ಬಿಸಿ ಬಿಸಿ ಸುದ್ದಿ

ರಾಜೀನಾಮೆ ನೀಡಿದ ಶಾಸಕರಿಗೆ ಅನರ್ಹಗೊಳಿಸಬೇಕೆಂದೂ ಸ್ಪೀಕರ್‌ ಗೆ ಮನವಿ

ಕಲಬುರಗಿ: ವಿಶ್ವದ ಎದುರು ನಾಚಿ ತಲೆ ತಗ್ಗಿಸುವ ಕೆಲಸ ಕರ್ನಾಟಕದ ರಾಜಕೀಯ ರಂಗದಲ್ಲಿ ನಡೆಯುತ್ತಿದ್ದು, ಶಾಸಕರು ಮೂಕಪ್ರಾಣಿಗಳಂತೆ ಬಿಕರಿಗೊಳಗಾಗುತ್ತಿರುವುದು ಪ್ರಜಾಪ್ರಭುತ್ವ ಕ್ಕೆ ಮಾರಕ, ಯಾವುದೇ ಕಾರಣಕ್ಕೂ ಶಾಸಕರ ರಾಜೀನಾಮೆ ಅಂಗೀಕರಿಸಬಾರದು. ಮತ್ತು ಅವರು ಜನಹಿತ ಕಾಪಾಡಲು ಬದ್ಧರಾಗಿಲ್ಲದ ಕಾರಣ ಅವರನ್ನು ಅನರ್ಹಗೊಳಿಸಬೇಕೆಂದೂ ರಾಜ್ಯದ ಸಭಾಧ್ಯಕ್ಷರಿಗೆ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಪತ್ರ ಬರೆದು ಮತ್ತು ಇ-ಮೇಲ್ ಕಳುಹಿಸುವ ಮೂಲಕ ಆಗ್ರಹಿಸಿದೆ.

ಪತ್ರದಲ್ಲಿ ಜನವಾದಿ ಮಹಿಳಾ ಸಂಘಟನೆಯಿಂದ “ಪ್ರಜಾಪ್ರಭುತ್ವ ಉಳಿಸಿ” ಅಭಿಯಾನದ ಭಾಗವಾಗಿ ಈ ಪತ್ರ ಬರೆಯಲಾಗಿದೆ ಎಂದು ಅಧ್ಯಕ್ಷೆ ಕೆ ನೀಲಾ ಅವರು ತಿಳಿಸಿದ್ದಾರೆ.

ಕೇಂದ್ರದಲ್ಲಿ ಸರಕಾರ ನಡೆಸುತ್ತಿರುವ, ರಾಜ್ಯದಲ್ಲಿ ವಿರೋಧ ಪಕ್ಷ ಬಿಜೆಪಿ ಪಕ್ಷದ ಪ್ರಮುಖ ನಾಯಕರುಗಳು ರಾಜಾರೋಷವಾಗಿ ‘ಅತೃಪ್ತ’ ಶಾಸಕರ ಜೊತೆ ನಿಂತಿರುವುದು, ಪಕ್ಷದ ಪ್ರಮುಖರ ವಿಶೇಷ ವಿಮಾನಗಳಲ್ಲಿ ಶಾಸಕರನ್ನು ಕರೆದೊಯ್ಯುತ್ತಿರುವುದು ಮಾಧ್ಯಮಗಳ ಮೂಲಕ ಜಗಜ್ಜಾಹೀರು ಆಗುತ್ತಿದೆ, ರಾಜ್ಯದಲ್ಲಿ ಭೀಕರ ಬರಗಾಲವಿದೆ. ಕುಡಿಯುವ ನೀರಿಗೂ ತತ್ವಾರವಾಗಿದೆ. ಮಳೆ ಕೈಕೊಟ್ಟು, ರೈತರು ಕೂಲಿಕಾರರು, ಕಂಗಾಲಾಗಿ, ಊರು ಕೇರಿ ಬಿಟ್ಟು ನಗರಗಳತ್ತ ತುತ್ತು ಕೂಳಿಗಾಗಿ ಗುಳೆ ಹೊರಟಿದ್ದಾರೆ. ಪತ್ರದಲ್ಲಿ ಕಳವಳ ವ್ಯಕ್ತಪಡಿಸಿದರು.

