ಸುರಪುರ:ನಗರದ ಜಮದ್ರಖಾನಿ ಕಾಂಪ್ಲೆಕ್ಸ್ನಲ್ಲಿ ಶುಕ್ರವಾರ ಬಣಜಿಗರ ಪತ್ತಿನ ಸಹಕಾರ ಸಂಘದ ಉದ್ಘಾಟನೆ ಕಾರ್ಯಕ್ರಮ ನಡೆಸಲಾಯಿತು.ಕಾರ್ಯಕ್ರಮದ ಸಾನಿಧ್ಯವನ್ನು ಕಬಾಡಗೇರಾದ ನಿಷ್ಠಿ ಕಡ್ಲೆಪ್ಪನವರ ವಿರಕ್ತ ಮಠದ ಪೂಜ್ಯರಾದ ಶ್ರೀ ಪ್ರಭುಲಿಂಹ ಮಹಾಸ್ವಾಮೀಜಿ ಹಾಗು ಲಕ್ಷ್ಮೀಪುರ ಬಿಜಾಸಪುರದ ಶ್ರೀಗಿರಿ ಮಠದ ಶ್ರೀ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಭಾಗವಹಿಸಿ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸ್ವಾಮೀಜಿಯವರು,ಇಂದು ಪ್ರತಿಯೊಬ್ಬ ವ್ಯಕ್ತಿಗೂ ಕಾಯಕ ಮತ್ತು ಹಣದ ಅವಶ್ಯಕತೆ ತುಂಬಾ ಇರಲಿದೆ,ಇಂತಹ ಸಂದರ್ಭದಲ್ಲಿ ತಾವೆಲ್ಲರು ಜನರಿಗೆ ನೆರವಾಗುವ ಮೂಲಕ ಸ್ವಾಲಂಭಿ ಜೀವನ ನಡೆಸುವವರಿಗೆ ಆಸರೆಯಾಗುವ ಮೂಲಕ ಸಮಾಜದ ಅಭಿವೃಧ್ಧಿಗೆ ಮುಂದೆ ಬಂದಿರುವುದು ಸಂತೋಷದ ಸಂಗತಿಯಾಗಿದೆ.ಈ ಸಂಘವು ಉತ್ತಮವಾಗಿ ವ್ಯವಹಾರವನ್ನು ನಡೆಸಿಕೊಂಡು ಹೋಗುವ ಮೂಲಕ ಉನ್ನತ ಮಟ್ಟಕ್ಕೆ ಬೆಳೆಯಲೆಂದು ಆಶೀರ್ವದಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಬಸವರಾಜಪ್ಪ ನಿಷ್ಠಿ ದೇಶಮುಖ,ಶರಣಪ್ಪ ಕಲಕೇರಿ,ಶಿವು ಸಾಹುಕಾರ ರುಕ್ಮಾಪುರ,ಸೂಗುರೇಶ ಮಡ್ಡಿ,ಶಿವು ಆವಂಟಿ,ಪ್ರಕಾಶ ಅಂಗಡಿ,ಚಂದ್ರಶೇಖರ ಜಮದ್ರಖಾನಿ,ಅಮರೇಶ ದೇಸಾಯಿ,ಶಿವರಾಜ ಕಲಕೇರಿ,ಚಂದ್ರಶೇಖರ ಡೊಣೂರ, ನಾಗಭೂಷಣ ಯಾಳಗಿ,ಜಗದೀಶ ತಂಬಾಕೆ,ಮಲ್ಲಿಕಾರ್ಜುನ ಸುಬೇದಾರ ಸೇರಿದಂತೆ ಅನೇಕರಿದ್ದರು.
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…
ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…
ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್ನ ದಾಸ್ನಾ…
ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…
ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…
ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…