ಗ್ರಾಮೀಣ ಭಾಗಕ್ಕೆ ಬಸ್ ಬಿಡುವಂತೆ ವಿದ್ಯಾರ್ಥಿಗಳಿಂದ ರಸ್ತೆ ತಡೆದು ಪ್ರತಿಭಟನೆ

0
8

ಸುರಪುರ: ಹುಣಸಗಿ ಭಾಗಕ್ಕೆ ಹೋಗಲು ಬಸ್‌ಗಳಿಲ್ಲವೆಂದು ಆರೋಪಿಸಿ ಮಂಗಳವಾರ ಮದ್ಹ್ಯಾನ ವಿದ್ಯಾರ್ಥಿಗಳು ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ರಸ್ತೆ ತಡೆ ನಡೆಸಿದರು.

ನಗರಕ್ಕೆ ಸಚಿವರು ಆಗಮಿಸಿದ ಸಂದರ್ಭದಲ್ಲಿ ನಡೆದ ಪ್ರತಿಭಟನೆ ಹಲವಾರು ಚರ್ಚೆಗೂ ಕಾರಣವಾಯಿತು.ಅನೇಕ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿ,ನಾವು ಕವಡಿಮಟ್ಟಿಗೆ ಹೋಗಬೇಕು,ದೇವಾಪುರಕ್ಕೆ ಹೋಗಬೇಕು ಆದರೆ ರಸ್ತೆ ಬಂದ್ ಮಾಡಿದ್ದರಿಂದ ಬಸ್‌ಗಳಿಲ್ಲದೆ ಮದ್ಹ್ಯಾನದಿಂದ ಎಲ್ಲಾ ವಿದ್ಯಾರ್ಥಿಗಳು ಪರದಾಡುವಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

Contact Your\'s Advertisement; 9902492681

ಸಚಿವರು ಮತ್ತು ಶಾಸಕರು ಕಾರ್ಯಕ್ರಮದ ವೇದಿಕೆ ಕಡೆಗೆ ಬರುತ್ತಿರುವ ಸಂದರ್ಭದಲ್ಲಿಯೇ ಪ್ರತಿಭಟನೆ ನಡೆಸಿದ್ದನ್ನು ತೆರವುಗೊಳಿಸಲು ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಆಗಮಿಸಿ ವಿದ್ಯಾರ್ಥಿಗಳ ಮನವೊಲಿಸುವ ಪ್ರಯತ್ನ ಮಾಡಿದರಾದರು ವಿದ್ಯಾರ್ಥಿಗಳು ಮಣಿಯದೆ ಹೋರಾಟವನ್ನು ಮುಂದುವರೆಸಿದರು.

ನಂತರ ಸ್ಥಳಕ್ಕೆ ಡಿವೈಎಸ್ಪಿ ಡಾ:ದೇವರಾಜ ಬಿ ಆಗಮಿಸಿ ಎಲ್ಲಾ ವಿದ್ಯಾರ್ಥಿಗಳಿಗೆ ಬಸ್ ಕಲ್ಪಿಸುವುದಾಗಿ ತಿಳಿಸಿದರು ಆಗಲೂ ವಿದ್ಯಾರ್ಥಿಗಳು ವಾಗ್ವಾದ ಮುಂದುವರೆಸಿದರು,ನಂತರ ನಿಮ್ಮ ಗ್ರಾಮಗಳಿಗೆ ಹೋಗಲು ಬೈಪಾಸ್ ಮೂಲಕ ಬಸ್‌ಗಳನ್ನು ಬಿಡಲಾಗಿದೆ ಎಂದು ಎಲ್ಲಾ ವಿದ್ಯಾರ್ಥಿಗಳನ್ನು ಬಸ್ ನಿಲ್ದಾಣಕ್ಕೆ ಕರೆದುಕೊಂಡು ಹೋಗುವ ಮೂಲಕ ಪ್ರತಿಭಟನೆಯನ್ನು ಅಂತ್ಯಗೊಳಿಸಿ ವಿದ್ಯಾರ್ಥಿಗಳು ಅವರು ಊರುಗಳಿಗೆ ತೆರಳಲು ಅನುಕೂಲ ಮಾಡಿಕೊಡಲಾಯಿತು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here