ಮಹಿಳೆಯರು ಮಕ್ಕಳ ಮೇಲೆ, ಹಿಂಸೆ ಅತ್ಯಾಚಾರಗಳು ಹೆಚ್ಚಿವೆ. ದಲಿತರ ಮತ್ತು ಅಲ್ಪಸಂಖ್ಯಾತರ ಮೇಲೆ ಜಾತಿ ಕೋಮಿನ ನೆಲೆಯ ದೌರ್ಜನ್ಯಗಳು ವರದಿಯಾಗುತ್ತಲೇ ಇವೆ. ಈ ಯಾವ ವಿಷಯಗಳ ಕುರಿತೂ ತಲೆ ಕೆಡಿಸಿಕೊಳ್ಳದೆ ಕೆಲವು ಶಾಸಕರು ಹೊಣೆ ಗೇಡಿತನದಿಂದ ವರ್ತಿಸುತಿದ್ದಾರೆಂದು ಅವರು ಆರೋಪಿಸಿದರು.

ಈಗ ರಾಜಿನಾಮೆ ಕೊಟ್ಟಿರುವ ಯಾವ ಶಾಸಕರೂ ಜನಹಿತ ಅಥವಾ ತಮ್ಮ ಕ್ಷೇತ್ರದ ಮತದಾರರ  ಹಿತದ ದೃಷ್ಟಿಯಿಂದ ರಾಜಿನಾಮೆ ಕೊಟ್ಟಿರುವುದಿಲ್ಲ. ಅವರಲ್ಲಿ ಹಣ ಮತ್ತು ಅಧಿಕಾರದ ಲಾಲಸೆ ಇರುವುದು ಮೇಲ್ನೋಟಕ್ಕೆ ಗೋಚರವಾಗುತ್ತಿದ್ದು, ಸಾರ್ವಜನಿಕ ಹಿತದೃಷ್ಟಿಯಿಂದ ಇನ್ನು ಮುಂದೆ ಈ ರೀತಿಯ ಕುದುರೆ ವ್ಯಾಪಾರಕ್ಕೆ ಶಾಸಕರು ಒಳಗಾಗದಂಥಹ ಒಂದು ಕಟ್ಟುನಿಟ್ಟಾದ ಕಾನೂನು ಬರುವಂತೆ ತಾವು ಕ್ರಮ ಕೈಗೊಳ್ಳಬೇಕೆಂದು ವಿನಂತಿಸುವ ಜೊತೆಗೆ ಯಾವುದೇ ಕಾರಣಕ್ಕೂ ಶಾಸಕರ ರಾಜೀನಾಮೆಯನ್ನು ಅಂಗೀಕರಿಸಬಾರದು. ಜನಹಿತ ಕಾಪಾಡಲು ಬದ್ಧರಾಗಿಲ್ಲದ ಶಾಸಕರನ್ನು ಅನರ್ಹಗೊಳಿಸಿ ಎಂದು ತಮ್ಮ ಮನವಿ ಪತ್ರದಲ್ಲಿ ಸಂಘಟನೆಯ ಪದಾಧಿಕಾರಿಗಳು ಮತ್ತು ಸದಸ್ಯರು  ಒತ್ತಾಯಿಸಿದ್ದಾರೆ.

emedialine

Recent Posts

ಬಂದಾ ನವಾಜ್ ದರ್ಗಾಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಸಚಿವ ಜಮೀರ್ ಅಹ್ಮದ್ ಖಾನ್

