ಸುರಪುರ: ತಾಲೂಕಿನ ದೇವರಗೋನಾಲ ಗ್ರಾಮದ ಗಡಿ ಕಾಯುವ ವೀರ ಯೋಧ ಮಾನಯ್ಯ ಹೊಸ್ಮನಿಗೆ ನಗರದಲ್ಲಿ ಯುವ ಕರ್ನಾಟಕ ರಕ್ಷಣಾ ವೇದಿಕೆಯಿಂದ ಸನ್ಮಾನಿಸಲಾಗಿದೆ.ನಗರದ ಶ್ರೀಮತಿ ರಾಣಿ ಪಾಪಮ್ಮ ಜೇಜಾ ಅವರ ನಿವಾಸದಲ್ಲಿ ಹಮ್ಮಿಕೊಂಡಿದ್ದ ಸರಳ ಕಾರ್ಯಕ್ರಮದಲ್ಲಿ ವೀರ ಯೋಧನನ್ನು ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು,ಇಂದು ಭಾರತದ ಎಲ್ಲರು ಸುರಕ್ಷಿತವಾಗಿದ್ದೇವೆ ಎಂದರೆ ಅದಕ್ಕೆ ದೇಶ ಕಾಯುವ ಯೋಧರು ಕಾರಣ ಅಂತಹ ಯೋಧರನ್ನು ನಾವು ನಿತ್ಯವು ಸ್ಮರಿಸಬೇಕು.ಆದ್ದರಿಂದ ಇಂದು ನಮ್ಮವರಾದ ದೇವರಗೋನಾಲ ಗ್ರಾಮದ ಯೋಧ ಮಾನಯ್ಯ ಹೊಸ್ಮನಿಯವರುನ್ನು ಯುವ ಕರ್ನಾಟಕ ರಕ್ಷಣಾ ವೇದಿಕೆ ಸನ್ಮಾನಿಸಿ ಗೌರವಿಸುವ ಮೂಲಕ ಯೋಧರಿಗೆ ಬೆಂಬಲ ತೋರುತ್ತಿದ್ದೇವೆ ಎಂದರು.
ಸನ್ಮಾನ ಸ್ವೀಕರಿಸಿದ ಯೋಧ ಮಾನಯ್ಯ ಹೊಸ್ಮನಿ ಮಾತನಾಡಿ,ನಾವು ಗಡಿಯಲ್ಲಿದ್ದು ಹಗಲಿರಳು ಭಾರತ ಮಾತೆಯ ಸೇವೆ ಮಾಡುತ್ತೇವೆ,ಅದನ್ನು ಗುರುತಿಸಿ ತಾವು ಇಂದು ನನ್ನನ್ನು ಆಹ್ವಾನಿಸಿ ಸನ್ಮಾನಿಸಿ ಗೌರವಿಸಿರುವುದಕ್ಕೆ ಧನ್ಯವಾದ ಅರ್ಪಿಸುವುದಾಗಿ ತಿಳಿಸಿದರು.
ಅಲ್ಲದೆ ದೇಶದ ಎಲ್ಲರು ನಮ್ಮ ಅಣ್ಣ ತಮ್ಮಿಂದರಂತೆ ಅವರೆಲ್ಲರ ರಕ್ಷಣೆ ಮಾಡುವ ಸೇವೆ ಲಭಿಸಿರುವುದು ಸಂತೋಷದ ಸಂಗತಿ ಇದನ್ನು ನೆನೆದೆ ನಾವು ನಿತ್ಯವು ನಮ್ಮ ಸೇವೆಯಲ್ಲಿ ತೊಡಗುತ್ತೇವೆ,ಅದಕ್ಕೆ ನೀವು ತೋರುತ್ತಿರುವ ಈ ಗೌರವ ನಮ್ಮಲ್ಲಿ ಮತ್ತು ಹುಮ್ಮಸ್ಸಿನಿಂದ ಕೆಲಸ ಮಾಡಲು ಶಕ್ತಿ ತುಂಬುತ್ತದೆ,ಈ ಯುವ ಕರ್ನಾಟಕ ರಕ್ಷಣಾ ವೇದಿಕೆ ಸಂಘಟನೆ ಮತ್ತಷ್ಟು ಇಂತಹ ಯೋಧರನ್ನು ಗುರುತಿಸಿ ಸನ್ಮಾನಿಸುವ ಮೂಲಕ ನಮ್ಮೆಲ್ಲ ಯೋಧರಿಗೆ ಬಲ ತುಂಬಲೆಂದು ಹಾರೈಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಹುಲಿಹೈದರ ಸಂಸ್ಥಾನದ ರಾಜ ವಂಶಸ್ಥರಾದ ರಾಜಾ ಶುಭಾಶ್ಚಂದ್ರ ನಾಯಕ,ವೇದಿಕೆ ತಾಲೂಕು ಗೌರವಾಧ್ಯಕ್ಷರಾದ ರಾಜಾ ಚನ್ನಪ್ಪ ನಾಯಕ,ತಾಲೂಕು ಉಪಾಧ್ಯಕ್ಷ ಸಚಿನಕುಮಾರ ನಾಯಕ,ಖಜಾಂಚಿ ಮಂಜುನಾಥ,ಕಾರ್ಯದರ್ಶಿ ರಫೀಕ್ ಷಾ,ಅಬೀದ್ ಹುಸೇನ್ ಪಗಡಿ,ರಾಜಾ ಉಡಚಪ್ಪ ನಾಯಕ,ಅನೀಲ್ ಬಿಲ್ಹಾರ್,ಹರೀಶ್ ಸೇರಿದಂತೆ ಅನೇಕರಿದ್ದರು.
ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…
ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…
ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…
ಕಲಬುರಗಿ: ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…
ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ…
ಕಲಬುರಗಿ: ಶಾಲಾ ಶಿಕ್ಷಣ ಇಲಾಖೆ ಕರ್ನಾಟಕ ರಾಜ್ಯಮಟ್ಟದ ಶಾಲಾ ಮಕ್ಕಳ ಆಟೊಗಳ ಸ್ಪರ್ಧೆ 2024 25 ಈಚೆಗೆ ಬೆಂಗಳೂರಿನಲ್ಲಿ ನಡೆದ…