ಬಿಸಿ ಬಿಸಿ ಸುದ್ದಿ

ನಿವೃತ್ತ ಉಪನ್ಯಾಸಕರಿಗೆ ಅಭಿನಂದನ ಸಮಾರಂಭ

ಕಲಬುರಗಿ; ನಗರದ ಜ್ಞಾನ ಸಿಂಚನ ಪದವಿಪೂರ್ವ ಕಾಲೇಜಿನಲ್ಲಿ ಕರ್ನಾಟಕ ರಾಜ್ಯ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ ಬೆಂಗಳೂರು ಕಲಬುರ್ಗಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಪದಾಧಿಕಾರಿಗಳ ಕಾರ್ಯಕಾರಣಿ ಸಭೆಯಲ್ಲಿ ನಿವೃತ್ತ ಉಪನ್ಯಾಸಕರಿಗೆ ಅಭಿನಂದನ ಸಮಾರಂಭ ಜರುಗಿತು. ರಾಜ್ಯ ಘಟಕದ ಗೌರವ ಅಧ್ಯಕ್ಷ ತಿಮ್ಮಯ್ಯ ಪುರ್ಲೆ ಮಾತನಾಡಿ ಸಂಘದ ಬೆಳವಣಿಗೆಗೆ ಹಾಗೂ ನಮ್ಮ ಹಕ್ಕುಗಳಿಗಾಗಿ ಒಗ್ಗಟ್ಟಿನಿಂದ ಹೋರಾಟ ಮಾಡಲು ಹೇಳಿದರು.

ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧ್ಯಕ್ಷ ಎ ಮಲ್ಲಪ್ಪ ವಹಿಸಿದ್ದರು. ರಾಜ್ಯ ಘಟಕದ ಪದಾಧಿಕಾರಿಗಳಾದ ಡಾ.ಭೀಮರಾವ್ ಅರಿಕೇರಿ, ಸುಲೇಖ ಮಾಲಿಪಾಟೀಲ್, ಕಾನೂನು ಸಲಹೆಗಾರರು, ಬಸಲಿಂಗಪ್ಪ ಬಿರಾದರ್ ಭಾಗವಹಿಸಿದರು. ಕಾರ್ಯಕಾರಣಿ ಮಂಡಳಿ ಸಭೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನರಸಪ್ಪ ರಂಗೋಲಿ ಸಭೆ ಉದ್ದೇಶಗಳು ಮತ್ತು ಯೋಜನೆಗಳ ಕುರಿತು ಮಾತನಾಡಿದರು.

ತಾಲೂಕು ಮತ್ತು ಜಿಲ್ಲಾ ಮಟ್ಟದ ಪದಾಧಿಕಾರಿಗಳು ಸಂಘಟನೆ ಮತ್ತು ಸೇವೆಗಳ ಬಗ್ಗೆ ವಿಚಾರಗಳನ್ನು ಮಂಡನೆ ಮಾಡಿದರು. ಚಿತ್ತಾಪುರ ತಾಲೂಕ ಅಧ್ಯಕ್ಷ ಅಲ್ಲಾ ಪಟೇಲ್ ಬಿರಾದರ್, ಆಳಂದ ತಾಲೂಕ ಅಧ್ಯಕ್ಷ ಶಿವಕುಮಾರ್ ಜಿಲ್ಲಾ ಹಾಗೂ ತಾಲೂಕು ಇತರ ಪದಾಧಿಕಾರಿಗಳು ಭಾಗವಹಿಸಿದ್ದರು. ಪ್ರಸ್ತಾವಿಕವಾಗಿ ಜಿಲ್ಲಾ ಕಾರ್ಯಾಧ್ಯಕ್ಷ ಡಾ. ಶರಣಗೌಡ ಪಾಟೀಲ್ ಮಾತನಾಡಿದರು.

ಸ್ವಾಗತ ಜಿಲ್ಲಾ ಗೌರವಾಧ್ಯಕ್ಷ ನಾಮದೇವ್ ಕಡಕೋಳ, ಪ್ರಾರ್ಥನೆ ಗೀತೆ ಶ್ರೀಮತಿ ಸುವರ್ಣ ಬೆಳಗಾವ ನೆರವೇರಿಸಿದರು. ಕಾರ್ಯಕ್ರಮ ನಿರ್ವಹಣೆಯನ್ನು ಜಿಲ್ಲಾ ಸಂಘಟನಾ ಕಾರ್ಯದರ್ಶಿ ರವೀಂದ್ರ ಸಜ್ಜೆ ನೆರವೇರಿಸಿದರು.

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

2 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

2 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

4 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

4 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

4 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

5 hours ago