ಗುವಿವಿಯಲ್ಲಿ ರಾಷ್ಟ್ರಕವಿ ಕುವೆಂಪುರವರ ೧೧೭ನೇ ಜಯಂತ್ಯೋತ್ಸವ

ಕಲಬುರಗಿ: ರಾಷ್ಟ್ರಕವಿ ಕುವೆಂಪುರವರ ೧೧೭ನೇ ಜಯಂತ್ಯುತ್ಸವ ಕಾರ್ಯಕ್ರಮ ವನ್ನು ಕನ್ನಡ ಅಧ್ಯಯನ ಸಂಸ್ಥೆಯ, ಹರಿಹರ ಸಭಾಂಗಣದಲ್ಲಿ ಏರ್ಪಡಿಸಲಾಗಿತ್ತು. ಗುಲಬರ್ಗಾ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ದಯಾನಂದ ಅಗಸರ ಅವರು ರಾಷ್ಟ್ರಕವಿ ಕುವೆಂಪುರವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು ರಾಷ್ಟ್ರ ಕವಿ ಕುವೆಂಪುರವರ ಸಾಹಿತ್ಯ ಇರದೇ ಹೋಗಿದ್ದರೆ, ನಮ್ಮ ಸಾಹಿತ್ಯ, ಸಂಸ್ಕೃತಿ, ಸಮಾಜ ಹೇಗಿರುತ್ತಿತ್ತು ಎಂಬುದನ್ನು ಊಹಿಸಿಕೊಳ್ಳುವದಕ್ಕೂ ಅಸಾಧ್ಯವೆನಿಸುತ್ತದೆ. ಕುವೆಂಪುರವರು ಕೇವಲ ಕವಿಯಾಗಿರದೆ ಅವರೊಬ್ಬ ಭಾಷಾ ತಜ್ಞರಾಗಿ, ಸಮಾಜ ವಿಜ್ಞಾನಿಯಾಗಿ, ಚಿಂತಕರಾಗಿ ಅನೇಕತೆಯಲ್ಲಿ ಏಕತೆಯನ್ನು, ಏಕತೆಯಲ್ಲಿ ವಿವಿಧತೆಯನ್ನು ಕಂಡ ಮಹಾನ್ ವಿಜ್ಞಾನಿಯಾಗಿ ಕಾಣುತ್ತಾರೆ. ಭಾರತ ವಿಶಾಲವಾದ ದೇಶ, ಹಲವು ಮತ, ಧರ್ಮ, ಸಂಸ್ಕೃತಿಗಳ ನೆಲೆಬೀಡು. ಇಂತಹ ವಿಶ್ವಮಾನವ ಸಂದೇಶವನ್ನು ಜನತೆಗೆ ಸಾರಿದಂತಹ ಅಪರೂಪದ ದಾರ್ಶನಿಕ ಮಹಾನ್ ಕವಿ. ಕುವೆಂಪುರವರು ವೈಚಾರಿಕ ನೆಲೆಯಲ್ಲಿ ಸಾಹಿತ್ಯಿಕವಾಗಿ ತೊಡಗಿಸಿಕೊಂಡು, ಜನಪರ, ಜೀವಪರ ಚಿಂತನೆ, ವೈಚಾರಿಕ ಪ್ರಜ್ಞೆಗಳನ್ನು ಮಾನವನ ಬದುಕಿಗೆ ಬಿತ್ತಿದಂತವರು. ಇವರ ವೈಚಾರಿಕ ಚಿಂತನೆಗಳನ್ನು ಪ್ರತಿಯೊಬ್ಬ ಪ್ರಜೆಗಳು, ವಿದ್ಯಾರ್ಥಿಗಳು ಮೈಗೂಡಿಸಿಕೊಂಡರೆ ಸದೃಢ ಭಾರತ ನಿರ್ಮಾಣವಾಗುತ್ತದೆ ಎಂದು ಸಲಹೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕರಾದ ಪ್ರೊ. ಎಚ್.ಟಿ. ಪೋತೆ ಅವರು ದೇಶಕಂಡ ಅಪರೂಪದ ಮಹಾನ್ ಕವಿ ಕುವೆಂಪು. ಭಾರತ ದೇಶದಂತ ಸಂಕೀರ್ಣ ಸಂಸ್ಕೃತಿಯಲ್ಲಿ ಏಕತೆಯನ್ನು ಬಿತ್ತುವಂತಹ ಮಹತ್ವದ ಕಾರ್ಯ ಮಾಡಿದ ವಿಶ್ವಮಾನವ ವ್ಯಕ್ತಿತ್ವ ದರ್ಶನ ಮಾಡಿದ್ದಾರೆ. ಅಂದಿನ ಮೌಢ್ಯ ಸಂಪ್ರದಾಗಳನ್ನು ಮೆಟ್ಟಿ, ಮಾನವೀಕರಣಗೊಳಿಸಿದ ಮಹಾನ್ ವೈಚಾರಿಕ ಕುವೆಂಪು ಅವರ ಚಿಂತನೆಗಳು ಪ್ರತಿಯೊಬ್ಬ ನಾಗರಿಕರಿಗೂ ಅವಶ್ಯಕವಾಗುವಂತಹಗಳಾಗಿವೆ.