ಕಲಬುರಗಿ: ಅಲ್ಪಸಂಖ್ಯಾತ ಕಲ್ಯಾಣ ಹಾಗೂ ವಕ್ಫ್ ಮತ್ತು ವಸತಿ ಸಚಿವರಾದ ಬಿ.ಝಡ್ ಜಮೀರ್ ಅಹ್ಮದ್ ಖಾನ್ ಅವರು ಗುರುವಾರ ಇಲ್ಲಿನ…

1 hour ago

ಕಣ್ಣುಗಳನ್ನು ದಾನ ಮಾಡಿ ಅಂಧರ ಬಾಳಿಗೆ ಬೆಳಕಾಗಲು ಜಿ. ಪಂ. ಮಾಜಿ ಸದಸ್ಯೆ ಅನಿತಾ ವಳಕೇರಿ ಕರೆ

ಕಲಬುರಗಿ: ನೇತ್ರದಾನ ಮಹಾದಾನ, ಪ್ರತಿಯೊಬ್ಬರೂ ತಮ್ಮ ನೇತ್ರದಾನ ಮಾಡುವುದರೊಂದಿಗೆ ಅಂಧರ ಬಾಳಿಗೆ ಬೆಳಕಾಗಲು ಮುಂದೆ ಬರಬೇಕು ಎಂದು ಜಿಲ್ಲಾ ಪಂಚಾಯತ್…

1 hour ago

ಲಿಂಗರಾಜ ಶಾಸ್ತ್ರಿ ಪುಣ್ಯಸ್ಮರಣೋತ್ಸವ: ಬಹುಮುಖ ವ್ಯಕ್ತಿತ್ವದ ಶಾಸ್ತ್ರಿ

ಕಲಬುರಗಿ: ದಿ.ಲಿಂಗರಾಜ ಶಾಸ್ತ್ರಿ ಅವರದು ಬಹುಮುಖ ವ್ಯಕ್ತಿತ್ವ ಎಂದು ಜೆಡಿಎಸ್ ಮುಖಂಡ ನಾಸೀರ್ ಹುಸೇನ್‌ ಅಭಿಮತ ವ್ಯಕ್ತಪಡಿಸಿದರು. ನಗರದ ಕನ್ನಡ…

1 hour ago

ಕಲಬುರಗಿ: ನಕಲಿ ವೈದ್ಯರ ಹಾವಳಿ ತಡೆಯಲು ಆರೋಗ್ಯಧಿಕಾರಿಗೆ‌ ಮನವಿ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ನಕಲಿ ವೈದ್ಯರ ವಹಾವಳಿ ತಡೆಯಬೇಕೆಂದು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಯುವ ಕರ್ನಾಟಕ ವೇದಿಕೆ ಚಿಂಚೋಳಿ ಮತ್ತು…

2 hours ago

ವೀ.ಲಿಂ.ಸಂಘಟನಾ ವೇದಿಕೆ ವಿದ್ಯಾರ್ಥಿ ಘಟಕದ ಅಧ್ಯಕ್ಷ ಬಸವರಾಜ ಶೆಳ್ಳಗಿ

ಸುರಪುರ: ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಸುರಪುರ ತಾಲೂಕ ವಿದ್ಯಾರ್ಥಿ ಘಟಕದ ಅಧ್ಯಕ್ಷರನ್ನಾಗಿ ಬಸವರಾಜ ಎಸ್.ಶೆಳ್ಳಗಿ ಅವರನ್ನು ನೇಮಕಗೊಳಿಸಲಾಗಿದೆ. ಈ…

2 hours ago

ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯ ವಿಶ್ವ ಓಜೋನ್ ದಿನ

ಸುರಪುರು: ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಯಾದಗಿರಿಯವರ ಸಂಯೋಗದಲ್ಲಿ “ವಿಶ್ವ ಓಜೋನ್ ದಿನ”…

2 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420