ಮಾಲೂರು: ಓಂ ಶಕ್ತಿ ಮಾತೆಯನ್ನು ಪೂಜಿಸುವುದರಿಂದ ತಾಯಿ ನಮ್ಮ ಸಂಕಷ್ಟವನ್ನು ಪರಿಹರಿಸುತ್ತಾಳೆ ಎಂದು ಓಂ ಶಕ್ತಿಯ ಭಕ್ತರಾದ ನಾಗವೇಣಮ್ಮ ರವರು ತಿಳಿಸಿದರು ಮಾಲೂರು ತಾಲ್ಲೂಕಿನ ಕಸಬಾ ಹೋಬಳಿ ತೊರ್ನಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸುತ್ತಿರುವ ತಾಯಿ ಓಂ ಶಕ್ತಿ ದೇವಾಲಯ ನಿರ್ಮಾಣದ ಗುದ್ದಲಿ ಪೂಜೆಯ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಪ್ರತಿ ವರ್ಷ ನೂರಾರು ಭಕ್ತರು ಶ್ರೀ ಮೇಲ್ ಮರವತ್ತೂರು ದೇವಾಲಯಕ್ಕೆ ಹೋಗಿ ದರ್ಶನ ಪಡೆಯುತ್ತಾರೆ. ಆದರೆ ನಮ್ಮ ತೊರ್ನಹಳ್ಳಿ ಗ್ರಾಮದಲ್ಲಿ ಶಕ್ತಿಗಳು ಕುಳಿತು ಭಜನೆ ಹಾಗೂ ಪೂಜಾ ಕಾರ್ಯಗಳನ್ನು ನಿರ್ವಹಿಸಲು ಸೂಕ್ತ ದೇವಾಲಯದ ಅವಶ್ಯಕತೆಯಿದ್ದು, ಇಂದು ನೂತನ ದೇವಾಲಯ ನಿರ್ಮಾಣಕ್ಕೆ ಗುದ್ದಲಿಪೂಜೆ ನಿರ್ವಹಿಸುತ್ತಿದ್ದೇವೆ, ಶೀಘ್ರದಲ್ಲೇ ದೇವಾಲಯ ನಿರ್ಮಿಸಲಾಗುವುದು ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಗಾಯಿತ್ರಮ್ಮ ನಾಗವೇಣಮ್ಮ, ಯಶೋಧಮ್ಮ, ಗಂಗಮ್ಮ, ಲಕ್ಷ್ಮಿ, ಸುನಂದಮ್ಮ, ಮಂಜಮ್ಮ, ಈರಮ್ಮ, ಶಿಲ್ಪಮ್ಮ, ಸತ್ಯಮ್ಮ ಮತ್ತು ಶ್ರೀ ಓಂ ಶಕ್ತಿ ತಾಯಿಯ ಭಕ್ತಾಧಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…