ಸುರಪುರ: ಹುಣಸಗಿ ಭಾಗಕ್ಕೆ ಹೋಗಲು ಬಸ್ಗಳಿಲ್ಲವೆಂದು ಆರೋಪಿಸಿ ಮಂಗಳವಾರ ಮದ್ಹ್ಯಾನ ವಿದ್ಯಾರ್ಥಿಗಳು ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ರಸ್ತೆ ತಡೆ ನಡೆಸಿದರು.
ನಗರಕ್ಕೆ ಸಚಿವರು ಆಗಮಿಸಿದ ಸಂದರ್ಭದಲ್ಲಿ ನಡೆದ ಪ್ರತಿಭಟನೆ ಹಲವಾರು ಚರ್ಚೆಗೂ ಕಾರಣವಾಯಿತು.ಅನೇಕ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿ,ನಾವು ಕವಡಿಮಟ್ಟಿಗೆ ಹೋಗಬೇಕು,ದೇವಾಪುರಕ್ಕೆ ಹೋಗಬೇಕು ಆದರೆ ರಸ್ತೆ ಬಂದ್ ಮಾಡಿದ್ದರಿಂದ ಬಸ್ಗಳಿಲ್ಲದೆ ಮದ್ಹ್ಯಾನದಿಂದ ಎಲ್ಲಾ ವಿದ್ಯಾರ್ಥಿಗಳು ಪರದಾಡುವಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಸಚಿವರು ಮತ್ತು ಶಾಸಕರು ಕಾರ್ಯಕ್ರಮದ ವೇದಿಕೆ ಕಡೆಗೆ ಬರುತ್ತಿರುವ ಸಂದರ್ಭದಲ್ಲಿಯೇ ಪ್ರತಿಭಟನೆ ನಡೆಸಿದ್ದನ್ನು ತೆರವುಗೊಳಿಸಲು ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಆಗಮಿಸಿ ವಿದ್ಯಾರ್ಥಿಗಳ ಮನವೊಲಿಸುವ ಪ್ರಯತ್ನ ಮಾಡಿದರಾದರು ವಿದ್ಯಾರ್ಥಿಗಳು ಮಣಿಯದೆ ಹೋರಾಟವನ್ನು ಮುಂದುವರೆಸಿದರು.
ನಂತರ ಸ್ಥಳಕ್ಕೆ ಡಿವೈಎಸ್ಪಿ ಡಾ:ದೇವರಾಜ ಬಿ ಆಗಮಿಸಿ ಎಲ್ಲಾ ವಿದ್ಯಾರ್ಥಿಗಳಿಗೆ ಬಸ್ ಕಲ್ಪಿಸುವುದಾಗಿ ತಿಳಿಸಿದರು ಆಗಲೂ ವಿದ್ಯಾರ್ಥಿಗಳು ವಾಗ್ವಾದ ಮುಂದುವರೆಸಿದರು,ನಂತರ ನಿಮ್ಮ ಗ್ರಾಮಗಳಿಗೆ ಹೋಗಲು ಬೈಪಾಸ್ ಮೂಲಕ ಬಸ್ಗಳನ್ನು ಬಿಡಲಾಗಿದೆ ಎಂದು ಎಲ್ಲಾ ವಿದ್ಯಾರ್ಥಿಗಳನ್ನು ಬಸ್ ನಿಲ್ದಾಣಕ್ಕೆ ಕರೆದುಕೊಂಡು ಹೋಗುವ ಮೂಲಕ ಪ್ರತಿಭಟನೆಯನ್ನು ಅಂತ್ಯಗೊಳಿಸಿ ವಿದ್ಯಾರ್ಥಿಗಳು ಅವರು ಊರುಗಳಿಗೆ ತೆರಳಲು ಅನುಕೂಲ ಮಾಡಿಕೊಡಲಾಯಿತು.
ಕಲಬುರಗಿ: ಜೀವನದಲ್ಲಿ ಎದುರಾಗುವ ಅರಿಷಡ್ ವೈರಿಗಳನ್ನು ಗೆದ್ದು ಉತ್ತಮ ಬದುಕು ಕಟ್ಟಿದರೆ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಮಾಜಿ ಲೋಕಸಭಾ…
ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…
ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…
ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…
ಕಲಬುರಗಿ: ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…
ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ…