ಭಾರೀ ಮಳೆಯಿಂದ ರಾಜ್ಯಕ್ಕೆ 12000 ಕೋಟಿ ನಷ್ಟ: ಕೇಂದ್ರದಿಂದ ಕೇಳಿದ್ದು 2000 ಕೋಟಿ ರೂಪಾಯಿ

ಬೆಂಗಳೂರು: ಮುಂಗಾರು ಋತುವಿನಲ್ಲಿ ಜುಲೈ 21ರಿಂದ 26ರವರೆಗೆ ಮತು ್ತ ಅಕ್ಟೋಬರ್ ಹಾಗೂ ನವೆಂಬರ್‌ನಲ್ಲಿ ರಾಜ್ಯದ ಬೆಳಗಾವಿ, ಉತ್ತರ ಕನ್ನಡ, ಹಾಸನ, ಚಿಕ್ಕಮಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಸುರಿದ ಭಾರೀ ಮಳೆಯಿಂದ ಒಟ್ಟು 18,292.27 ಕೋಟಿ ರೂ. ನಷ್ಟವಾಗಿದ್ದರೂ ರಾಜ್ಯ ಬಿಜೆಪಿ ಸರಕಾರವು ಕೇವಲ 2,123.57 ಕೋಟಿ ರೂ. ಅನುದಾನಕ್ಕೆ ಕೇಂದ್ರಕ್ಕೆ ಮನವಿ ಸಲ್ಲಿಸಿದೆ.

ವಿವರ ಪ್ರವಾಹ ಸಂತ್ರಸ್ತರ ಪುನರ್ವಸತಿ ಯೋಜನೆಯಡಿ ಫಲಾನುಭವಿಗಳಿಗೆ ಬಿಡುಗಡೆ ಮಾಡಲು ಮಾರ್ಚ್ ಅಂತ್ಯದವರೆಗೆ 108.00 ಕೋಟಿ ರೂ. (2019-20, 2020-21) ಅನುದಾನ ಬೇಕಿದೆ ಎಂದು ಹೇಳಿರುವ ಕಂದಾಯ ಇಲಾಖೆಯ ಬಳಿ ಸದ್ಯ ಕೇವಲ 41.64 ಕೋಟಿ ರೂ.ಯಷೆಟೀ ಇದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಇಂದು ನಡೆದ ಪ್ರಾದೇಶಿಕ ಆಯುಕ್ತರು, ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್‌ಗಳ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಸಮ್ಮೇಳನ ಸಭೆಯಲ್ಲಿ ಕಂದಾಯ ಇಲಾಖೆಯು ಅತಿವೃಷ್ಟಿ ಮತ್ತು ಪ್ರವಾಹದಿಂದ ಉಂಟಾದ ಅಂದಾಜು ಹಾನಿ ಹಾಗೂ ಪರಿಹಾರ ಕೋರಿ ಕೇಂದ್ರ ಸರಕಾರಕ್ಕೆ ಸಲಿಲಸಿರುವ ಅಂಕಿ ಅಂಶಗಳನ್ನು ಮಂಡಿ ಸಿದೆ. ಈ ವೇಳೆ ಕಂದಾಯ ಇಲಾಖೆಯು (ವಿಪತ್ತು ನಿರ್ವಹಣೆ) ಸಲ್ಲಿಸಿರುವ ಅಂಕಿ ಅಂಶಗಳ ಪ್ರಕಾರ ಅತಿವೃಷ್ಟಿ ಮತ್ತು ಪ್ರವಾಹದಿಂದ ಉಂಟಾಗಿರುವ ಒಟ್ಟು 18, 292.27 ಕೋಟಿ ರೂ.ನಷ್ಟಕ್ಕೆ ರಾಜ್ಯ ಸರಕಾರವು 2,123.57 ಕೋಟಿ ಮೊತ್ತವನ್ನು ಪರಿಹಾರ ರೂಪದಲ್ಲಿ ಕೇಂದ್ರಕ್ಕೆ ಮನವಿ ಸಲ್ಲಿಸಿರುವುದು ಗೊತ್ತಾಗಿದೆ.