ಕಲಾನಿಕಾಯದ ಡೀನರಾದ ಪ್ರೊ. ರಮೇಶ ರಾಠೋಡ, ಪ್ರೊ. ಅಬ್ದುಲ್ ರಬ್ ಉಸ್ತಾದ್ ಡಾ. ಪರಿಮಳಾ ಅಂಬೇಕರ್ ಹಾಗೂ ಡಾ. ನಿಂಗಣ್ಣ ಟಿ. ವೇದಿಕೆ ಮೇಲೆ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಕಲಾನಿಕಾಯದ ಎಲ್ಲಾ ಬೋಧಕ ಬೋಧಕೇತರ ಸಿಬ್ಬಂದಿ ವರ್ಗ ಹಾಗೂ ವಿಧ್ಯಾರ್ಥಿಗಳು ಪಾಲ್ಗೊಂಡಿದ್ದರು. ಕಾರ್ಯಕ್ರಮವನ್ನು ಡಾ. ಎಂ.ಬಿ. ಕಟ್ಟಿ ಸ್ವಾಗತಿಸಿ ನಿರೂಪಿಸಿ ವಂದಿಸಿದರು.

emedialine

Recent Posts

ಕಲಬುರಗಿ ಶಿಕ್ಷಣ ಫಲಿತಾಂಶ ಸುಧಾರಣೆಗೆ ತಜ್ಞರ ಸಮಿತಿಯಿಂದ 3 ತಿಂಗಳಲ್ಲಿ ವರದಿ: ಡಾ.ಅಜಯ್ ಸಿಂಗ್

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಾಲಾ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ಶಿಕ್ಷಣ ಕ್ಷೇತ್ರದ ಸುಧಾರಣೆಗೆ ಮಂಡಳಿ ಪಣ ತೊಟ್ಟಿದ್ದು, ಬರುವಂತಹ…

22 mins ago

ವಿವಿಧ ಅಭಿವೃಧ್ಧಿ ಕಾಮಗಾರಿಗಳಿಗೆ ಶಾಸಕ ಆರ್.ವಿ.ನಾಯಕ ಚಾಲನೆ

ಸುರಪುರ: ನಗರದಲ್ಲಿ ವಿವಿಧ ಅಭಿವೃಧ್ಧಿ ಕಾಮಗಾರಿಗಳಿಗೆ ಶಾಸಕ ರಾಜಾ ವೇಣುಗೋಪಾಲ ನಾಯಕ ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು. ಈ…

2 hours ago

ಸಂಸ್ಕøತಿ ಉಳಿಸಿ ಬೆಳೆಸುವ ಸಂಘದ ಕಾರ್ಯ ಶ್ಲಾಘನೀಯ

ಸುರಪುರ:ದೇಶದಲ್ಲಿ ಹಲವು ಸಂಸ್ಕøತಿಗಳು ಇರುತ್ತವೆ,ಅಂತಹ ಸಂಸ್ಕøತಿಗಳಲ್ಲಿ ಕನ್ನಡ ಮತ್ತು ಕರ್ನಾಟಕ ಸಂಸ್ಕøತಿಯನ್ನು ಉಳಿಸಿ ಬೆಳೆಸುವ ಕಾರ್ಯವನ್ನು ಕಳೆದ 82 ವರ್ಷಗಳಿಂದ…

2 hours ago

ಸುರಪುರ:ಅಭಾವೀಲಿಂ ಮಹಾಸಭೆಗೆ ಪದಾಧಿಕಾರಿಗಳ ನೇಮಕ

ಸುರಪುರ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಸುರಪುರ ತಾಲೂಕ ನೂತನ ಘಟಕಕ್ಕೆ ಪದಾಧಿಕಾರಿಗಳನ್ನು ಆಯ್ಕೆಮಾಡಲಾಗಿದೆ ಎಂದು ಮಹಾಸಭಾ ತಾಲೂಕ…

2 hours ago

ಕಲಬುರಗಿ ಪಾಲಿಕೆ ಉಪ ಆಯುಕ್ತರನ್ನು ಅಮಾನತುಗೊಳಿಸಲು ಶಾಸಕ ಬಿ.ಆರ್. ಪಾಟೀಲ ಆಗ್ರಹ

ಕಲಬುರಗಿ: ಮಹಾನಗರ ಪಾಲಿಕೆಯ ಅಧೀಕ್ಷಕ, ಅಭಿಯಂತರ ಹಾಗೂ ಉಪ ಆಯುಕ್ತ ಆರ್.ಪಿ. ಜಾಧವ ಅವರನ್ನು ಅಮಾತುಗೊಳಿಸಿ ಮನೆಗೆ ಕಳಿಸಬೇಕು ಎಂದು…

2 hours ago

ಅ.6 ರಂದು ಡಾ. ಲಕ್ಷ್ಮಣ ದಸ್ತಿಯವರಿಂದ 371 J ಕಲಂ ಸೌಲತ್ತುಗಳ ಬಗ್ಗೆ ವಿಶೇಷ ಉಪನ್ಯಾಸ

ಕಲಬುರಗಿ: 371ನೇ ಜೇ ಕಲಂ ಸೌಲತ್ತುಗಳ ಬಗ್ಗೆ ಡಾ. ಲಕ್ಷ್ಮಣ ದಸ್ತಿಯವರಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಅಂಜುಮನ್ ಸಂಸ್ಥೆಯಿಂದ ಅ.6.…

2 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420