ಕಾಂಗ್ರೆಸ್ ಅಭ್ಯಾರ್ಥಿಗಳ ಗೆಲ್ಲಿಸಿದ ಎಲ್ಲಾ ಮತದಾರರಿಗೆ ಕೃತಜ್ಞತೆ: ರಾಜಾ ವೆಂಕಟಪ್ಪ ನಾಯಕ

0
13

ಸುರಪುರ: ಮತಕ್ಷೇತ್ರದ ವ್ಯಾಪ್ತಿಗೆ ಬರುವ ಕಕ್ಕೇರಾ ಪುರಸಭೆಯ ಚುನಾವಣೆಯ ಹಿನ್ನಲೆಯಲ್ಲಿ ಕಕ್ಕೇರಾ ವ್ಯಾಪ್ತಿಯ ಮತದಾರರು ಕಾಂಗ್ರೆಸ್ ಅಭ್ಯರ್ಥಿಗಳ ಮೇಲೆ ಭರವಸೆಯನ್ನಿಟ್ಟು ತಮ್ಮ ಅಮೂಲ್ಯ ಮತಗಳನ್ನು ನೀಡಿ ನಮ್ಮ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲಿಸಿದ ಎಲ್ಲಾ ನನ್ನ ಮತದಾರಬಾಂಧವರಿಗೆ ಕೃತಜ್ಞತೆ ಸಲ್ಲಿಸುವುದರೊಂದಿಗೆ ಅವರ ನಂಬಿಕೆ ವಿಶ್ವಾಸಕ್ಕೆ ನಾನು ಎಂದಿಗೂ ಆಭಾರಿಯಾಗಿರುತ್ತೇನೆ ಎಂದು ಮಾಜಿ ಶಾಸಕರಾದ ರಾಜಾ ವೆಂಕಟಪ್ಪ ನಾಯಕ ತಿಳಿಸಿದ್ದಾರೆ.

ಕಕ್ಕೇರಾ ಪುರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯಾರ್ಥಿಗಳು ಜಯಗಳಿಸಿದ್ದರಿಂದ ಪತ್ರಿಕಾ ಹೇಳಿಕೆ ನೀಡಿರುವ ರಾಜಾ ವೆಂಟಕಪ್ಪ ನಾಯಕರು, ಪಕ್ಷದ ಅಭ್ಯರ್ಥಿಗಳ ಜಯಕ್ಕೆ ಹಗಲಿರುಳು ಶ್ರಮಿಸಿದ ಪಕ್ಷದ ಮುಖಂಡರೂ ಮತ್ತು ಕಾರ್ಯಕರ್ತರಿಗೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಅಭ್ಯರ್ಥಿಗಳ ಗೆಲುವಿಗೆ ಕಾರಣರಾದವರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ. ಚುನಾವಣೆಗಳಲ್ಲಿ ಸೊಲು,ಗೆಲವು ಒಂದೆ ನಾಣ್ಯದ ಎರಡು ಮುಖವಿದ್ದಂತೆ, ಸೊತವರು ಕುಗ್ಗದೆ ಮುಂದಿನ ದಿನಗಳಲ್ಲಿ ಪಕ್ಷವನ್ನು ಬಲಪಡಿಸಿ ಮುಂಬರುವ ಚುನಾವಣೆಗಳಲ್ಲಿ ಅಧಿಕಾರ ಚುಕ್ಕಾಣಿ ಹಿಡಿಯಲು ಶ್ರಮವಹಿಸಬೇಕೆಂದು ವಿನಂತಿಸುತ್ತೇನೆ ಎಂದು ತಿಳಿಸುವ ಮೂಲಕ ಸೋತ ಅಭ್ಯಾರ್ಥಿಗಳಿಗೆ ಸಂತೈಸುವ ಔದಾರ್ಯತೆ ತೋರಿದ್ದಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here