ಪ್ರವಾಹ ಸಂತ್ರಸ್ತರ ಪುನರ್ವಸತಿ ಯೋಜನೆಯಡಿ ಒಟ್ಟು ಫಲಾನುಭವಿಗಳಿಗೆ ಮಾರ್ಚ್ ಅಂತ್ಯದವರೆಗೆ ಬಿಡುಗಡೆ ಮಾಡಲು ಒಟ್ಟು 108.00 ಕೋಟಿ ರೂ.ಅನುದಾನ ಬೇಕಿದೆ. 2019-20 (2,200.27 ಕೋಟಿ ರೂ.) ಮತ್ತು 2020-21ನೇ ಸಾಲಿಗೆ (571.68 ಕೋಟಿ ರೂ.) ಒಟ್ಟು 2,771.95 ಕೋಟಿ ರೂ. ಎಂದು ಅಂದಾಜಿಸಲಾಗಿತ್ತು. ಈ ಪೈಕಿ 1,849.59 ಕೋಟಿ ರೂ. ಬಿಡುಗಡೆಯಾಗಿದೆ. ಇನ್ನೂ 922.36 ಕೋಟಿ ರೂ. ಬಿಡುಗಡೆಗೆ ಬಾಕಿ ಉಳಿಸಿಕೊಂಡಿದೆ. ಬಿಡುಗಡೆಯಾಗಿರುವ ಒಟ್ಟು ಮೊತ್ತದಲ್ಲಿ 2,207.97 ಕೋಟಿ ರೂ.ಖರ್ಚಾಗಿದೆ. ಸದ್ಯ ಈ ಲೆಕ್ಕ ಶೀರ್ಷಿಕೆಯಲ್ಲಿ 41.64 ಕೋಟಿ ರೂ.ಯಷ್ಟೇ ಇದೆ ಎಂಬ ಮಾಹಿತಿಯು ಭೆಯ ನಡವಳಿಯಿಂದ ತಿಳಿದು ಬಂದಿದೆ.

ಪ್ರವಾಹ ಸಂತ್ರಸ್ತರ ಪುನರ್ವಸತಿ ಯೋಜನೆಯಡಿ ಅವಶ್ಯಕತೆ ಇರುವ ಅನುದಾನದ ವಿವರ —

ಪ್ರಸಕ್ತ ಸಾಲಿನ ಪ್ರವಾಹದಿಂದ ಉತ್ತರ ಕನ್ನಡದಲ್ಲಿ ಅತಿ ಹೆಚ್ಚು 828.82 ಕೋಟಿ ರೂ.ಯಷ್ಟು ಮೂಲ ಸೌಕರ್ಯಗಳಿಗೆ ಹಾನಿಯಾಗಿದೆ. ಹಾವೇರಿಯಲ್ಲಿ 686.26 ಕೋಟಿ ರೂ., ಬೆಳಗಾವಿಯಲ್ಲಿ 647.79 ಕೋಟಿ ರೂ., ಶಿವಮೊಗ್ಗ ಜಿಲ್ಲೆಯಲ್ಲಿ 536.43 ಕೋಟಿ ರೂ., ಬೆಂಗಳೂರು ನಗರ ಜಿಲ್ಲೆಯಲ್ಲಿ 515.03 ಕೋಟಿ ರೂ.ಯಷ್ಟು ಹಾನಿಯುಂಟಾಗಿದೆ.

ಮುಂಗಾರು ಋತುವಿನಲ್ಲಿ ಜುಲೈ 21ರಿಂದ 26ವರೆಗೆ ರಾಜ್ಯದ ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನ, ಹಾವೇರಿ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ಭಾರೀ ಪ್ರಮಾಣದಲ್ಲಿ ಬೆಳೆಹಾನಿ, ಮನೆ ಹಾಗೂ ಮೂಲಭೂತ ಸೌಕರ್ಯಕ್ಕೆ ಹಾನಿಯುಂಟಾಗಿತ್ತು.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸುರಿದ ಮಳೆಯಿಂದಾಗಿ ಉಂಟಾದ ಅತಿವೃಷ್ಟಿ ಮತ್ತು ಪ್ರವಾಹದಿಂದ ಒಟ್ಟು 11,916 ಕೋಟಿ ರೂ.ಯಷ್ಟು ನಷ್ಟವಾಗಿದೆ ಎಂದು ಕಂದಾಯ ಇಲಾಖೆಯು ಅಂದಾಜಿಸಿದೆ.

