ಸುರಪುರ: ತಾಲೂಕಿನ ರುಕ್ಮಾಪುರ ಕ್ರಾಸ್ ಬಳಿಯ ಬೀದರ್ ಬೆಂಗಳೂರು ರಾಜ್ಯ ಹೆದ್ದಾರಿಯಲ್ಲಿ ಸಗರ ಗ್ರಾಮದ ವ್ಯಕ್ತಿಯ ಶವ ಪತ್ತೆಯಾಗಿದೆ.
ಬೆಳ್ಳಂಬೆಳಗ್ಗೆ ವ್ಯಕ್ತಿಯ ಶವವನ್ನು ಕಂಡವರು ಪೊಲೀಸರಿಗೆ ಮಾಹಿತಿ ನೀಡಿದ್ದು ನಂತರ ಶವವನ್ನು ತಾಲೂಕು ಆಸ್ಪತ್ರೆಗೆ ತಂದು ಇರಿಸಲಾಗಿತ್ತು. ವ್ಯಕ್ತಿಗೆ ಯಾವುದೋ ವಾಹನ ಅಪಘಾತ ಮಾಡಿರುವ ಶಂಕೆ ವ್ಯಕ್ತವಾಗಿತ್ತು ಸಂಜೆಯವರೆಗೂ ಕೂಡ ವ್ಯಕ್ತಿ ಯಾರೆಂಬುದು ಗುರುತು ಪತ್ತೆಯಾಗಿರಲಿಲ್ಲ. ಸಂಜೆಯ ವೇಳೆಗೆ ಮೃತವ್ಯಕ್ತಿ ಶಹಾಪುರ ತಾಲೂಕಿನ ಸಗರ ಗ್ರಾಮದವರೆಂದು ಗೊತ್ತಾಗಿದೆ.
ಸಾಯಿಬಣ್ಣ ತಂದೆ ಶಿವಶರಣಪ್ಪ ಮರ್ಸ್ ಎಂಬ 34 ವರ್ಷದ ವ್ಯಕ್ತಿ ಎಂದು ಗೊತ್ತಾಗಿದ್ದು, ಮೃತ ವ್ಯಕ್ತಿಯು ತನ್ನ ಪತ್ನಿಯ ಗ್ರಾಮವಾದ ದೇವದುರ್ಗ ತಾಲೂಕಿನ ನಿಲವಂಜಿ ಗ್ರಾಮಕ್ಕೆ ಹೋಗುವುದಾಗಿ ಹೇಳಿ ಬಂದಿದ್ದರು ಎಂದು ತಿಳಿದುಬಂದಿದೆ.ಸಂಜೆ ವೇಳೆ ಸಂಬಂಧಿಕರು ಶವವನ್ನು ತೆಗೆದುಕೊಂಡು ಹೋಗಿದ್ದಾರೆ.
ಮೃತ ವ್ಯಕ್ತಿ ಕೃಷಿಕರಾಗಿದ್ದು ಗ್ರಾಮದಲ್ಲಿ ಕೃಷಿ ಚಟುವಟಿಕೆ ಮಾಡಿಕೊಂಡಿದ್ದರು ಎಂದು ತಿಳಿದುಬಂದಿದ್ದು,ಪತ್ನಿ ಮತ್ತು ಒಂದು ಮಗು ಇರುವ ಬಗ್ಗೆ ತಿಳಿದುಬಂದಿದ್ದು ಸಾವಿಗೆ ನಿಖರವಾದ ಕಾರಣ ಪೊಲೀಸರ ತನಿಖೆಯಿಂದ ತಿಳಿದು ಬರಬೇಕಿದೆ. ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಾಲಾ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ಶಿಕ್ಷಣ ಕ್ಷೇತ್ರದ ಸುಧಾರಣೆಗೆ ಮಂಡಳಿ ಪಣ ತೊಟ್ಟಿದ್ದು, ಬರುವಂತಹ…
ಸುರಪುರ: ನಗರದಲ್ಲಿ ವಿವಿಧ ಅಭಿವೃಧ್ಧಿ ಕಾಮಗಾರಿಗಳಿಗೆ ಶಾಸಕ ರಾಜಾ ವೇಣುಗೋಪಾಲ ನಾಯಕ ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು. ಈ…
ಸುರಪುರ:ದೇಶದಲ್ಲಿ ಹಲವು ಸಂಸ್ಕøತಿಗಳು ಇರುತ್ತವೆ,ಅಂತಹ ಸಂಸ್ಕøತಿಗಳಲ್ಲಿ ಕನ್ನಡ ಮತ್ತು ಕರ್ನಾಟಕ ಸಂಸ್ಕøತಿಯನ್ನು ಉಳಿಸಿ ಬೆಳೆಸುವ ಕಾರ್ಯವನ್ನು ಕಳೆದ 82 ವರ್ಷಗಳಿಂದ…
ಸುರಪುರ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಸುರಪುರ ತಾಲೂಕ ನೂತನ ಘಟಕಕ್ಕೆ ಪದಾಧಿಕಾರಿಗಳನ್ನು ಆಯ್ಕೆಮಾಡಲಾಗಿದೆ ಎಂದು ಮಹಾಸಭಾ ತಾಲೂಕ…
ಕಲಬುರಗಿ: ಮಹಾನಗರ ಪಾಲಿಕೆಯ ಅಧೀಕ್ಷಕ, ಅಭಿಯಂತರ ಹಾಗೂ ಉಪ ಆಯುಕ್ತ ಆರ್.ಪಿ. ಜಾಧವ ಅವರನ್ನು ಅಮಾತುಗೊಳಿಸಿ ಮನೆಗೆ ಕಳಿಸಬೇಕು ಎಂದು…
ಕಲಬುರಗಿ: 371ನೇ ಜೇ ಕಲಂ ಸೌಲತ್ತುಗಳ ಬಗ್ಗೆ ಡಾ. ಲಕ್ಷ್ಮಣ ದಸ್ತಿಯವರಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಅಂಜುಮನ್ ಸಂಸ್ಥೆಯಿಂದ ಅ.6.…