜನರಿಗಾಗಿ ದುಡಿದಿದೆ: ಶರಣಪ್ರಕಾಶ್ ಪಾಟೀಲ್

ಕಲಬುರಗಿ: ಈ ದೇಶಕ್ಕೆ ಸ್ವಾತಂತ್ರ್ಯ ಕೊಡಿಸಲು ಹುಟ್ಟಿಕೊಂಡ ಕಾಂಗ್ರೆಸ್ ಪಕ್ಷ ಕಾಶ್ಮೀರ ದಿಂದ ಕನ್ಯಾಕುಮಾರಿವರೆಗೆ ಹೋರಾಟ ನಡೆಸಿದೆ. ಅಸಂಖ್ಯಾತ ಬ್ರಿಟೀಷರ ಗುಂಡೇಟಿಗೆ ಎದೆಯೊಡ್ಡಿದ ಇತಿಹಾಸ ನಮ್ಮ ಮುಂದಿದೆ ಎಂದು ಮಾಜಿ ಸಚಿವರಾದ ಡಾ ಶರಣಪ್ರಕಾಶ್ ಪಾಟೀಲ್ ಅಭಿಪ್ರಾಯಪಟ್ಟರು‌

ಜಿಲ್ಲಾ ಕಾಂಗ್ತೆಸ್ ಪಕ್ಷದ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಕಾಂಗ್ರೆಸ್ ಸಂಸ್ಥಾ ಪನಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

1885 ರಲ್ಲಿ ಹುಟ್ಟಿಕೊಂಡ ಕಾಂಗ್ರೆಸ್ ಪಕ್ಷ ಕಳೆದ ಮಹಾತ್ಮಾಗಾಂಧಿ, ಸರ್ದಾರ ವಲ್ಲಭಭಾಯಿ ಪಟೇಲ್, ಜವಾಹರ್ ಲಾಲ್ ಅಬ್ದುಲ್ ಕಲಾಂ ಆಜಾದ್ ರಂತ ಮಹಾನ್ ನಾಯಕರ ಮಾರ್ಗದರ್ಶನದಲ್ಲಿ ಲಕ್ಷಾಂತರ ಜನ ನಾಯಕರು ಬ್ರಿಟೀಷರ ವಿರುದ್ದ ಹೋರಾಡಿ ಈ ದೇಶದ ಜನರಿಗೆ ಸ್ವಾತಂತ್ರ್ಯ ಕೊಡಿಸಲು ಸರ್ವಸ್ವವನ್ನೇ ತ್ಯಾಗ ಮಾಡಿದ್ದಾರೆ. ಅಲ್ಲಿಂದ ನಿರಂತರ 136 ವರ್ಷಗಳ ಕಾಲ ಯಾವಗ ಅಧಿಕಾರದಲ್ಲಿಯೋ ಆಗೆಲ್ಲ ಪಕ್ಷ ದೇಶದ ಜನರ ಪರವಾದ ಅಭಿವೃದ್ದಿ ಯೋಜನೆಗಳನ್ನು ಜಾರಿಗೆ ತಂದಿದೆ. ವಿರೋಧಪಕ್ಷದಲ್ಲಿದ್ದಾಗ ಆಳುವ ಸರ್ಕಾರಕ್ಕೆ ಸೂಕ್ತ ಸಲಹೆ ನೀಡಿದೆ ಎಂದರು.

ಸ್ವಾತಂತ್ರ್ಯ ನಂತರ ಈ ದೇಶ ಪ್ರಜಾತಂತ್ರ ವ್ಯವಸ್ಥೆಯಲ್ಲಿ ನಡೆಯಬೇಕು. ಸಮಾಜದ ಕಟ್ಟಕಡೆಯ ಜನರಿಗೆ ಸೌಲಭ್ಯ ತಲುಪಬೇಕು ಎನ್ನುವ ಆಶಯದಿಂದಾಗಿ, ಭಾರತರತ್ನ ಡಾ ಬಾಬಾಸಾಹೇಬ ಅಂಬೇಡ್ಕರ ಅವರ ನೇತೃತ್ವದಲ್ಲಿ ಸಂವಿಧಾನ ರಚನೆ ಮಾಡಲಾಯಿತು.

ದೇಶದ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರು ಐಐಟಿ ಸೇರಿದಂತೆ ಹಲವಾರು ಸಂಸ್ಥೆಗಳನ್ನು, ಕಾರ್ಖಾನೆಗಳನ್ನು ವೈದ್ಯಕೀಯ ಸಂಸ್ಥೆ ಗಳನ್ನು ಸ್ಥಾಪಿಸಿದರು. ಅವರ ನಂತರ ಲಾಲ್ ಬಹಾದ್ದೂರ್ ಶಾಸ್ತ್ರಿ, ಇಂದಿರಾಗಾಂಧಿ ಹಾಗೂ ರಾಜೀವ್ ಗಾಂಧೀ ಅವರು ಕೂಡಾ ಜನರಪರ ಆಡಳಿತ ನೀಡುವುದರ ಜೊತೆಗೆ ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಬೆಳವಣಿಗೆಗೆ ಶ್ರಮವಹಿಸಿದ್ದರು ಎಂದು ನೆನಪಿಸಿಕೊಂಡರು.

ಆ ನಂತರ ಪ್ರಧಾನಿಗಳಾದ ಪಿ.ವಿ‌. ನರಸಿಂಹರಾವ್ ಹಾಗೂ ಮನಮೋಹನಸಿಂಗ್ ಅವರು ಅದೇ ಪರಂಪರೆ ಮುಂದುವರೆಸಿದರು. ನರೇಗಾ, ಆಹಾರ ಹಕ್ಕು ಕಾಯ್ದೆ, ಶಿಕ್ಷಣ ಹಕ್ಕು ಕಾಯ್ದೆ ಯಂತಹ ಜನಪರ ಕಾಯಿದೆಗಳು ಮನಮೋಹನಸಿಂಗ್ ಅವರ ಕಾಲದಲ್ಲಿ ಜಾರಿಗೆ ಬಂದು ಜನರಿಗೆ ಅನುಕೂಲವಾದವು ಎಂದು ಅವರು ಸ್ಮರಿಸಿದರು.

ಇದೇ ಸಂದರ್ಭದಲ್ಲಿ ಹಿರಿಯ ಕಾಂಗ್ರೆಸ್ ನಾಯಕರಿಗೆ ಸನ್ಮಾನಿಸಲಾಯಿತು. ಮಾಜಿ ಸಚಿವರಾದ, ಶಾಸಕರಾದ ಹಾಗೂ ಕೆಪಿಸಿಸಿ ವಕ್ತಾರರಾದ ಪ್ರಿಯಾಂಕ್ ಖರ್ಗೆ, ಡಿಸಿಸಿ ಅಧ್ಯಕ್ಷರಾದ ಜಗದೇವ ಗುತ್ತೇದಾರ ಸೇರಿದಂತೆ ಮತ್ತಿತರಿದ್ದರು.

emedialine

Recent Posts

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

36 mins ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

39 mins ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

42 mins ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

2 hours ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

3 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

6 hours ago