ಆದರೆ ರಾಜ್ಯ ಸರಕಾರವು ಕೇಂದ್ರ ಸರಕಾರದ ಎಸ್‌ಡಿಆರ್‌ಎಫ್ ಮಾರ್ಗಸೂಚಿ ಅನ್ವಯ 1,282 ಕೋಟಿ ರೂ. ಅನುದಾನ ಕೋರಿ ಸೆಪ್ಟಂಬರ್‌ನಲ್ಲಿ ಮನವಿ ಸಲ್ಲಿಸಿರುವುದು ಸಭೆಯ ನಡವಳಿಯಿಂದ ತಿಳಿದು ಬಂದಿ ದೆ. ಇದೇ ಅವಧಿಯಲ್ಲಿ ಮಹಾರಾಷ್ಟ್ರ ಜಲಾಶಯಗಳಿಂದ ಹರಿಸಿದ ಭಾರೀ ಪ್ರಮಾಣದ ನೀರಿನಿಂದ ರಾಜ್ಯದ ಕೃಷ್ಣಾ ನದಿ ಹಾಗೂ ಇದರ ಉಪ ನದಿಗಳಲ್ಲ್ಲಿ ಉಂಟಾದ ಪ್ರವಾಹದಿಂದ ಈ ಭಾಗದ ಎಲ್ಲಾ ಜಿಲ್ಲೆಗಳಲ್ಲಿ ಭಾರೀ ಪ್ರಮಾಣದಲ್ಲಿ ಬೆಳೆ, ಮನೆ ಹಾಗೂ ಮೂಲಭೂತ ಸೌಕರ್ಯಕ್ಕೆ ಹಾನಿಯಾಗಿದೆ. ಈ ಭಾಗದಲ್ಲಿ ಅತಿವೃಷ್ಟಿ ಮತ್ತು ಪ್ರವಾಹದಿಂದ ಅಂದಾಜು 6,376.27 ಕೋಟಿ ರೂ. ನಷ್ಟವಾಗಿದೆ ಎಂದು ಲೆಕ್ಕಚಾರ ಮಾಡಿರುವ ರಾಜ್ಯ ಸರಕಾರವು ಕೇಂದ್ರ ಸರಕಾರಕ್ಕೆ ಕೇವಲ 841.57 ಕೋಟಿ ರೂ.ಅನುದಾನ ಒದಗಿಸುವಂತೆ ಕೋರಿಕೆ ಸಲ್ಲಿಸಿದೆ.

2021ನೇ ಸಾಲಿನಲ್ಲಿ ನೆರ ಹಾವಳಿಯಿಂದ ರಾಜ್ಯದ 30 ಜಿಲ್ಲೆಗಳಲ್ಲಿ ಒಟ್ಟು 53,331 ಮನೆಗಳಿಗೆ ಹಾನಿಯುಂಟಾಗಿದೆ ಎಂದು ತಹಶೀಲ್ದಾರ್‌ಗಳು ವರದಿ ಸಲ್ಲಿಸಿದ್ದರ ಪೈಕಿ ಜಿಲ್ಲಾಧಿಕಾರಿಗಳು 45,548 ಮನೆಗಳಿಗಷ್ಟೇ ಹಾನಿಯಾಗಿದೆ ಎಂದು ಅನುಮೋದಿಸಿದ್ದಾರೆ. ಜಿಲ್ಲಾಧಿಕಾರಿಗಳ ಹಂತದಲ್ಲೇ ಇನ್ನೂ 7,783 ಪ್ರಕರಣಗಳಿಗೆ ಅನುಮೋದನೆ ಬಾಕಿ ಇದೆ. ಒಟ್ಟು ನಮೂದಾಗಿರುವ ಮನೆಗಳಿಗೆ ಜಿಲ್ಲಾಧಿಕಾರಿಗಳು 268.26 ಕೋಟಿ ರೂ.ಅನುದಾನ ಬಿಡುಗಡೆ ಮಾಡಿದ್ದಾರೆ. ಇನ್ನೂ 390.72 ಕೋಟಿ ರೂ.ಯನ್ನು ಜಿಲ್ಲಾಧಿಕಾರಿಗಳು ಬಿಡುಗಡೆ ಮಾಡಬೇಕಿದೆ. ಬಿಡುಗಡೆ ಮಾಡಿರುವ ಒಟ್ಟು ಅನುದಾನದಲ್ಲಿ ಶೇ. 69ರಷ್ಟು ಪ್ರಗತಿಯಾಗಿದೆ ಎಂಬುದು ನಡವಳಿಯಿಂದ ಗೊತ್ತಾಗಿದೆ.

ಕಲಬುರಗಿಯಲ್ಲಿ 190 ಮನೆ, ರಾಮನಗರದಲ್ಲಿ 487, ಬೆಂಗಳೂರು ನಗರದಲ್ಲಿ 471, ತುಮಕೂರಿನಲ್ಲಿ 1,687 ಮನೆಗಳನ್ನು ತಹಶೀಲ್ದಾರ್‌ಗಳು ನಮೂದಿಸಿದ್ದಾರಾದರೂ ಈ ಪೈಕಿ ಜಿಲ್ಲಾಧಿಕಾರಿಗಳು ಒಂದಕ್ಕೂ ಅನುಮೋದನೆ ನೀಡಿಲ್ಲ. ಇವಿಷ್ಟು ಡಿಸೆಂಬರ್ 30ರ ಅಂತ್ಯಕ್ಕೆ ಅನುಮೋದನೆಗೆ ಬಾಕಿ ಇರುವುದು ತಿಳಿದು ಬಂದಿದೆ.

ಇನ್ನು 2019ನೇ ಸಾಲಿನಲ್ಲಿ ಂಪೂರ್ಣ, ಭಾಗಶಃ ಪುನರ್ ನಿರ್ಮಾಣ, ಭಾಗಶಃ ದುರಸ್ತಿಗೆ ಹಾನಿಗೊಳಗಾದ ಮನೆಗಳಿಗೆ ಸಂಬಂಧಿಸಿದಂತೆ 39,613 ಪ್ರಕರಣಗಳಿಗೆ ಅನುಮೋದನೆ ದೊರೆತಿದೆ. ಈ ಪೈಕಿ 20,858 ಮನೆಗಳು ಪೂರ್ಣಗೊಂಡಿದ್ದರೆ 12,447 ಮನೆಗಳು ಇನ್ನೂ ಪ್ರಗತಿಯಲ್ಲಿವೆ. ಇನ್ನೂ 3,968 ಮನೆಗಳ ಕಾಮಗಾರಿ ಪ್ರಾರಂಭವಾಗಬೇಕಿದೆ. 2020ನೇ ಸಾಲಿನಲ್ಲಿಯೂ ಒಟ್ಟು 8,321 ಮನೆಗಳಿಗೆ ಅನುಮೋದನೆ ನೀಡಿದ್ದರೆ ಈ ಪೈಕಿ 660 ಮನೆಗಳಷ್ಟೇ ಪೂರ್ಣಗೊಂಡಿದೆ. 5,036 ಮನೆಗಳ ಕಾಮಗಾರಿ ಪ್ರಗತಿಯಲ್ಲಿವೆ. 2,618 ಮನೆಗಳ ಕಾಮಗಾರಿ ಇನ್ನಷ್ಟೇ ಆರಂಭವಾಗಬೇಕಿದೆ ಎಂದು ಕಂದಾಯ ಇಲಾಖೆಯು ಸಲ್ಲಿಸಿರು ಮಾಹಿತಿಯಿಂದ ಗೊತ್ತಾಗಿದೆ.

emedialine

Recent Posts

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

2 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

8 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

19 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

20 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

20 hours ago

ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿ; ಮತ್ತಿಮಡು

ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…

20 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420